ಆಡಳಿತ ಪಕ್ಷದ ಒತ್ತಡದಿಂದ ಪೊಲೀಸ್ ಇಲಾಖೆ ನಿಸ್ಸಹಾಯಕವಾಗಿದೆ: ಯು.ಟಿ ಖಾದರ್ ವಾಗ್ದಾಳಿ
Team Udayavani, Sep 29, 2021, 12:39 PM IST
ಮಂಗಳೂರು: ಜಿಲ್ಲೆಯಲ್ಲಿ ಸಮಾಜದ್ರೋಹಿ ಶಕ್ತಿಗಳು ಹೆಚ್ಚಾಗುತ್ತಿದೆ. ಕಾನೂನಿನ ಭಯವಿಲ್ಲದೇ ರೌಡಿಗಳು ಅಟ್ಟಹಾಸ ತೋರಿಸುತ್ತಿದ್ದಾರೆ ಎಂದು ಮಾಜಿ ಸಚಿವ ಯು.ಟಿ ಖಾದರ್ ವಾಗ್ದಾಳಿ ನಡೆಸಿದರು.
ನಗರದಲ್ಲಿ ಮಾತಾನಾಡಿದ ಅವರು, ಸುರತ್ಕಲ್ ನಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದರು. ಆಡಳಿತ ಪಕ್ಷದ ಒತ್ತಡದಿಂದ ಪೊಲೀಸ್ ಇಲಾಖೆ ನಿಸ್ಸಹಾಯಕವಾಗಿದೆ. ಪೊಲೀಸರು ರಾಜಕೀಯ ಬಾಸ್ ಗಳ ಮಾತುಗಳಿಗೆ ಗೌರವ ಕೊಡಬಾರದು. ಕಾನೂನುಗಳಿಗೆ ಪೊಲೀಸರು ಗೌರವ ಕೊಡಬೇಕು ಎಂದರು.
ಇದನ್ನೂ ಓದಿ: ರಾಯಚೂರು: ಕೌಟುಂಬಿಕ ಕಲಹ; ಒಂದೇ ಮನೆಯ ಮೂವರ ಬರ್ಬರ ಕೊಲೆ
ರೌಡಿಗಳ ಹಾಗೆ ಯಾರ್ಯಾರ ಮಕ್ಕಳಿಗೆ ಸಂಬಂದ ಇಲ್ಲದವರು ಹೊಡೆಯುತ್ತಿದ್ದಾರೆ. ಪೊಲೀಸ್ ಇಲಾಖೆಯ ಮುಂದೆಯೇ ಹೊಡಿಯುತ್ತಾರೆ. ಪೊಲೀಸರು ಹೊಡಿಬೇಡಿ ಎಂದು ಅಂಗಲಾಚುವ ವಿಡಿಯೋ ವೈರಲ್ ಆಗುತ್ತಿದೆ. ಪೊಲೀಸ್ ಇಲಾಖೆಯ ಲಾಠಿ ಎಲ್ಲಿ ಹೋಯಿತು? ಪೊಲೀಸ್ ಇಲಾಖೆ ದಾಳಿ ಮಾಡಿದವರ ಮೇಲೆ ಯಾವ ಕೇಸ್ ಹಾಕಿದೆ? ಯಾರೋ ಒಬ್ಬ ರೌಡಿ ರೋಡಲ್ಲಿ ಹೊಡಿತಾರೆ ಅಂದ್ರೆ ಯಾರಾದ್ರೂ ತಮ್ಮ ಮಕ್ಕಳನ್ನು ಶಿಕ್ಷಣಕ್ಕಾಗಿ ಮಂಗಳೂರಿಗೆ ಕಳುಹಿಸುತ್ತಾರಾ? ಎಂದು ಪ್ರಶ್ನಿಸಿದರು.
ಆತ್ಮವಿಶ್ವಾಸ ಧೈರ್ಯ ತುಂಬುವ ಕೆಲಸ ಪೊಲೀಸರು ಮಾಡಬೇಕಿತ್ತು. ಆದ್ರೆ ಆರೋಪಿಗಳು ಬೆಳಗ್ಗೆ ಹೋಗಿ ಸಂಜೆ ಜಾಮೀನಿನ ಮೇಲೆ ಹೊರಗೆ ಬರ್ತಾರೆ ಅಂದ್ರೆ ಈ ಪ್ರಕರಣದಲ್ಲಿ ಯಾರ ಒತ್ತಡ ಇತ್ತು? ರೌಡಿಗಳಿಗೆ, ಸಮಾಜದ್ರೋಹಿ ಶಕ್ತಿಗಳಿಗೆ ತಕ್ಕ ಶಾಸ್ತಿ ಮಾಡಬೇಕು. ಯಾವುದೇ ಧರ್ಮದವರಾದ್ರೂ ತಪ್ಪು ಮಾಡಿದರೆ ಅವರಿಗೆ ತಕ್ಕ ಶಿಕ್ಷೆ ಆಗಬೇಕೆಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ