Ullal ವೀರರಾಣಿ ಅಬ್ಬಕ್ಕ ಉತ್ಸವ ಸಂಪನ್ನ; ಇಬ್ಬರಿಗೆ ವೀರರಾಣಿ ಅಬ್ಬಕ್ಕ ಪ್ರಶಸ್ತಿ ಪ್ರದಾನ
Team Udayavani, Feb 27, 2024, 12:41 AM IST
ಉಳ್ಳಾಲ: ನಗರಸಭೆಯ ಮಹಾತ್ಮಾ ಗಾಂಧಿ ರಂಗಮಂದಿರದಲ್ಲಿ ಶನಿವಾರ ಜರಗಿದ ವೀರ ರಾಣಿ ಅಬ್ಬಕ್ಕ ಉತ್ಸವ 2023-24ರ ಸಮಾರೋಪ ಸಮಾರಂಭದಲ್ಲಿ ಲೇಖಕಿ ಡಾ| ಪ್ರಮೀಳಾ ಮಾಧವ್ ಮತ್ತು ಪದ್ಮಶ್ರೀ ಪುರಸ್ಕೃತ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟು ಡಾ| ಮಾಲತಿ ಕೆ. ಹೊಳ್ಳ ಅವರಿಗೆ ವೀರರಾಣಿ ಅಬ್ಬಕ್ಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮಂಗಳೂರು ವಿ.ವಿ. ಕುಲಪತಿ ಡಾ| ಜಯರಾಜ್ ಅಮೀನ್ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿ, ವಿ.ವಿ.ಯಲ್ಲಿರುವ ವೀರ ರಾಣಿ ಅಬ್ಬಕ್ಕ ಪೀಠ ಹಾಗೂ ಅಬ್ಬಕ್ಕ ಉತ್ಸವ ಸಮಿತಿ ಜಂಟಿಯಾಗಿ ಅಬ್ಬಕ್ಕಳ ವಿಚಾರದಲ್ಲಿ ಸಂಶೋಧನಾತ್ಮಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಎಂದರು.
ಹಾವೇರಿ ವಿ.ವಿ.ಯ ವಿಶ್ರಾಂತ ಕುಲಪತಿ ಡಾ| ಚಿನ್ನಪ್ಪ ಗೌಡ ಅಭಿನಂದನ ಮಾತುಗಳನ್ನಾಡಿ, ಅಬ್ಬಕ್ಕ ಉತ್ಸವ ಸಮಿತಿ 27 ವರ್ಷಗಳಿಂದ 25,000 ರೂ. ನಗದು ಸಹಿತವಾಗಿ ಪ್ರಶಸ್ತಿ ನೀಡುತ್ತಾ ಬಂದಿದೆ. ಇದು ಶ್ಲಾಘನೀಯ ಎಂದು ಹೇಳಿದರು.ಇದೇ ವೇಳೆ ಪ್ರೊ| ಅಮೃತ ಸೋಮೇಶ್ವರ ಅವರ ಸಂಸ್ಮರಣೆ ನಡೆಯಿತು.
ಸಂತ ಸೆಬಾಸ್ತಿಯನ್ನರ ಧರ್ಮಕೇಂದ್ರದ ವಂ| ಸಿಪ್ರಿಯನ್ ಪಿಂಟೋ, ಹಿಂದುಳಿದ ವರ್ಗದ ಆಯೋಗದ ಸದಸ್ಯ ಕೆ.ಟಿ. ಸುವರ್ಣ, ಶ್ರೀ ಚೀರುಂಬಾ ಭಗವತಿ ಕ್ಷೇತ್ರದ ಆಡಳಿತ ಮೊಕ್ತೇಸರ ಗಂಗಾಧರ ಉಳ್ಳಾಲ, ಭಾರತೀಯ ತೀಯಾ ಸಮಾಜದ ಅಧ್ಯಕ್ಷ ಸದಾಶಿವ ಉಳ್ಳಾಲ, ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ನ ನಿಕಟಪೂರ್ವ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರು, ಉದ್ಯಮಿ ಪ್ರಕಾಶ್ ಕುಂಪಲ, ಸೋಮೇಶ್ವರ ಗ್ರಾ.ಪಂ.ನ ಮಾಜಿ ಅಧ್ಯಕ್ಷ ಚಂದ್ರಶೇಖರ ಉಚ್ಚಿಲ, ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ ಕೃಷ್ಣಪ್ಪ ಸಾಲಿಯಾನ್, ದ.ಕ. ಕಸಾಪ ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಮೊಗವೀರ ಸಂಘದ ಮಾಜಿ ಅಧ್ಯಕ್ಷ ಸದಾನಂದ ಬಂಗೇರ, ಹಿರಿಯರಾದ ಸೀತಾರಾಮ ಬಂಗೇರ, ಉಳ್ಳಾಲ ನಗರಸಭೆಯ ಮಾಜಿ ಉಪಾಧ್ಯಕ್ಷ ಆಯೂಬ್ ಮಂಚಿಲ, ಸದಸ್ಯರಾದ ಸಪ್ನ ಹರೀಶ್, ನಮಿತಾ ಗಟ್ಟಿ, ಸೋಮೇಶ್ವರ ಪುರಸಭಾ ಸದಸ್ಯೆ ಸಪ್ನಾ ಗಟ್ಟಿ, ಉತ್ಸವ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಅಬ್ಬಕ್ಕ ಉತ್ಸವ ಸಮಿತಿ ಅಧ್ಯಕ್ಷ ದಿನಕರ ಉಳ್ಳಾಲ ಸ್ವಾಗತಿಸಿದರು. ಸ್ವಾಗತ ಸಮಿತಿ ಅಧ್ಯಕ್ಷ ಕೆ. ಜಯರಾಮ ಶೆಟ್ಟಿ ಪ್ರಸ್ತಾವನೆಗೈದರು. ಪ್ರಧಾನ ಕಾರ್ಯದರ್ಶಿ ಧನಲಕ್ಷಿ$¾à ಗಟ್ಟಿ ಮತ್ತು ಕೆ.ಎಂ.ಕೆ. ಮಂಜನಾಡಿ ಕಾರ್ಯಕ್ರಮ ನಿರ್ವಹಿಸಿದರು. ಕೋಶಾಧಿಕಾರಿ ಆನಂದ ಕೆ. ಅಸೈಗೋಳಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ
MUST WATCH
ಹೊಸ ಸೇರ್ಪಡೆ
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ