ಹಣ ಪಡೆದು ಹಕ್ಕುಪತ್ರ ನೀಡದ ವಿಎ: ಆಕ್ರೋಶ


Team Udayavani, Aug 6, 2017, 7:45 AM IST

058upg4.jpg

ಉಪ್ಪಿನಂಗಡಿ: 94ಸಿ ಹಕ್ಕುಪತ್ರ ನೀಡುತ್ತೇನೆ ಎಂದು ಬಜತ್ತೂರು ಗ್ರಾಮಕರಣಿಕರು ಹಲವು ಮಂದಿ ಯಿಂದ ಹಣ ಪಡೆದುಕೊಂಡಿದ್ದಾರೆ, ಆದರೆ ಹಣವೂ ಇಲ್ಲ, ಹಕ್ಕುಪತ್ರವೂ ಈ ತನಕ ಸಿಗಲಿಲ್ಲ ಎಂದು ಸಭೆಯ ಲ್ಲಿದ್ದ ಬಜತ್ತೂರು ಗ್ರಾಮಸ್ಥರು ಆರೋಪಿಸಿ, ನಮಗೂ ಹಕ್ಕುಪತ್ರ ನೀಡಬೇಕು ಎಂದು ಅಹವಾಲು ಮಂಡಿಸಿದ ಘಟನೆ ಜನಸಂಪರ್ಕ ಸಭೆಯಲ್ಲಿ  ನಡೆಯಿತು.

ಶಾಸಕಿ ಶಕುಂತಳಾ ಅಧ್ಯಕ್ಷತೆಯಲ್ಲಿ  ಶನಿವಾರ ಉಪ್ಪಿನಂಗಡಿಯಲ್ಲಿ ನಡೆದ ಹೋಬಳಿ ಮಟ್ಟದ ಜನಸಂಪರ್ಕ ಸಭೆಯಲ್ಲಿ ಈ ಆರೋಪ ವ್ಯಕ್ತವಾಗಿ, ಶಾಸಕರು ಬಜತ್ತೂರು ಗ್ರಾಮಕರಣಿಕರು ಯಾರು ಎಂದು ಪ್ರಶ್ನಿಸಿದರು, ಆದರೆ ಸಭೆಯಲ್ಲಿ ಆರೋಪಿತ ಗ್ರಾಮಕರಣಿಕ ಇರದ ಬಗ್ಗೆ ಶಾಸಕರೂ ಅಸಮಾಧಾನ ವ್ಯಕ್ತಪಡಿಸಿ, ಫ‌ಲಾನುಭವಿಗಳನ್ನು ಈ ರೀತಿ ಯಾಕೆ ಪ್ರಾಣ ತಿನ್ನುತ್ತಿದ್ದೀರಿ? ಫ‌ಲಾನುಭವಿಗೆ ನ್ಯಾಯ ಒದಗಿಸಿಕೊಡಿ ಎಂದು ಶಾಸಕರು ತಹಶೀಲ್ದಾರ್‌ ಅನಂತ ಶಂಕರರಿಗೆ ಸೂಚನೆ ನೀಡಿದರು.

ಬಜತ್ತೂರು ಗ್ರಾ.ಪಂ. ಅಧ್ಯಕ್ಷ ಸಂತೋಷ್‌ ಕುಮಾರ್‌ ಮಾತನಾಡಿ, ಬಜತ್ತೂರು ಗ್ರಾಮಕರಣಿಕ ಸುನಿಲ್‌ ಅವರು 94/ಸಿ ಹಕ್ಕುಪತ್ರ ನೀಡುತ್ತೇನೆ ಎಂದು ಹೇಳಿಕೊಂಡು ಗ್ರಾಮದಲ್ಲಿ ಒಬ್ಬೊಬ್ಬರಿಂದ 5 ಸಾವಿರ ರೂ. ಪಡೆದುಕೊಂಡಿದ್ದಾರೆ. ಹಣ ಪಡೆದುಕೊಂಡು 6 ತಿಂಗಳು ಕಳೆಯಿತು. ಆದರೆ ಈ ತನಕ ಯಾರಿಗೂ ಹಕ್ಕುಪತ್ರ ಸಿಕ್ಕಿಲ್ಲ ಎಂದು ಸಭೆಯ ಗಮನ ಸೆಳೆದರು.

ಅದಲ್ಲದೆ ಈ ವ್ಯಕ್ತಿ ಈ ರೀತಿ ಹಣ ಪಡೆದುಕೊಂಡಿ ದ್ದಲ್ಲದೆ, ಗ್ರಾಮಸ್ಥರೊಂದಿಗೆ ಆ ಹಣದಲ್ಲಿ ಗ್ರಾ.ಪಂ. ಅಧ್ಯಕ್ಷರಿಗೂ ಪಾಲು ಇದೆ ಎಂದು ಹೇಳಿಕೊಂಡಿದ್ದಾರೆ. ಗ್ರಾಮಕರಣಿಕರು ಈ ರೀತಿಯಾಗಿ ಮೋಸ ಮಾಡುತ್ತಿ ದ್ದಾರೆ ಮತ್ತು ಗ್ರಾಮಸ್ಥರಿಗೆ ಸುಳ್ಳು ಮಾಹಿತಿ ನೀಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಫ‌ಲಾನುಭವಿಯಿಂದ ಹಣ ಪಡೆಯುವಾಗ ಸರಕಾರಕ್ಕೆ ಕಟ್ಟುವುದಕ್ಕೆ ಇದೆ ಎಂದು ಹೇಳಿಕೊಂಡಿದ್ದಾರೆ, ಆದರೆ ಸರಕಾರಕ್ಕೆ 3,800 ರೂ. ಕಟ್ಟಬೇಕು, ಆದರೆ ಗ್ರಾಮಕರಣಿಕ ಸುನಿಲ್‌ ಈ ಹಣವನ್ನೂ ಕಟ್ಟಿರುವುದಿಲ್ಲ, ಬಹಳಷ್ಟು ಮಂದಿ ಸಾಲ ಮಾಡಿ ಹಣಕೊಟ್ಟಿದ್ದಾರೆ, ಅದರಲ್ಲೂ ಓರ್ವ ವಿಧವೆಯಿಂದಲೂ ಹಣ ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.

ಇದರಿಂದ ಆಕ್ರೋಶಿತರಾದ ಶಾಸಕರು ಕೆಲವೊಂದು ಅಧಿಕಾರಿಗಳು ಕನಿಷ್ಠ ಮಾನವೀಯತೆ ತೋರದೆ ಜನರನ್ನು ಪೀಡಿಸುತ್ತಿದ್ದಾರೆ. ಇದರಲ್ಲಿ ಗ್ರಾಮಕರಣಿಕ ಸುನಿಲ್‌ ಮೊದಲಿಗರು, ಸುನಿಲ್‌ ಹೆಸರಿನಲ್ಲಿ ಎಷ್ಟು ಮಂದಿ ಗ್ರಾಮಕರಣಿಕರು ಇದ್ದಾರೆ? ನಮಗೆ ಸುನಿಲ್‌ ಹೆಸರಿನ ಗ್ರಾಮಕರಣಿಕರ ಬಗ್ಗೆಯೇ ದೂರು ಬರುತ್ತಿದೆ ಎಂದರು. 

ಆಗ ಗ್ರಾಮಸ್ಥರು ಕಳೆದ ಜನಸಂಪರ್ಕ ಸಭೆಯಲ್ಲಿಯೂ ಅವರ ಬಗ್ಗೆ ದೂರು ಬಂದಿತ್ತು ಎಂದರು. ಫ‌ಲಾನುಭವಿಗಳಿಗೆ ತೊಂದರೆ ಕೊಡದೆ ಹಕ್ಕುಪತ್ರ ವಿತರಣೆಗೆ ವ್ಯವಸ್ಥೆ ಮಾಡುವಂತೆ ತಹಶೀಲ್ದಾರ್‌ಗೆ ಶಾಸಕರು ಸೂಚನೆ ನೀಡಿದರು.

ಉಪ್ಪಿನಂಗಡಿ ಗಾಂಧಿಪಾರ್ಕ್‌ ಬಳಿ ಇದ್ದ ಅಪಾಯಕಾರಿ ಒಣಗಿದ ಮರವೊಂದು ಬಿದ್ದು, ಅವುಗಳು ವಿದ್ಯುತ್‌ ಕಂಬದ ಮೇಲೆ ಬಿದ್ದುದರಿಂದಾಗಿ 6 ವಿದ್ಯುತ್‌ ಕಂಬ ತುಂಡಾಗಿ ಬಿದ್ದಿವೆ. 2 ದಿನಗಳಿಂದ ಉಪ್ಪಿನಂಗಡಿ ಪರಿಸರದಲ್ಲಿ ವಿದ್ಯುತ್‌ ಇಲ್ಲ, ಕುಡಿಯುವ ನೀರಿಗೂ ಸಮಸ್ಯೆ ಉಂಟಾಗಿದೆ. ಇದಕ್ಕೆಲ್ಲ ಕಾರಣ ಅರಣ್ಯ ಇಲಾಖೆಯವರ ಕಾರ್ಯವೈಖರಿ ಎಂದು ತಾಲೂಕು ಕೆಡಿಪಿ ಸದಸ್ಯ ಅಶ್ರಫ್ ಬಸ್ತಿಕ್ಕಾರ್‌ ಸಭೆಗೆ ತಿಳಿಸಿದರು.

ಆಗ ಸಭೆಯಲ್ಲಿದ್ದ ಗ್ರಾಮಸ್ಥರು ಈ ಹಿಂದೆಯೇ ಅದನ್ನು ತೆರವು ಮಾಡಬೇಕಿತ್ತು. ಮಾಡಿಲ್ಲ, ಇದೀಗ ಈ ರೀತಿಯ ಸಮಸ್ಯೆ ತಂದೊಡ್ಡಿದೆ ಎಂದರು. ಆಗ ಅಶ್ರಫ್ ಬಸ್ತಿಕ್ಕಾರ್‌ ಮಾತು ಮುಂದುವರಿಸಿ, ಒಂದೂವರೆ ವರ್ಷದ ಹಿಂದೆ ಈ ಮರದ ಅಪಾಯದ ಬಗ್ಗೆ ತಿಳಿಸಲಾಗಿತ್ತು. ರಸ್ತೆ ಕಾಮಗಾರಿ ಉದ್ಘಾಟನೆ ವೇಳೆ ಆ ಮರ ಇದ್ದ ಬಗ್ಗೆ ತಮ್ಮ ಬಳಿ ಗ್ರಾಮಸ್ಥರು ದೂರು ನೀಡಿದ್ದರು. ತತ್‌ಕ್ಷಣ ತಾವು ವಲಯ ಅರಣ್ಯಾಧಿಕಾರಿಗೆ ಕರೆ ಮಾಡಿ ಮರ ತೆರವು ಬಗ್ಗೆ ತಿಳಿಸಿದ್ದೆ. ಆದರೂ ತೆರವು ಮಾಡಿರಲಿಲ್ಲ, ಇದೀಗ ಸಮಸ್ಯೆಗೆ ಕಾರಣವಾಗಿದೆ ಎಂದರು. ಆಗ ಶಾಸಕರು ಅರಣ್ಯ ಇಲಾಖೆ ಅಧಿಕಾರಿಯನ್ನು ಕರೆದರು, ಆದರೆ ಸಭೆಯಲ್ಲಿ ಅರಣ್ಯ ಇಲಾಖೆ ಸಿಬಂದಿ ಯಾರೂ ಇರಲಿಲ್ಲ, ಆಗ ಶಾಸಕರು  ಯಾವೆಲ್ಲ ಇಲಾಖೆಯವರು ಸಭೆಗೆ ಬಂದಿಲ್ಲ, ಅಂತಹ ಇಲಾಖೆ ಬಗ್ಗೆ ವಿವರ ಕೊಡಿ, ಅವರ ವಿರುದ್ಧ ಕ್ರಮಕ್ಕೆ ಬರೆಯುತ್ತೇನೆ ಎಂದರು.

ಹಕ್ಕುಪತ್ರ ವಿತರಣೆ
ಸಭೆಯಲ್ಲಿ ಶಾಸಕರು 150 ಮಂದಿಗೆ 94/ಸಿ ಹಕ್ಕುಪತ್ರ ವಿತರಿಸಿದರು. ಜಿ.ಪಂ. ಸದಸ್ಯ ಸರ್ವೋತ್ತಮ ಗೌಡ, ತಾ.ಪಂ. ಸದಸ್ಯೆ ಉಷಾ ಅಂಚನ್‌, ಗ್ರಾಮ ಪಂ. ಅಧ್ಯಕ್ಷ ಕೆ. ಅಬ್ದುಲ್‌ ರಹಿಮಾನ್‌, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಜಗದೀಶ್‌ ಉಪಸ್ಥಿತರಿದ್ದರು.
ಜಿಲ್ಲಾ  ಕೆಡಿಪಿ ಸದಸ್ಯ ಯು.ಕೆ. ಅಯ್ಯೂಬ್‌, ದೇವಸ್ಥಾನ ವ್ಯವಸ್ಥಾಪನ ಸಮಿತಿ ಸದಸ್ಯ ಕೃಷ್ಣರಾವ್‌ ಅರ್ತಿಲ, ಗ್ರಾ.ಪಂ. ಸದಸ್ಯ ಯು.ಕೆ. ಇಬ್ರಾಹಿಂ, ಗ್ರಾಮಸ್ಥರಾದ ಮಹಮ್ಮದ್‌ ಕೆಂಪಿ ಮಾತನಾಡಿದರು. ಗ್ರಾಮಸ್ಥರಾದ ಜಯಂತ ಪೊರೋಳಿ, ಅಬ್ಟಾಸ್‌ ಬಸ್ತಿಕ್ಕಾರ್‌ ಉಪಸ್ಥಿತರಿದ್ದರು.ಉಪ್ಪಿನಂಗಡಿ ಉಪ ತಹಶೀಲ್ದಾರ್‌ ಸದಾಶಿವ ನಾಯ್ಕ ಸ್ವಾಗತಿಸಿ, ಗ್ರಾಮಕರಣಿಕ ರಮಾನಂದ ಚಕ್ಕಡಿ ವಂದಿಸಿದರು. ಕಂದಾಯ ನಿರೀಕ್ಷಕ ಪ್ರಸನ್ನ ಪಕ್ಕಳ  ನಿರೂಪಿಸಿದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.