ಧರ್ಮಸ್ಥಳದಲ್ಲಿ ಮಿನಿ ವಿಮಾನ ನಿಲ್ದಾಣ : ಸಚಿವ ಸೋಮಣ್ಣ

1,500 ಫಲಾನುಭವಿಗಳಿಗೆ ಮನೆ ಆದೇಶ ಪತ್ರ ವಿತರಿಸಿ ಸಚಿವ ಸೋಮಣ್ಣ

Team Udayavani, Aug 28, 2022, 1:05 PM IST

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬರುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹಾಗೂ ಶಾಸಕ ಹರೀಶ್‌ ಪೂಂಜ ಅವರ ಬೇಡಿಕೆಯಂತೆ ಮಿನಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮುಖ್ಯಮಂತ್ರಿಗಳು ಇಲಾಖೆಗಳ ಜತೆ ಚರ್ಚಿಸಿ 100 ಎಕರೆ ಜಾಗ ಗುರುತಿಸಲು ಮುಂದಿನ ವಾರದಲ್ಲಿ ಅಧಿಕಾರಿಗಳಿಗೆ ಸೂಚಿಸುವ ಜತೆಗೆ 100 ಕೋ.ರೂ. ಒದಗಿ ಸಲಾಗುವುದು ಎಂದು ರಾಜ್ಯ ವಸತಿ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ. ಸೋಮಣ್ಣ ಘೋಷಿಸಿದರು.

ಗುರುವಾಯನಕೆರೆಯಲ್ಲಿ ಶನಿ ವಾರ ತಾಲೂಕಿನ 2021-22ನೇ ಸಾಲಿನ ಬಸವ ವಸತಿ, ಅಂಬೇಡ್ಕರ್‌ ವಸತಿ ಯೋಜನೆಯ 1,500 ಫಲಾನುಭವಿಗಳಿಗೆ ಗೃಹ ನಿರ್ಮಾಣ ಕಾಮಗಾರಿಯ ಆದೇಶ ಪತ್ರ ವಿತರಿಸಿ ಅವರು ಮಾತನಾಡಿದರು.

ಭವಿಷ್ಯದ ದೃಷ್ಟಿಯಿಂದ ಧರ್ಮ ಸ್ಥಳಕ್ಕೆ ಎಟಿಆರ್‌ ಹಾಗೂ 10ರಿಂದ 12 ಆಸನಗಳ ವಿಮಾನ ಇಳಿಯಬಲ್ಲ ನಿಲ್ದಾಣ ಸಹಿತ ಏಕಕಾಲದಲ್ಲಿ 4 ಹೆಲಿಪ್ಯಾಡ್‌ ನಿರ್ಮಿಸುವ ಕುರಿತು ಯೋಚಿಸಲಾಗಿದೆ. ತತ್‌ಕ್ಷಣ ಡಿಪಿಆರ್‌ ಸಿದ್ಧಗೊಳಿಸಿ ಕ್ಯಾಬಿನೆಟ್‌ಗೆ ಕಳುಹಿಸುವ ವ್ಯವಸ್ಥೆಯಾಗಲಿದೆ. ರಾಯಚೂರು ವಿಮಾನ ನಿಲ್ದಾಣಕ್ಕೆ ಮುಂದಿನ ತಿಂಗಳು ಶಂಕುಸ್ಥಾಪನೆ ಆಗಲಿದ್ದು, ಡಿಸೆಂಬರ್‌ ತಿಂಗಳಿನಲ್ಲಿ ಶಿವಮೊಗ್ಗ ನಿಲ್ದಾಣ ಲೋಕಾರ್ಪ ಣೆಯಾಗಲಿದೆ. ಹಾಸನದಲ್ಲಿ ಎರಡನೇ ಹಂತದ ಹಾಗೂ ವಿಜಯಪುರದಲ್ಲಿ ಬೋಯಿಂಗ್‌ ನಿಲ್ದಾಣವಾಗಿ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಕಾರವಾರ, ಆಲಮಟ್ಟಿಯಲ್ಲಿ ಪ್ರವಾಸಿ ಆಕರ್ಷಣೆ ಅನುಕೂಲಕರ ಯೋಜನೆ ರೂಪಿಸಲಾಗಿದೆ ಎಂದರು.

ಹೆಚ್ಚುವರಿ 5,000 ಮನೆಗೆ ಮನವಿ
ಶಾಸಕ ಹರೀಶ್‌ ಪೂಂಜ ಮಾತನಾಡಿ, ತಾಲೂಕಿನ 1,500 ಮಂದಿಗೆ ಮನೆ ಮಂಜೂರು ಮಾಡುವ ಮೂಲಕ ಸಚಿವರು ಪ್ರತೀ ವ್ಯಕ್ತಿಯ ಉತ್ತಮ ಮನೆ ಮತ್ತು ಉತ್ತಮ ಸಂಸಾರ ಹೊಂದುವ ಅಪೇಕ್ಷೆಯನ್ನು ಈಡೇರಿಸಿದ್ದಾರೆ. ತಾಲೂಕಿಗೆ ಹೆಚ್ಚುವರಿ 5,000 ಮನೆಗಳ ಅಗತ್ಯವಿದ್ದು, ಈ ಕುರಿತು ಸಚಿವರಲ್ಲಿ ಮನವಿ ಮಾಡಲಾಗಿದೆ ಎಂದರು.

ವಿಧಾನ ಪರಿಷತ್‌ ಸದಸ್ಯ ಕೆ. ಪ್ರತಾಪಸಿಂಹ ನಾಯಕ್‌, ಜಿ.ಪಂ. ಸಿಇಒ ಡಾ| ಕುಮಾರ್‌, ಬೆಳ್ತಂಗಡಿ ಪ.ಪಂ. ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ಬೆಂಗಳೂರು ರಾಜೀವ್‌ ಗಾಂಧಿ ಗ್ರಾಮೀಣ ವಸತಿ ನಿಗಮದ ಪ್ರಧಾನ ವ್ಯವಸ್ಥಾಪಕ ಅರುಣ್‌ ಕುಮಾರ್‌ ಹಡಗಲಿ, ತಹಶೀಲ್ದಾರ್‌ ಪೃಥ್ವಿ ಸಾನಿಕಮ್‌, ಜಿ.ಪಂ. ವಸತಿ ಯೋಜನೆ ನೋಡೆಲ್‌ ಅಧಿಕಾರಿ ಎಚ್‌.ಆರ್‌. ನಾಯಕ್‌, ತಾಲೂಕಿನ 48 ಗ್ರಾ.ಪಂ.ಗಳ ಅಧ್ಯಕ್ಷರು ಉಪಸ್ಥಿತರಿದ್ದರು.

ತಾ.ಪಂ. ಕಾರ್ಯನಿರ್ವಹಣಾ ಧಿಕಾರಿ ಕುಸುಮಾಧರ ಬಿ. ಸ್ವಾಗತಿಸಿ, ಸಂಯೋಜಕ ಜಯಾನಂದ್‌ ಲಾೖಲ ವಂದಿಸಿದರು. ಉಜಿರೆ ಪಿಡಿಒ ಪ್ರಕಾಶ್‌ ಶೆಟ್ಟಿ ನೊಚ್ಚ ಕಾರ್ಯಕ್ರಮ ನಿರ್ವಹಿಸಿದರು.

3,160 ಹೆಚ್ಚುವರಿ ಮನೆಗೆ ಆದೇಶ
ತಾಲೂಕಿನ ಮೂಲಸೌಕರ್ಯ ವೃದ್ಧಿಗೆ 10 ಕೋಟಿ ರೂ. ಹೆಚ್ಚಿನ ಅನುದಾನ ನೀಡಲಾಗುವುದು. ತಾಲೂಕಿನ 48 ಪಂಚಾಯತ್‌ಗಳಲ್ಲಿ ಮನೆ ಬೇಕಾಗಿರುವ ಫಲಾನುಭವಿಗಳನ್ನು ತತ್‌ಕ್ಷಣ ಗುರುತಿಸಿ ವರದಿ ನೀಡಬೇಕು ಎಂದ ಸಚಿವರು. 3,160 ಹೆಚ್ಚುವರಿ ಮನೆ ಮಂಜೂರಿಗೆ ಆದೇಶ ನೀಡಿದರು.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.