ಧಾರ್ಮಿಕ ಪ್ರವಾಸೋದ್ಯಮ ಉತ್ತೇಜನಕ್ಕೆ ಸಾಮಾಜಿಕ ಜಾಲತಾಣಗಳ ಬಳಕೆ

ಧಾರ್ಮಿಕ ಕೇಂದ್ರಗಳ ವೈಶಿಷ್ಟ್ಯ ಸಾರಲು ರೈಲು, ಬಸ್‌ ನಿಲ್ದಾಣಗಳಲ್ಲಿ ಕೌಂಟರ್‌ ತೆರೆಯುವ ಚಿಂತನೆ

Team Udayavani, Feb 21, 2020, 11:20 PM IST

kala-35

ಸಾಮಾಜಿಕ ತಾಣದಲ್ಲಿ ಪ್ರಕಟಿಸಲಾಗಿರುವ ಮರೋಳಿ ಸೂರ್ಯನಾರಾಯಣ ದೇಗುಲದ ಒಳನೋಟ.

ಮಹಾನಗರ: ಧಾರ್ಮಿಕ ಪ್ರವಾಸೋದ್ಯಮಕ್ಕೆ ಒತ್ತು ನೀಡಿ ಪ್ರವಾಸಿಗರನ್ನು ಆಕರ್ಷಿಸುವುದಕ್ಕೆ ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್‌ ಸಾಮಾಜಿಕ ತಾಣಗಳ ಮೊರೆ ಹೋಗಿದ್ದಾರೆ. ಅದಕ್ಕಾಗಿ ಶಿವರಾತ್ರಿ ದಿನವಾದ ಶುಕ್ರವಾರದಿಂದ ಪುರಾತನ ಧಾರ್ಮಿಕ ಮಂದಿರಗಳ ವೈಶಿಷ್ಟ್ಯಗಳ ಬಗ್ಗೆ ರಾಜ್ಯದ ಮೂಲೆ ಮೂಲೆಗೂ ತಲುಪಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ.

ನಗರದಲ್ಲಿ ಹಲವಾರು ಪುರಾತನ ದೇವಾಲಯ, ಚರ್ಚ್‌, ಮಸೀದಿಗಳಿವೆ. ಆದರೆ ಸ್ಥಳೀಯರು ಹೊರತುಪಡಿಸಿ ಮಾಹಿತಿ ಕೊರತೆಯಿಂದಾಗಿ ಧಾರ್ಮಿಕ ಸ್ಥಳಗಳಿಗೆ ತೆರಳುವ ಪ್ರವಾಸಿಗರು ಕಡಿಮೆ ಸಂಖ್ಯೆಯಲ್ಲಿದ್ದಾರೆ. ಪ್ರಸ್ತುತ ಪ್ರಭಾವಿ ಮಾಧ್ಯಮವಾಗಿರುವ ಸಾಮಾಜಿಕ ತಾಣಗಳನ್ನೇ ಬಳಸಿಕೊಂಡು ನಗರದ ದೇವಸ್ಥಾನಗಳ ಇಂಚಿಂಚು ಮಾಹಿತಿಯನ್ನು ರಾಜ್ಯ, ಹೊರ ರಾಜ್ಯದ ಜನತೆಗೆ ತಿಳಿಸುವ ಉದ್ದೇಶದಿಂದ ಧಾರ್ಮಿಕ ಪ್ರವಾಸೋದ್ಯಮ ಪ್ರಚುರಪಡಿಸುವ ಚಿಂತನೆ ಶಾಸಕ ಡಿ. ವೇದವ್ಯಾಸ ಕಾಮತ್‌ ನೇತೃತ್ವದಲ್ಲಿ ನಡೆಯುತ್ತಿದೆ. ಇದರ ಮೊದಲ ಭಾಗವಾಗಿ ಮರೋಳಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬಗ್ಗೆ ಶುಕ್ರವಾರ ಸಮಗ್ರ ಮಾಹಿತಿ-ಚಿತ್ರಣವನ್ನು ತಮ್ಮ ಫೇಸ್ಬುಕ್‌ ಪೇಜ್‌ನಲ್ಲಿ ಪ್ರಕಟಿಸಿದ್ದಾರೆ.

ಧಾರ್ಮಿಕ ಸ್ಥಳಗಳ ಸಮಗ್ರ ಮಾಹಿತಿ
ಪುರಾತನ ಮತ್ತು ಕಾರ್ಣಿಕದ ದೇವಸ್ಥಾನ, ದೈವಸ್ಥಾನ, ಚರ್ಚ್‌, ಮಸೀದಿಗಳ ವೈಶಿಷ್ಟ್ಯ, ಇತಿಹಾಸ, ಅಲ್ಲಿನ ಕೆತ್ತನೆಗಳು, ವಿಶೇಷ ಹಬ್ಬ, ಆಚರಣೆಗಳು, ಪೂಜಾದಿ ವಿಶೇಷಗಳು, ಆ ಧಾರ್ಮಿಕ ಕೇಂದ್ರಕ್ಕೆ ತೆರಳುವ ರೂಟ್‌ಮ್ಯಾಪ್‌ ಸಹಿತ ಆ ಧಾರ್ಮಿಕ ಕೇಂದ್ರದ ಸಮಗ್ರ ಮಾಹಿತಿಗಳನ್ನು ಸಾಮಾಜಿಕ ತಾಣಗಳಾದ ಟ್ವಿಟರ್‌, ಫೇಸ್ಬುಕ್‌, ಇನ್‌ಸ್ಟಾಗ್ರಾಂಗಳಲ್ಲಿ ಪ್ರಕಟಿಸಿ, ಹೆಚ್ಚು ಶೇರ್‌ ಆಗುವಂತೆ ನೋಡಿಕೊಳ್ಳಲಾಗುತ್ತದೆ. ಫೇಸ್ಬುಕ್‌ ಪೇಜ್‌ಗಳಲ್ಲಿ ಹಲವಾರು ಮಂದಿ ಫಾಲೋವರ್ಗಳಿರು ವುದರಿಂದ ಈ ಮಾಹಿತಿ ರಾಜ್ಯ ಮಾತ್ರವಲ್ಲ, ಹೊರ ರಾಜ್ಯದ ಮಂದಿಗೂ ತಲುಪುತ್ತದೆ. ಆ ಮೂಲಕ ನಗರದ ದೇವಾಲಯಗಳಿಗೆ ಪ್ರವಾಸಿಗರು ಬರುವುದಕ್ಕೆ ಅವಕಾಶ ನೀಡುವುದು ಉದ್ದೇಶ.

ರೈಲು, ಬಸ್‌ ನಿಲ್ದಾಣಗಳ ಮೂಲಕ ಜನ ಸಂಚಾರ ಹೆಚ್ಚಿರುವುದರಿಂದ ಇಂತಹ ಕಡೆಗಳಲ್ಲಿ ಧಾರ್ಮಿಕ ಪ್ರವಾಸೋದ್ಯಮದ ಬಗ್ಗೆ ಮಾಹಿತಿ ನೀಡುವ ಕೌಂಟರ್‌ ತೆರೆಯುವ ಬಗ್ಗೆಯೂ ಚಿಂತನೆ ನಡೆಯುತ್ತಿದೆ. ರೈಲು ನಿಲ್ದಾಣದಿಂದ ಯಾವ ಧಾರ್ಮಿಕ ಕೇಂದ್ರಕ್ಕೆ ಎಷ್ಟು ದೂರ ಇದೆ ಎಂಬುವುದನ್ನೂ ತಿಳಿಸಲಾಗುತ್ತದೆ. ಇದರಿಂದ ರೈಲು ಮುಖಾಂತರ ಇತರೆಡೆ ಗಳಿಗೆ ತೆರಳಬೇಕಾ ದವರು ನಿಲ್ದಾಣ ದಲ್ಲಿ ಕುಳಿತುಕೊಳ್ಳುವ ಬದಲು ಧಾರ್ಮಿಕ ಕೇಂದ್ರಗಳನ್ನು ವೀಕ್ಷಿಸಲು ಸಹಕಾರಿಯಾಗುತ್ತದೆ ಎನ್ನುತ್ತಾರೆ ಶಾಸಕರು. ಲಾಡ್ಜ್ಗಳಲ್ಲಿ ಹೊರಭಾಗದ ಪ್ರವಾಸಿಗರು ಉಳಿದುಕೊಳ್ಳುವುದರಿಂದ ವಿವಿಧ ಲಾಡ್ಜ್ಗಳ ಮಾಲಕರ ಜತೆ ಚರ್ಚಿಸಿ ಅಲ್ಲಿಯೂ ಧಾರ್ಮಿಕ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಫಲಕಗಳನ್ನು ಹಾಕುವ ಬಗ್ಗೆ ಚಿಂತನೆ  ನಡೆಯುತ್ತಿವೆ.

ಧಾರ್ಮಿಕ ಪ್ರವಾಸಿ ತಾಣಗಳ ಮಾಹಿತಿ
ಧಾರ್ಮಿಕ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವುದರೊಂದಿಗೆ ನಮ್ಮ ನಗರದ ಪುರಾತನ ಧಾರ್ಮಿಕ ಕೇಂದ್ರಗಳ ವೈಶಿಷ್ಟ್ಯವನ್ನು ರಾಜ್ಯ, ದೇಶದ ಉದ್ದಗಲಕ್ಕೂ ತಲುಪಿಸುವ ಉದ್ದೇಶವಿದೆ. ಸಾಮಾಜಿಕ ಜಾಲತಾಣಗಳನ್ನೇ ಬಳಸಿಕೊಂಡು ಈ ಕೆಲಸ ಮಾಡಲಾಗುವುದು. ಶಿವರಾತ್ರಿ ದಿನದಿಂದ ಈ ಕೆಲಸ ಅಧಿಕೃತ ಆರಂಭ ಕಂಡಿದೆ. ರೈಲು, ಬಸ್‌ ನಿಲ್ದಾಣಗಳಲ್ಲಿ ಕೌಂಟರ್‌ ತೆರೆದು ಅಲ್ಲಿಯೂ ಧಾರ್ಮಿಕ ಪ್ರವಾಸಿ ತಾಣಗಳ ಬಗ್ಗೆ ಮಾಹಿತಿ ಪಸರಿಸುವ ಉದ್ದೇಶವಿದೆ.
– ಡಿ. ವೇದವ್ಯಾಸ ಕಾಮತ್‌, ಶಾಸಕರು

ಮೂಲ ಸೌಕರ್ಯಕ್ಕೆ ಆದ್ಯತೆ
ಪ್ರವಾಸಿಗರನ್ನು ಆಕರ್ಷಿಸುವುದರೊಂದಿಗೆ ಅವರಿಗೆ ಧಾರ್ಮಿಕ ಕೇಂದ್ರಗಳಲ್ಲಿ ಅಗತ್ಯ ಮೂಲ ಸೌಕರ್ಯಗಳನ್ನೂ ಒದಗಿಸುಕೊಡುವ ನಿಟ್ಟಿನಲ್ಲಿಯೂ ಚಿಂತನೆ ನಡೆಯಲಿದೆ. ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿಲ್ಲದೆಡೆ ಅದನ್ನೂ ಕಲ್ಪಿಸಿಕೊಡಲಾಗುತ್ತದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.