ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
ಕಂಬಳಕ್ಕೆ ಕೃಷಿಕರ ಆರಾಧನೆಯ ಧಾರ್ಮಿಕ ನಂಟು: ಕೃಷ್ಣಪ್ರಸಾದ್ ಆಚಾರ್ಯ
Team Udayavani, Dec 7, 2019, 5:07 PM IST
ಪುಂಜಾಲಕಟ್ಟೆ : ಬಂಟ್ವಾಳ ತಾಲೂಕು ಎಲಿಯನಡುಗೋಡು ಮತ್ತು ಬೆಳ್ತಂಗಡಿ ತಾಲೂಕಿನ ಆರಂಬೋಡಿ ಗ್ರಾಮದ ಗಡಿ ಭಾಗದಲ್ಲಿರುವ ಹೊಕ್ಕಾಡಿಗೋಳಿ ಮಹಿಷಮರ್ದಿನಿ ಕಂಬಳ ಸಮಿತಿ ವತಿಯಿಂದ ಹೊಕ್ಕಾಡಿಗೋಳಿಯಲ್ಲಿ ನಡೆಯುವ ಇತಿಹಾಸ ಪ್ರಸಿದ್ಧ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಶನಿವಾರ ಬೆಳಗ್ಗೆ ಚಾಲನೆ ನೀಡಲಾಯಿತು.
ಬೆಳಗ್ಗೆ ಶ್ರೀಕ್ಷೇತ್ರ ಪೂಂಜದ ಆಸ್ರಣ್ಣ ಕೃಷ್ಣ ಪ್ರಸಾದ್ ಆಚಾರ್ಯ ಅವರು ಕಂಬಳದ ಕರೆಯನ್ನು ಉದ್ಘಾಟಿಸಿ, ಅನಾದಿ ಕಾಲದಿಂದ ದೇಗುಲದ ಹಿನ್ನೆಲೆಯಲ್ಲಿ ನಡೆಯುತ್ತಿರುವ ಜಾನಪದ ಕ್ರೀಡೆ ಕಂಬಳ ಕೃಷಿಕರ ಆರಾಧನೆಯಾಗಿ ಧಾರ್ಮಿಕ ನಂಟು ಹೊಂದಿದೆ. ಅಹಿಂಸಾತ್ಮಕವಾಗಿ ನಡೆಯುವ ಕಂಬಳ ದೇವರ ಅನುಗ್ರಹದಿಂದ ಯಶಸ್ವಿಯಾಗಿ ಸಾಗಲಿ ಎಂದು ಶುಭ ಹಾರೈಸಿದರು.
ಕಂಬಳ ಸಮಿತಿ ಅಧ್ಯಕ್ಷ ನೋಣಾಲುಗುತ್ತು ರಶ್ಮಿತ್ ಶೆಟ್ಟಿ ಕೈತ್ರೋಡಿ ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾ ಸಮಿತಿ ನಿಕಟಪೂರ್ವ ಕಾರ್ಯದರ್ಶಿ ವಿಜಯ ಕುಮಾರ್ ಕಂಗಿನಮನೆ ಮಾತನಾಡಿ, ಶಿಸ್ತುಬದ್ಧ ಕಂಬಳಕ್ಕೆ ರಾಜ್ಯ ಮತ್ತು ಕೇಂದ್ರ ಸರಕಾರದ ಬೆಂಬಲವೂ ಸಿಗಲಿದೆ ಎಂದರು.
ಜಿಲ್ಲಾ ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ಎಡೂ¤ರು ರಾಜೀವ ಶೆಟ್ಟಿ, ಎಪಿಎಂಸಿ ಮಾಜಿ ಸದಸ್ಯ ರತ್ನಕುಮಾರ್ ಚೌಟ, ಸಿದ್ದಕಟ್ಟೆ ವೈದ್ಯ ಡಾ| ಸುದೀಪ್ ಕುಮಾರ್ ಜೈನ್, ಉದ್ಯಮಿ ಟಿ. ನರಸಿಂಹ ಪೈ ಮಾವಿನಕಟ್ಟೆ, ದಿನೇಶ ಮೈಂದಬೆಟ್ಟು ರಾಯಿ ಮತ್ತಿತರರು ಶುಭ ಹಾರೈಸಿದರು.
ಸಮಿತಿ ಗೌರವಾಧ್ಯಕ್ಷ ಸಂಜೀವ ಶೆಟ್ಟಿ ಗುಂಡ್ಯಾರು, ಗ್ರಾ.ಪಂ. ಅಧ್ಯಕ್ಷ ಪ್ರಭಾಕರ ಎಚ್. ಹುಲಿಮೇರು, ಜಿ.ಪಂ. ಸದಸ್ಯ ಎಂ. ತುಂಗಪ್ಪ ಬಂಗೇರ, ಸಮಿತಿ ಗೌರವ ಸಲಹೆಗಾರರಾದ ಬಾಬು ರಾಜೇಂದ್ರ ಶೆಟ್ಟಿ ಅಜ್ಜಾಡಿ, ಕಿರಣ್ ಕುಮಾರ್ ಮಂಜಿಲ, ಪದಾಧಿಕಾರಿಗಳಾದ ಎಚ್. ಹರೀಶ ಹಿಂಗಾಣಿ, ಸಂದೇಶ ಶೆಟ್ಟಿ ಪೊಡುಂಬ, ಪುಷ್ಪರಾಜ್ ಜೈನ್ ನಡೊÂàಡಿ, ಹರಿಪ್ರಸಾದ್ ಶೆಟ್ಟಿ ಕುರುಡಾಡಿ, ರಾಜೇಶ ಶೆಟ್ಟಿ ಕೊನೆರೊಟ್ಟು, ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ, ಜನಾರ್ದನ ಬಂಗೇರ ತಿಮರಡ್ಕ, ನಿತ್ಯಾನಂದ ಪೂಜಾರಿ ಕೆಂತಲೆ, ಕೃಷ್ಣ ಶೆಟ್ಟಿ ಉಮನೊಟ್ಟು ಮತ್ತಿತರರು ಉಪಸ್ಥಿತರಿದ್ದರು.
ಸಮಿತಿ ಗೌರವ ಸಲಹೆಗಾರ, ವಕೀಲ ಸುರೇಶ ಶೆಟ್ಟಿ ಸ್ವಾಗತಿಸಿ, ಪ್ರಚಾರ ಸಮಿತಿ ಸಂಚಾಲಕ ಮೋಹನ್ ಕೆ. ಶ್ರೀಯಾನ್ ರಾಯಿ ವಂದಿಸಿದರು.
ಅಹಿಂಸಾತ್ಮಕ ಕಂಬಳ
ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಪಿ.ಆರ್ .ಶೆಟ್ಟಿ ಕೂಳೂರು ಪೊಯ್ಯೊಲು ಮಾತನಾಡಿ, ಸುಪ್ರೀಂ ಕೋರ್ಟ್ನ ನಿರ್ದೇಶನದಂತೆ ಜಿಲ್ಲೆಯಲ್ಲಿ ಅಹಿಂಸಾತ್ಮಕ ಕಂಬಳ ನಡೆಸಲು ಜಿಲ್ಲಾ ಸಮಿತಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಶಿಸ್ತು ಮತ್ತು ನಿಯಮಾವಳಿ ಉಲ್ಲಂಘಿಸಿದ ಕೋಣಗಳನ್ನು ಮುಂದಿನ ಕಂಬಳದಲ್ಲಿ ಭಾಗವಹಿಸಲು ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು