ಗ್ರಾಮ ಗ್ರಾಮಗಳಲ್ಲಿ ಲಸಿಕೆ ಅಭಿಯಾನ ಯಶಸ್ಸಾಗಬೇಕು


Team Udayavani, Mar 26, 2021, 2:09 AM IST

ಗ್ರಾಮ ಗ್ರಾಮಗಳಲ್ಲಿ ಲಸಿಕೆ ಅಭಿಯಾನ ಯಶಸ್ಸಾಗಬೇಕು

ರೊನಾದ ಮೊದಲ ಅಲೆಯ ಅವಾಂತರವನ್ನು ನಾವು ಸಾಕಷ್ಟು ಅನುಭವಿಸಿದ್ದೇವೆ. ಎರಡನೇ ಅಲೆ ಈಗಾಗಲೇ ವಕ್ಕರಿಸಿದ್ದು, ಹಲವು ಮಂದಿಗೆ ಸೋಂಕು ತಗಲಿದೆ. ಈ ನಡುವೆ ಸರಕಾರ ಕೋವಿಡ್ ನಿರೋಧಕ ಲಸಿಕೆ ವಿತರಣೆಯ ವೇಗವನ್ನು ಹೆಚ್ಚಿಸಲು ಶತಪ್ರಯತ್ನ ನಡೆಸುತ್ತಿದೆ. ಎಲ್ಲೂ ಕೊರತೆಯಾಗದಂತೆಯೂ ನೋಡಿಕೊಳ್ಳುತ್ತಿದೆ. ಕರಾವಳಿಯ ಎಲ್ಲೆಡೆ ಲಸಿಕೆ ಲಭ್ಯವಿದ್ದು, ನಗರಗಳು ಮಾತ್ರವಲ್ಲ ಗ್ರಾಮ ಗ್ರಾಮಗಳಲ್ಲೂ ಇದು ಯಶಸ್ವಿಯಾಗಬೇಕು. ಇದರಲ್ಲಿ ನಮ್ಮ, ನಿಮ್ಮೆಲ್ಲರ ಪಾತ್ರವಿದೆ. ನಮ್ಮ-ನಿಮ್ಮ ಪರಿಸರದ ಎಲ್ಲ ಅರ್ಹರು ಬೇಗನೆ ಲಸಿಕೆ ತೆಗೆದುಕೊಳ್ಳುವಂತೆ ನೋಡಿದರೆ ಎರಡನೇ ಅಲೆಯನ್ನು ತಕ್ಕ ಮಟ್ಟಿಗೆ ಎದುರಿಸಿದಂತೆಯೇ ಸರಿ.

ಕೋವಿಡ್ ತಡೆಯಲು  ಕೋವಿಡ್‌ ಲಸಿಕೆಯನ್ನು ಪ್ರತಿಯೊಬ್ಬರು ಪಡೆಯಬೇಕು. ನಾನೂ  ಲಸಿಕೆ ಹಾಕಿಸಿಕೊಂಡಿದ್ದೇನೆ. ಯಾವುದೇ ತೆರನಾದ  ಆರೋಗ್ಯ ಸಂಬಂಧಿತ  ಅಡ್ಡಪರಿಣಾಮ ಆಗಿರುವುದಿಲ್ಲ. ಪ್ರಮುಖವಾಗಿ ಹಿರಿಯರು ಹಾಗೂ ಮಧ್ಯವಯಸ್ಕರು ಲಸಿಕೆಯನ್ನು ಹಾಕಿಸಿಕೊಳ್ಳಿ ಮತ್ತು ಬೇರೆಯವರು ಹಾಕಿಸಿಕೊಳ್ಳುವಂತೆ ಪ್ರೇರೇಪಿಸಿ. – ಸ್ವಾಮಿ ಜಿತಕಾಮಾನಂದಜಿ,-ಅಧ್ಯಕ್ಷರು, ರಾಮಕೃಷ್ಣ ಮಠ ಮಂಗಳೂರು

ನಾನು ಲಸಿಕೆ ತೆಗೆದುಕೊಂಡಿದ್ದೇನೆ. ಅದು ನನ್ನ ಮೇಲೆ ಯಾವುದೇ ರೀತಿಯ ಅಡ್ಡಪರಿಣಾಮ ಬೀರಿಲ್ಲ. ಎಲ್ಲ ಹಿರಿಯ ನಾಗರಿಕರು ಕಡ್ಡಾಯವಾಗಿ  ಲಸಿಕೆ ತೆಗೆದುಕೊಳ್ಳಿರಿ. ಇದರಿಂದಾಗಿ ಕೊರೊನಾ ಸೋಂಕು ಹರಡುವಿಕೆ ನಿಯಂತ್ರಣ ಸಾಧ್ಯ. ಮನೆಯೊಳಗೆ ಆತಂಕದಲ್ಲಿ ಕಾಲ ಕಳೆಯುವ ಬದಲು ಲಸಿಕೆ ಹಾಕಿಕೊಂಡು ಆತ್ಮವಿಶ್ವಾಸದಿಂದ ಬದುಕು ಸಾಗಿಸೋಣ. ಡಾ| ಬಿ.ಎ. ವಿವೇಕ ರೈ, ವಿಶ್ರಾಂತ ಕುಲಪತಿ ಕನ್ನಡ ವಿಶ್ವವಿದ್ಯಾನಿಲಯ, ಹಂಪಿ

 

ಕೋವಿಡ್ ರೋಗ ನಿಯಂತ್ರಣದ ನಿಟ್ಟಿನಲ್ಲಿ ಉದಯವಾಣಿ ಪತ್ರಿಕೆಯು “ಲಸಿಕೆಯೇ ಶ್ರೀರಕ್ಷೆ’ ಎಂಬ ಅಭಿಯಾನವನ್ನು ಹಮ್ಮಿಕೊಂಡಿದ್ದು, ಸಾರ್ವಜನಿಕರು ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಲಸಿಕೆ ಹಾಕಿಸಿಕೊಳ್ಳುವ ಕುರಿತಂತೆ ಸಾರ್ವಜನಿಕರಿಗೆ ಇರುವ ಕೆಲವೊಂದು ಪ್ರಶ್ನೆಗಳಿಗೆ ಮಂಗಳೂರು ತಾಲೂಕು ನೋಡಲ್‌ ಅಧಿಕಾರಿ ಡಾ| ನವೀನ್‌ಚಂದ್ರ ಕುಲಾಲ್‌ ಅವರು ಉತ್ತರಿಸಿದ್ದಾರೆ.

ಅಪಘಾತವಾದ, ಹೃದಯ ಸಂಬಂಧಿ ಕಾಯಿಲೆ, ಅಸ್ತಮಾ ಇರುವ 49 ವರ್ಷದ ನಾನು ಲಸಿಕೆ ತೆಗೆದುಕೊಳ್ಳಬಹುದೇ?- ಶ್ರೀಪತಿ, ಮಂಗಳೂರು

ಸದ್ಯ ಎರಡನೇ ಹಂತದ ಲಸಿಕೆ ಅಭಿಯಾನ ನಡೆಯುತ್ತಿದ್ದು, 45ರಿಂದ 60 ವರ್ಷದೊಳಗಿನ ಅನಾರೋಗ್ಯ ಹೊಂದಿದವರು (20 ಕಾಯಿಲೆ, ನಿಗದಿತ ನಮೂನೆ ಪ್ರಮಾಣಪತ್ರ ಅಗತ್ಯ) ಲಸಿಕೆ ಪಡೆಯಲು ಅವಕಾಶವಿದೆ. ಜ್ವರ ಹೊರತುಪಡಿಸಿ ಯಾವುದೇ ಕಾಯಿಲೆ ಇದ್ದವರು ಲಸಿಕೆ ಪಡೆಯಬಹುದು.

ಕೊವಿಶೀಲ್ಡ್‌ ಮತ್ತು ಕೊವ್ಯಾಕ್ಸಿನ್‌ ವ್ಯತ್ಯಾಸ ಏನು? ಯಾವ ಲಸಿಕೆ ತೆಗೆದುಕೊಂಡರೆ ಒಳ್ಳೆಯದು?- ಪದ್ಮಲತಾ, ಮಂಗಳೂರು

ಇವೆರಡೂ ಕೋವಿಡ್‌ ರೋಗ ನಿರೋಧಕ ಲಸಿಕೆಗಳೇ ಆಗಿವೆ. ತಯಾರಿಕಾ ಕಂಪೆನಿಗಳು ಮಾತ್ರ ಬೇರೆಬೇರೆ ವಿನಾ ಯಾವುದೇ ರೀತಿಯ ವ್ಯತ್ಯಾಸ ಇಲ್ಲ. ದ.ಕ. ಜಿಲ್ಲೆಯಲ್ಲಿ ಸದ್ಯ ಕೊವಿಶೀಲ್ಡ್‌ ಮತ್ತು ಕೊವ್ಯಾಕ್ಸಿನ್‌ ಎರಡೂ ಲಸಿಕೆಗಳನ್ನು ನೀಡಲಾಗುತ್ತಿದೆ. ಇದರಲ್ಲಿ ಆಯ್ಕೆ ಮಾಡಲು ಅವಕಾಶ ಇಲ್ಲ. ಮೊದಲ ಡೋಸ್‌ ಯಾವ ಔಷಧ ತೆಗೆದುಕೊಳ್ಳಲಾಗಿದೆಯೋ ಎರಡನೇ ಬಾರಿಯೂ ಅದನ್ನೇ ತೆಗೆದುಕೊಳ್ಳಬೇಕು.

ಲಸಿಕೆ ಹಾಕಿದ ಬಳಿಕ ಆ್ಯಂಟಿಬಯಾಟಿಕ್‌ ಅಥವಾ ಇನ್ಯಾವುದೇ ಔಷಧ ತೆಗೆದುಕೊಳ್ಳಬಹುದೇ?- ವಿಷ್ಣು ಪಾಟೀಲ್‌, ಮಂಗಳೂರು

ಇತರ ಕಾಯಿಲೆಗೆ ಆ್ಯಂಟಿಬಯಾಟಿಕ್‌ ಪಡೆದುಕೊಳ್ಳಲು ಯಾವುದೇ ನಿರ್ಬಂಧವಿಲ್ಲ. ಕೋವಿಡ್‌ ನಿರೋಧಕ ಲಸಿಕೆ ತೆಗೆದುಕೊಳ್ಳುವುದರೊಂದಿಗೇ ಆ್ಯಂಟಿಬಯಾಟಿಕ್‌ ಕೂಡ ಸೇವಿಸಬಹುದು.

ಮಂಗಳೂರಿನ ಲಸಿಕೆ ಎಲ್ಲಿ ಸಿಗುತ್ತದೆ?ರಮೇಶ್‌, ಪುತ್ತೂರು

ನಗರದಲ್ಲಿ 10 ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ವೆನ್ಲಾಕ್‌ ಜಿಲ್ಲಾಸ್ಪತ್ರೆ, ಸುಮಾರು 28 ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯಲು ಅವಕಾಶ ಇದೆ.

ಎಲ್ಲ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‌ಗೆ ಲಸಿಕೆ ಲಭ್ಯವಿದೆಯೇ?ಕೃಷ್ಣ, ಉಪ್ಪಿನಂಗಡಿ

ಜಿಲ್ಲೆಯ 66 ಪ್ರಾಥಮಿಕ ಆರೋಗ್ಯ ಕೇಂದ್ರ, 12 ನಗರ ಪ್ರಾ.ಆ. ಕೇಂದ್ರ, 6 ಸಮುದಾಯ ಆರೋಗ್ಯ ಕೇಂದ್ರ 4 ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆ, ಸುಮಾರು 35 ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಅಭಿಯಾನ ನಡೆಯುತ್ತಿದೆ. ಸರಕಾರಿ ಆಸ್ಪತ್ರೆಗಳಲ್ಲಿ ಉಚಿತ, ಖಾಸಗಿಯಲ್ಲಿ 250 ರೂ. ನೀಡಿ ಲಸಿಕೆ ಪಡೆಯಬಹುದು.

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.