ಆಗಸ್ಟ್‌ನೊಳಗೆ ಪುತ್ತೂರು ವಿಭಾಗಕ್ಕೆ ನಗರ ಸಾರಿಗೆ ಬಸ್‌


Team Udayavani, Jul 16, 2017, 3:20 AM IST

1507kpk3.gif

ಸುಳ್ಯ: ಕಡಬ ತಾಲೂಕಿಗೆ ಸುಸಜ್ಜಿತ ಬಸ್‌ ನಿಲ್ದಾಣ ಹಾಗೂ ನೆಲ್ಯಾಡಿ ಬಸ್‌ ನಿಲ್ದಾಣದ ಸದ್ಬಳಕೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಹಾಗೂ ಶಾಸಕ ಎಸ್‌. ಅಂಗಾರ ಅವರ ಬೇಡಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಂದಿಸುವ ಭರವಸೆ ನೀಡಿದ್ದಾರೆ.

ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗ ವ್ಯಾಪ್ತಿಯ ಸುಳ್ಯದಲ್ಲಿ 3.5 ಕೋ.ರೂ.ವೆಚ್ಚದ ನೂತನ ಘಟಕ ಉದ್ಘಾಟನೆ ಸಮಾ ರಂಭದಲ್ಲಿ ಅವರು ಮಾತನಾಡಿದರು. ಸಭಾ ಕಾರ್ಯಕ್ರಮದಲ್ಲಿ ವಿಷಯ ಪ್ರಸ್ತಾಪಿಸಿದ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ, ಕಡಬ ತಾಲೂಕು ಕೇಂದ್ರವಾಗಿ ಘೋಷಣೆಯಾಗಿದ್ದು, ಅಲ್ಲಿಗೆ ಹೊಸ ಬಸ್‌ ನಿಲ್ದಾಣ, ನೆಲ್ಯಾಡಿಯಲ್ಲಿ ಬಸ್‌ ನಿಲ್ದಾಣ ಇದ್ದು, ಕೆಎಸ್‌ಆರ್‌ಟಿಸಿ ಬಸ್‌ ಪ್ರವೇಶ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಉತ್ತರಿಸಿದ ಸಾರಿಗೆ ಸಚಿವರು, ಈ ಸರಕಾರ ಅವಧಿ ಮುಗಿಯುವ ಮೊದಲು ಬೇಡಿಕೆ ಈಡೇರಿಕೆಗೆ ಕ್ರಮ ಕೈಗೊಳ್ಳುವು ದಾಗಿ ಭರವಸೆ ನೀಡಿದರು. ಸುಳ್ಯ ಶಾಸಕರ ಬೇಡಿಕೆಯಂತೆ ಸುಳ್ಯ ಘಟಕದ ಕಾಂಕ್ರೀಟ್‌ಗೆ ಅನುದಾನ ಒದಗಿಸಲಾಗುವುದು. ಸುಳ್ಯ ಬಸ್‌ ನಿಲ್ದಾಣ ವಿಸ್ತರಣೆಗೆ ಕ್ರಮ ಕೈಗೊಳ್ಳ ಲಾಗುವುದು. ಅದಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆ ಆಗಲಿ. ಅನಂತರ ಅನುದಾನ ಒದಗಿಸುವುದಾಗಿ ಅವರು ನುಡಿದರು.

ಆಗಸ್ಟ್‌ನಲ್ಲಿ ಪುತ್ತೂರಿಗೆ 
ನಗರ ಸಾರಿಗೆ ಬಸ್‌

ಪುತ್ತೂರು ವಿಭಾಗ ಕೇಂದ್ರಕ್ಕೆ ನಗರ ಸಾರಿಗೆ ಬಸ್‌ ಬಾರದಿರುವ ಬಗ್ಗೆ ಉಲ್ಲೇಖೀಸಿದ ಸಚಿವರು, ಬಿಎಸ್‌3, ಬಿಎಸ್‌4 ನಿಯಮದಿಂದ ಬಸ್‌ ಬರಲು ವಿಳಂಬವಾಗಿದೆ. ಆಗಸ್ಟ್‌ ಕೊನೆ ಯೊಳಗೆ ಇಲ್ಲಿಗೆ ನಗರ ಸಾರಿಗೆ ಬಸ್‌ ಒದಗಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ಮೈಸೂರು-ಧರ್ಮಸ್ಥಳ ಸಂಪರ್ಕಕ್ಕೆ ಶಾಂತಿಮೊಗರಿನಲ್ಲಿ ಸೇತುವೆ ನಿರ್ಮಾಣ ವಾಗಿದ್ದು, ಇದರಿಂದ ಸಂಚಾರದಲ್ಲಿ 50 ಕಿ.ಮೀ. ದೂರ ಉಳಿತಾಯವಾಗಲಿದೆ. ಈ ಮಾರ್ಗದಲ್ಲಿ ಓಡಾಟಕ್ಕೆ ಬಸ್‌ ವ್ಯವಸ್ಥೆ ಮಾಡುವಂತೆ ಶಾಸಕ ಅಂಗಾರ ಅವರ ಪ್ರಸ್ತಾವನೆಗೆ, ಸಚಿವರು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಈ ಬಗ್ಗೆ ಉದಯವಾಣಿ ಸುದಿನ ಶನಿವಾರ ವರದಿ ಪ್ರಕಟಿಸಿತ್ತು.

ಸುಬ್ರಹ್ಮಣ್ಯಕ್ಕೆ ಹೊಸ ಘಟಕ
ಕ.ರಾ.ರ.ಸಾ. ನಿಗಮ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಮಾತನಾಡಿ, ಸುಬ್ರಹ್ಮಣ್ಯಕ್ಕೆ ನೂತನ ಬಸ್‌ ಘಟಕ ನಿರ್ಮಿಸುವ ಪ್ರಸ್ತಾಪವಿದ್ದು, ಅಲ್ಲಿ ಜಾಗದ ಕೊರತೆ ಎದುರಾಗಿದೆ. ಅರಣ್ಯ ಸಚಿವರಿಗೆ ಮನವಿ ಮಾಡಲಾಗಿದ್ದು, ಅವರು ಜಾಗದ ವ್ಯವಸ್ಥೆ ಮಾಡಿಕೊಟ್ಟ ತತ್‌ಕ್ಷಣವೇ ಅಲ್ಲಿ ಘಟಕ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದರು.ಈ ವರ್ಷದ ಡಿಸೆಂಬರ್‌ಗೆ ಮೊದಲು ಕಡಬ, ಕಾರ್ಕಳ, ಬೈಂದೂರಿನಲ್ಲಿ ಹೊಸ ಬಸ್‌ ನಿಲ್ದಾಣ ಹಾಗೂ ಘಟಕ ನಿರ್ಮಾಣದ ಪ್ರಕ್ರಿಯೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ವಿವಿಧ ಕಾಮಗಾರಿ ಉದ್ಘಾಟನೆ
ಇದೇ ಸಂದರ್ಭ 1 ಕೋ.ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ 11 ವಸತಿ ಗೃಹಕ್ಕೆ ಸಚಿವ ರಮಾನಾಥ ರೈ ಶಿಲಾನ್ಯಾಸ ನೆರವೇರಿಸಿದರು. ಐದು ಹೊಸ ರೂಟ್‌ಗಳಲ್ಲಿ ಸಂಚರಿಸುವ ಬಸ್‌ಗಳನ್ನು ಶಾಸಕ ಅಂಗಾರ, ಶಕುಂತಳಾ ಟಿ. ಶೆಟ್ಟಿ ಹಾಗೂ ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಉದ್ಘಾಟಿಸಿದರು. ಕೇರಳ ಚೆಂಡೆ ವಾದನದ ಮೂಲಕ ಅತಿಥಿಗಳನ್ನು ಸ್ವಾಗತಿಸಲಾಯಿತು.

ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿ ಗೋಡು, ಶಾಸಕಿ ಶಕುಂತಳಾ ಟಿ ಶೆಟ್ಟಿ, ಸುಳ್ಯ ನ.ಪಂ.ಅಧ್ಯಕ್ಷೆ ಶೀಲಾವತಿ ಮಾಧವ, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ವಾರ್ಡ್‌ ಸದಸ್ಯ ಎನ್‌.ಎ. ರಾಮಚಂದ್ರ, ಜಿ.ಪಂ. ಸದಸ್ಯರಾದ ಎಸ್‌.ಎನ್‌. ಮನ್ಮಥ, ಪುಷ್ಪಲತಾ ಬಾಳಿಲ, ಹರೀಶ್‌ ಕಂಜಿಪಿಲಿ, ಪಿ.ಪಿ. ವರ್ಗಿಸ್‌, ಪ್ರಮೀಳಾ ಜನಾರ್ದನ, ಮಂಡಳಿ ನಿರ್ದೇಶಕರಾದ ರಮೇಶ್‌ ಶೆಟ್ಟಿ, ಟಿ.ಕೆ. ಸುಧೀರ್‌. ಶೌಕತ್‌ ಆಲಿ, ಸಾರಿಗೆ ಇಲಾಖೆಯ ಜಗದೀಶ್ಚಂದ್ರ, ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ ನಾಗರಾಜ ಶಿರಾಲಿ 
ಮೊದಲಾದವರು ಉಪಸ್ಥಿತರಿದ್ದರು.

ಉಮೇಶ್‌ ವಾಗ್ಲೆಗೆ ಶ್ಲಾಘನೆ
ನೂತನ ಬಸ್‌ ಘಟಕ ಹಾಗೂ ಬಸ್‌ ನಿಲ್ದಾಣ ನಿರ್ಮಾಣಕ್ಕೆ ಸ್ಥಳದ ಕಾನೂನು ಹೋರಾಟಕ್ಕೆ ಸಂಬಂಧಿಸಿ ಹತ್ತಾರು ವರ್ಷಗಳಿಂದ ಯಾರಿಂದಲೂ ಫಲಾಪೇಕ್ಷೆ ಬಯಸದೆ ಹೋರಾಟ ನಡೆಸಿ ಯಶಸ್ವಿಯಾದ ಉಮೇಶ್‌ ವಾಗ್ಲೆ ಅವರ ಶ್ರಮವನ್ನು ಶಾಸಕ ಎಸ್‌. ಅಂಗಾರ ಉಲ್ಲೇಖೀಸಿದರು. ಸಚಿವ ರಾಮಲಿಂಗಾ ರೆಡ್ಡಿ ತನ್ನ ಭಾಷಣದಲ್ಲಿ ಈ ವಿಷಯ ಪ್ರಸ್ತಾಪಿಸಿ, ಉಮೇಶ್‌ ವಾಗ್ಲೆ ಅವರ ಕಾರ್ಯವನ್ನು ಶ್ಲಾಘಿಸಿದರು. ಸಮಾರಂಭದಲ್ಲಿ ಉಮೇಶ್‌ ವಾಗ್ಲೆ ಅವರನ್ನು ಸಚಿವರು ಸಮ್ಮಾನಿಸಿದರು. ಉತ್ತಮ ಕಾಮಗಾರಿ ನಿರ್ವಹಿಸಿದ ಗುತ್ತಿಗೆದಾರ ಸುಧೀರ್‌ ಕುಮಾರ್‌ ಶೆಟ್ಟಿ ಅವರನ್ನು ಸಮ್ಮಾನಿಸಲಾಯಿತು.

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.