ಶಾಲೆಯಲ್ಲಿ ಬೀಡುಬಿಟ್ಟ ಗ್ರಾಮಕರಣಿಕರು

ಕಲ್ಲಬೆಟ್ಟು ಗ್ರಾಮಕರಣಿಕರ ಕಚೆೇರಿಯ ಮೇಲ್ಛಾವಣಿ ಕುಸಿತ

Team Udayavani, Mar 13, 2020, 12:39 AM IST

MOOD3KALLABETTU-VA-OFFICE

ಮೂಡುಬಿದಿರೆ: ಮೂರೂ ವರೆ ದಶಕಗಳಿಂದ ಕಾರ್ಯಾಚರಿಸುತ್ತಿದ್ದ ಕಲ್ಲಬೆಟ್ಟು ಗ್ರಾಮಕರಣಿಕರ ಕಚೇರಿಯ ಮೇಲ್ಛಾವಣಿಯು ವಾರದ ಹಿಂದೆ ಕುಸಿದುಬಿದ್ದಿದ್ದು ಸದ್ಯ ಗ್ರಾಮಕರಣಿಕರು ತಮ್ಮ ಸಿಬಂದಿ ಜತೆ ಹತ್ತಿರದ ಸರಕಾರಿ ಶಾಲೆಯ ಕೋಣೆಯೊಂದರಲ್ಲಿ ಆಶ್ರಯ ಪಡೆಯುವಂತಾಗಿದೆ.

ಕಲ್ಲಬೆಟ್ಟು ಶಾಲೆಯ ಆವರಣದ ಬಳಿ ಕಳೆದ 50 ವರ್ಷಗಳ ಹಿಂದೆ ಸರಕಾರದ ಸಾಮಾಜಿಕ ಅಭಿವೃದ್ಧಿ ಕಾರ್ಯಕ್ರಮದಲ್ಲಿ ನಿರ್ಮಾಣಗೊಂಡಿರುವ ಸಮಾಜ ಮಂದಿರದ ಕಟ್ಟಡದಲ್ಲಿ ಈ ಹಿಂದೆ ಲೈಬ್ರರಿ, ಕಲ್ಲಬೆಟ್ಟು ಯುವಕ ಮಂಡಲಗಳು ಕರ್ತವ್ಯ ನಿರ್ವಹಿಸುತ್ತಿದ್ದವು. ಊರಿನ ಕೃಷಿ ಚಟುವಟಿಕೆಗೆ ಸಂಬಂಧಪಟ್ಟ ಕಾರ್ಯಕ್ರಮಗಳು ಇಲ್ಲಿ ನಡೆಯುತ್ತಿದ್ದವು. ಅನಂತರದ ದಿನಗಳಲ್ಲಿ ತಾಲೂಕು ಅಭಿವೃದ್ಧಿ ಮಂಡಳಿ ಇಲಾಖೆ ಅಧಿಕಾರಿಗಳು ಈ ಕಟ್ಟಡವನ್ನು ಆಗಿನ ಮಂಡಲ ಪಂಚಾಯತ್‌ಗೆ ಹಸ್ತಾಂತರಿಸಿದ್ದರು.

ಮುಂದೆ ಕಲ್ಲಬೆಟ್ಟು, ಮಾರೂರು ಹಾಗೂ ಕರಿಂಜೆ ಈ ಮೂರು ಗ್ರಾಮಗಳಿಗೆ ಸಂಬಂ ಧಿಸಿದ ಕಂದಾಯದ ಕೆಲಸಗಳನ್ನು ನಿರ್ವಹಿಸಲು ಈ ಕಟ್ಟಡದಲ್ಲಿ ಗ್ರಾಮಕರಣಿಕರ ಕಚೇರಿ ಯನ್ನು ತೆರೆಯಲಾಯಿತು. ಈ ಮೂರು ಗ್ರಾಮಗಳು ಮೂಡುಬಿದಿರೆ ಪುರಸಭೆಗೆ ಸೇರ್ಪಡೆಗೊಂಡವು. ಕಂದಾಯಕ್ಕೆ ಸಂಬಂ ಧಿಸಿದ ಹೆಚ್ಚಿನ ಕೆಲಸಗಳು ಮೂಡುಬಿದಿರೆಯಲ್ಲಿಯೇ ನಡೆಯುತ್ತಿವೆಯಾದರೂ ಕಲ್ಲಬೆಟ್ಟು ಗ್ರಾಮಕರಣಿಕರಿಗೆ ಮಾತ್ರ ಆ ಕಟ್ಟಡದಲ್ಲಿ ಕರ್ತವ್ಯವನ್ನು ನಿರ್ವಹಿಸಲು ಅವಕಾಶವನ್ನು ಕಲ್ಪಿಸಿಕೊಡಲಾಗಿತ್ತು. ಹಳೆಯದಾಗಿರುವ ಈ ಕಟ್ಟಡದ ಮೇಲ್ಛಾವಣಿ ಇಂದೋ ನಾಳೆಯೋ ಕುಸಿದು ಬೀಳುವಂತಿದ್ದವು. ದಾಖಲೆಗಳನ್ನಿರಿಸಿದ್ದ ಕೋಣೆಯೊಂದರ ಬಾಗಿಲು, ಕಿಟಿಕಿಗಳು ಈ ಹಿಂದೆಯೇ ಮುರಿದುಬಿದ್ದಿದ್ದ ಕಾರಣ ಅ ದಾಖಲೆಗಳನ್ನು ಶಿಥಿಲವಾಗಿದ್ದ ಕಚೇರಿ ಕೋಣೆಗೆ ಸ್ಥಳಾಂತರಿಸಲಾಗಿತ್ತು. ಇದೀಗ ಅದೇ ಕೋಣೆಯ ಮೇಲ್ಛಾವಣಿ ಕುಸಿದು ಬಿದ್ದು ತೀವ್ರ ಸಮಸ್ಯೆ ಉಂಟಾಗಿದೆ.

ಶಾಲೆ ಮತ್ತು ಅಂಗನವಾಡಿ ಮಕ್ಕಳು ಸಂಜೆ ವೇಳೆ ಮಕ್ಕಳು ಇಲ್ಲಿಯೇ ಆಟವಾಡುತ್ತಿರುವುದು ಸಾಮಾನ್ಯ. ಸುದೈವವಶಾತ್‌ ಕಟ್ಟಡದ ಮೇಲ್ಛಾವಣಿಯು ರಾತ್ರಿ ವೇಳೆ ಕುಸಿದು ಬಿದ್ದಿರುವುದರಿಂದ ಯಾವುದೇ ಅಪಾಯ ಸಂಭವಿಸಿಲ್ಲ.

ಶಾಲೆಯಲ್ಲಿ ಪರೀಕ್ಷೆ -ಇಕ್ಕಟ್ಟು
ಸದ್ಯ ಶಾಲೆಯಲ್ಲಿ ಪರೀಕ್ಷೆಗಳು ನಡೆಯುತ್ತಿರುವ ಈ ವೇಳೆಯಲ್ಲಿ ಗ್ರಾಮ ಕರಣಿಕರ ದಾಖಲೆಗಳನ್ನು ಪೇರಿಸಿಡ ಲಾಗಿರುವುದರಿಂದ ಬಹಳ ಇಕ್ಕಟ್ಟಿನ ಪರಿಸ್ಥಿತಿ ನಿರ್ಮಾಣವಾಗಿದೆ. ಕಂದಾಯ ಇಲಾಖೆ ಹಾಗೂ ಪುರ ಸಭೆಗೆ ಮಾಹಿತಿ ನೀಡಲಾಗಿದೆ ಎಂದು ತಿಳಿದುಬಂದಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಗ್ರಾಮಕರಣಿಕರಿಗೆ ತಾತ್ಕಾಲಿಕವಾಗಿ ಬೇರೆ ವ್ಯವಸ್ಥೆ ಕಲ್ಪಿಸಿ ಕೊಡಬೇಕಾಗಿದೆ ಮತ್ತು ಶಿಥಿಲ ಕಟ್ಟಡವನ್ನು ದುರಸ್ತಿ ಮಾಡಿಸಬೇಕಾಗಿದೆ.

ಪರಿಶೀಲನೆ ನಡೆಸಲಾಗಿದೆ; ಶೀಘ್ರವೇ ದುರಸ್ತಿಗೆ ಕ್ರಮ
ಪುರಸಭಾ ಎಂಜಿನಿಯರ್‌ ಕಟ್ಟಡದ ಸ್ಥಿತಿಗತಿ ಪರಿವೀಕ್ಷಣೆ ಮಾಡಿದ್ದಾರೆ. ಆಗಬೇಕಾದ ದುರಸ್ತಿ ಕಾರ್ಯದ ಬಗ್ಗೆ ಅಂದಾಜು ಪಟ್ಟಿ ತಯಾರಿಸಿ ಸಹಾಯಕ ಕಮಿಶನರ್‌ ಅವರಿಗೆ ಸಲ್ಲಿಸಿ ಅವರ ಒಪ್ಪಿಗೆ ಪಡೆದು ಶೀಘ್ರದಲ್ಲೇ ದುರಸ್ತಿ ಮಾಡಿಸಲಾಗುವುದು.
 - ಇಂದೂ ಎಂ., ಪುರಸಭಾ ಮುಖ್ಯಾಧಿಕಾರಿ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.