ಮಂಕುಬೂದಿ ಎರಚಿ ಮಹಿಳೆ ಮಾಂಗಲ್ಯ ಸರ ಎಗರಿಸಿದ


Team Udayavani, Oct 2, 2022, 6:50 AM IST

ಮಂಕುಬೂದಿ ಎರಚಿ ಮಹಿಳೆ ಮಾಂಗಲ್ಯ ಸರ ಎಗರಿಸಿದ

ಉಪ್ಪಿನಂಗಡಿ: ಚಿನ್ನಾಭರಣದ ಅಂಗಡಿ ತೆರೆಯುತ್ತಿದ್ದೇವೆ. ಆಶೀರ್ವಾದ ಮಾಡಿ ಎಂದು ನಂಬಿಸಿ ಮಂಕುಬೂದಿ ಎರಚಿ ಅರ್ಚಕರ ಪತ್ನಿಯ ಕತ್ತಿನಲ್ಲಿದ್ದ ಮೂರೂವರೆ ಪವನ್‌ ತೂಕದ ಚಿನ್ನದ ಮಾಂಗಲ್ಯ ಸರವನ್ನು ಹಾಡಹಗಲೇ ಎಗರಿಸಿದ ಘಟನೆ ಉಪ್ಪಿನಂಗಡಿಯಲ್ಲಿ ಸಂಭವಿಸಿದೆ.

ಉಪ್ಪಿನಂಗಡಿಯ ರಥಬೀದಿಯಲ್ಲಿರುವ ದೇಗುಲಕ್ಕೆ ಹೋಗುವ ದಾರಿಯಲ್ಲಿನ ಅರ್ಚಕರ ಮನೆ ಬಾಗಿಲಿಗೆ ಬಂದ ವ್ಯಕ್ತಿಯೋರ್ವ ಮನೆಯಲ್ಲಿದ್ದ ಅರ್ಚಕರ ಪತ್ನಿಯಲ್ಲಿ ತನಗೆ ಸೂತಕವಿರುವುದರಿಂದ ದೇಗುಲಕ್ಕೆ ಹೋಗಲಾಗುವುದಿಲ್ಲ. ದೇವರಿಗೆ ಹರಕೆ ರೂಪದಲ್ಲಿ ತನ್ನ ಪರವಾಗಿ ಮುನ್ನೂರು ರೂಪಾಯಿ ಸಲ್ಲಿಸಿ ಎಂದು ತಲಾ 100 ರೂ.ಯ 3 ನೋಟುಗಳನ್ನು ನೀಡಿದ್ದ. ಬಳಿಕ ಅದರಲ್ಲಿ ಒಂದು ನೋಟನ್ನು ವಾಪಸು ಪಡೆದು ಆ ನೋಟನ್ನು ಮತ್ತೆ ಅವರ ಕೈಗಿತ್ತು ನಿಮ್ಮ ಮಾಂಗಲ್ಯ ಸರವನ್ನು ಅದಕ್ಕೆ ಸ್ಪರ್ಶಿಸಿ ಹಣವನ್ನು ಹಿಂದಿರುಗಿಸಲು ಹೇಳಿದ್ದ.

ಮಹಿಳೆ ಪ್ರಶ್ನಿಸಿದ್ದರು
ಈ ವೇಳೆ ನನ್ನ ಮಾಂಗಲ್ಯ ಸರವನ್ನು ನಿಮ್ಮ ನೋಟಿಗೆ ಯಾಕೆ ಸ್ಪರ್ಶಿಸಬೇಕು ಎಂದು ಅರ್ಚಕರ ಪತ್ನಿ ಪ್ರಶ್ನಿಸಿದ್ದರು. ಅದಕ್ಕೆ ನಾನು ಊರಿನಲ್ಲಿ ಚಿನ್ನಾಭರಣದ ಅಂಗಡಿಯನ್ನು ತೆರೆಯಲಿದ್ದೇನೆ. ಪತಿವ್ರತ ಮಹಿಳೆಯ ಮಾಂಗಲ್ಯ ಸರವನ್ನು ಸ್ಪರ್ಶಿಸಿದ ಹಣವನ್ನು ಅಂಗಡಿಯೊಳಗಿರಿಸಲು ಜೋತಿಷಿ ಸೂಚಿಸಿದ್ದಾರೆ. ಅದಕ್ಕಾಗಿ ನಿಮ್ಮ ಮಾಂಗಲ್ಯ ಸರವನ್ನು ಈ ನೋಟಿಗೆ ಸ್ಪರ್ಶಿಸಿ ನೀಡಿ ಎಂದು ಹೇಳಿದ್ದ.

ಇದನ್ನು ನಂಬಿದ ಮಹಿಳೆ ತನ್ನ ಮಾಂಗಲ್ಯವನ್ನು ಹಣಕ್ಕೆ ಸ್ಪರ್ಶಿಸಿದಾಗ, ಆ ರೀತಿಯಲ್ಲ. ಮಾಂಗಲ್ಯ ಸರವನ್ನು ಸಂಪೂರ್ಣ ತೆಗೆದು ಅದನ್ನು ನೋಟಿನಲ್ಲಿಟ್ಟು ಕೊಡಿ ಎಂದು ತಿಳಿಸಿದಾಗ ಮಹಿಳೆಯು ಅದೇ ರೀತಿ ಮಾಡಿ ನೋಟನ್ನು ಆತನ ಕೈಗೆ ನೀಡಿದ್ದರು.

ಏನಾಗುತ್ತಿದೆ ಎನ್ನುಷ್ಟರಲ್ಲಿ ಆ ವ್ಯಕ್ತಿ ಹೋಗಿಯಾಗಿತ್ತು. ಒಂದಷ್ಟು ಹೊತ್ತು ಕಳೆದ ಮೇಲೆ ವಾಸ್ತವ ಸ್ಥಿತಿಗೆ ಬಂದ ಮಹಿಳೆ ತನ್ನ ಮಾಂಗಲ್ಯ ಸರ ಕೊರಳಲ್ಲಿ ಇಲ್ಲದಿರುವುದನ್ನು ಕಂಡು ಬೊಬ್ಬೆ ಹೊಡೆದಾಗ ಅಪರಿಚಿತ ವ್ಯಕ್ತಿಯೋರ್ವ ತನಗೆ ಮಂಕುಬೂದಿ ಎರಚಿ ಮಾಂಗಲ್ಯ ಸರ ಎಗರಿಸಿರುವುದು ಬೆಳಕಿಗೆ ಬಂದಿತ್ತು.

ಠಾಣೆಯ ಸಮೀಪದಲ್ಲೇ ಘಟನೆ
ಪೊಲೀಸ್‌ ಠಾಣೆಗೆ ಕೂಗಳತೆಯ ದೂರದಲ್ಲಿ ನಡೆದ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಸ್ಥಳದಲ್ಲಿನ ಸಿಸಿ ಕೆಮರಾಗಳ ಆಧಾರದಲ್ಲಿ ಮಹತ್ವದ ಮಾಹಿತಿಯನ್ನು ಕಲೆ ಹಾಕಿದ್ದು, ವಂಚಕರನ್ನು ಪತ್ತೆ ಹಚ್ಚುವ ವಿಶ್ವಾಸವನ್ನು ಎಸ್ಸೆ„ ರಾಜೇಶ್‌ ಕೆ. ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.