ಉಪ್ಪಿನಂಗಡಿಯಲ್ಲಿ ಸಹೋದರರ ಅಪಹರಣ ಪ್ರಕರಣ: ಹಣಕ್ಕಾಗಿ ತಮ್ಮನ ಒತ್ತೆ; ಅಣ್ಣ ಮನೆಗೆ


Team Udayavani, Jan 21, 2023, 7:50 AM IST

kasaragod

ಉಪ್ಪಿನಂಗಡಿ : ವಿದೇಶದಿಂದ ಬಂದವರಿಂದ ಹಣವನ್ನು ಕಬಳಿಸುವ ಸಲುವಾಗಿ ಸಹೋದರರಿಬ್ಬರನ್ನು ಅಪಹರಿಸಿ ಹಲ್ಲೆ ನಡೆಸಿದ ದುಷ್ಕರ್ಮಿಗಳು ಅವರಲ್ಲಿ ತಮ್ಮನನ್ನು ಒತ್ತೆ ಇರಿಸಿಕೊಂಡು ಹಣ ತರುವಂತೆ ಬೇಡಿಕೆಯಿಟ್ಟು ಅಣ್ಣನನ್ನು ಮನೆಗೆ ಕಳುಹಿಸಿದ ಬಗ್ಗೆ ಉಪ್ಪಿನಂಗಡಿ  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ಕೊçಲದ ಕೆ.ಸಿ. ಫಾರ್ಮ್ ಬಳಿಯ ನಿಜಾಮುದ್ದೀನ್‌ ಅವರು ಆರೋಪಿ ಗಳಾದ ಸಿದ್ದಿಕ್‌ ಜೆಸಿಬಿ ಕರುವೇಲು, ಇರ್ಷಾದ್‌ ಮಠ, ಶಾಫಿ ಗಡಿಯಾರ, ಅನ್ಸಾರ್‌ ಕೆಮ್ಮಾರ ಹಾಗೂ ಇತರರ ಮೇಲೆ ದೂರು ನೀಡಿದ್ದಾರೆ.

ಗುರುವಾರ ನಿಜಾಮುದ್ದೀನ್‌ ಅವರಿಗೆ ಪರಿಚಯದ ಸಿದ್ದಿಕ್‌ ಕರೆ ಮಾಡಿ ಕೆಲಸವಿದೆ. ನೀನು ಗಾಂಧಿಪಾರ್ಕ್‌ಗೆ ಬಾ ಎಂದು ತಿಳಿಸಿದ್ದ. ಅದರಂತೆ ಅಲ್ಲಿಗೆ ತೆರಳಿದಾಗ ಅಲ್ಲಿ ಪರಿಚಯದ ಅನ್ಸಾರ್‌ ಕೆಮ್ಮಾರ ಎಂಬವರ ಕಾರಿನಲ್ಲಿ ಸಿದ್ದಿಕ್‌ ಜೆಸಿಬಿ ಕರುವೇಲು, ಶಾಫಿ ಗಡಿಯಾರ, ಇರ್ಷಾದ್‌ ಮಠ ಎಂಬವರಿದ್ದು, ಪೆರ್ನೆ ಕಡೆ ಕೆಲಸಕ್ಕೆ ಹೋಗುವ ಎಂದು ನಿಜಾಮುದ್ದೀನ್‌ ಅವರನ್ನು ಕಾರಿನಲ್ಲಿ ಕುಳ್ಳಿರಿಸಿ ತೆರಳಿದ್ದರು. ದಾರಿ ಮಧ್ಯೆ ಅಪರಿಚಿತ ವ್ಯಕ್ತಿಯೋರ್ವ ಕಾರು ಹತ್ತಿದ್ದು, ಮಲ್ಲೂರಲ್ಲಿ ಕಾರನ್ನು ನಿಲ್ಲಿಸಿ ಮನೆಯೊಳಗೆ ನಿಜಾಮುದ್ದೀನ್‌ ಅವರೊಂದಿಗೆ ಹೋದರು. ಮನೆಯಲ್ಲಿದ್ದ ಅಪರಿಚಿತರೆಲ್ಲ ನಿಜಾಮುದ್ದೀನ್‌ರಲ್ಲಿ ವಿದೇಶದಿಂದ ಬಂದ ನಿನ್ನ ತಮ್ಮ ಶಾರೂಕ್‌ ಎಲ್ಲಿದ್ದಾನೆ? ಎಂದು ಕೇಳಿದ್ದಲ್ಲದೆ, ದೊಣ್ಣೆಯಿಂದ ಹಲ್ಲೆ ನಡೆಸಿದ್ದರು. ಅವರ ಮೊಬೈಲ್‌  ಕಿತ್ತುಕೊಂಡು ತಮ್ಮ ಶಾರೂಕ್‌ಗೆ ಕರೆ ಮಾಡಿ ಕಡಂಬು ಎಂಬಲ್ಲಿಗೆ ಬರಲು ಹೇಳಿದರು.

ನಿಜಾಮುದ್ದೀನ್‌ ಅವರನ್ನು ಕಡಂಬುಗೆ ಕರೆದುಕೊಂಡು ಬಂದಿದ್ದರು. ಆಗ ಅಲ್ಲಿಗೆ ಬಂದ ಶಾರೂಕ್‌ ಹಾಗೂ ಆತನ ಜತೆಗಿದ್ದ ಫೈಝಲ್‌ ಎಂಬವರನ್ನು ಕಾರಿನಲ್ಲಿ ಕುಳ್ಳಿರಿಸಿ, ಮತ್ತೆ ಮಲ್ಲೂರಿನ ಮನೆಗೆ ಕರೆದುಕೊಂಡು ಹೋಗಿ ಶಾರೂಕ್‌ ನಿಗೂ ಹಲ್ಲೆ ನಡೆಸಿದ್ದರು. ಬಳಿಕ ಶಾರೂಕ್‌ನನ್ನು ಒತ್ತೆ ಇರಿಸಿಕೊಂಡ ಆರೋಪಿಗಳು ನಿಜಾಮುದ್ದೀನ್‌ರಲ್ಲಿ 4 ಲಕ್ಷ ರೂ. ಹಣ ತಂದರೆ ಮಾತ್ರ ನಿನ್ನ ತಮ್ಮನನ್ನು ಬಿಡುತ್ತೇವೆ ಎಂದು ಹೇಳಿ ಆರೋಪಿ ಅನ್ಸಾರ್‌ ಕೆಮ್ಮಾರನ ಕಾರಿನಲ್ಲಿ ನಿಜಾಮುದ್ದೀನ್‌ ಹಾಗೂ ಫೈಝಲ್‌ನನ್ನು ಮನೆಗೆ ಕಳುಹಿಸಿದ್ದರು. ಮನೆ ತಲುಪಿದ ನಿಜಾಮುದ್ದೀನ್‌ ನಡೆದ ಘಟನೆಯನ್ನು ತಾಯಿಯಲ್ಲಿ ಹೇಳಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಜ.20ರಂದು ಈ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಆರೋಪಿಗಳು ಹಣ ಸುಲಿಗೆ ಮಾಡುವ ಉದ್ದೇಶದಿಂದ ತಮ್ಮನ್ನು ಅಪಹರಿಸಿ, ಹಲ್ಲೆ ನಡೆಸಿದ್ದು, ತಮ್ಮನನ್ನು ಒತ್ತೆ ಇರಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪ್ರಕರಣವನ್ನು ಪೊಲೀಸ್‌ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ಒತ್ತೆಯಾಳುವಿನ ಪತ್ತೆಗೆ ಕಾರ್ಯಾ ಚರಣೆ ನಡೆಯುತ್ತಿದೆ.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.