ಗ್ರಾ.ಪಂ.ಗೆ ಶಿಫಾರಸು ಪತ್ರದ ಮಾಹಿತಿ ಇಲ್ಲ; ಆಕ್ರೋಶ


Team Udayavani, Jul 4, 2018, 2:15 AM IST

seeds-3-7.jpg

ಬೆಳ್ತಂಗಡಿ: ತೋಟಗಾರಿಕೆ ಇಲಾಖೆಯು ಕೃಷಿಕರಿಗೆ ತರಕಾರಿ ಬೀಜಗಳನ್ನು ವಿತರಿಸುತ್ತಿದ್ದು, ಬೆಳ್ತಂಗಡಿ ತಾಲೂಕಿನಲ್ಲಿ ಇದರ ಫಲಾನುಭವಿಗಳು ತಮ್ಮ ಗ್ರಾ.ಪಂ.ನಿಂದ ಶಿಫಾರಸು ಪತ್ರ ತರಲು ಸೂಚಿಸಲಾಗಿದೆ. ತೋಟಗಾರಿಕೆ ಇಲಾಖೆಯಿಂದ ಕಳುಹಿಸಿದ ಅರ್ಜಿ ನಮೂನೆ ಕೆಲವೊಂದು ಗ್ರಾ.ಪಂ.ಗೆ ತಲುಪದೇ ಇರುವುದು ಕೃಷಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕೃಷಿಕರನ್ನು ಉತ್ತೇಜಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರವು ಕೃಷಿಭಾಗ್ಯ ಯೋಜನೆಯಲ್ಲಿ ಕಳೆದ ಆರ್ಥಿಕ ವರ್ಷದ ಅಂತ್ಯದಲ್ಲಿ ತರಕಾರಿ ಬೀಜಗಳನ್ನು ವಿತರಿಸಿದೆ. ಕೃಷಿಕರು ಇದರ ಫಲಾನುಭವಿಗಳಾಗಬೇಕಾದರೆ ನಿರ್ದಿಷ್ಟ ದಾಖಲೆಗಳನ್ನು ಸಲ್ಲಿಸಿ ಉಚಿತವಾಗಿ ತರಕಾರಿ ಬೀಜಗಳನ್ನು ಪಡೆಯಬಹುದಾಗಿದೆ.

ಜಿಲ್ಲೆಯ ಇತರ 4 ತಾಲೂಕಿಗೆ ನೀಡಲಾದ ತರಕಾರಿ ಬೀಜ ಈಗಾಗಲೇ ಮುಗಿದಿದ್ದು, ಬೆಳ್ತಂಗಡಿ ತಾಲೂಕಿನಲ್ಲಿ ಮಾತ್ರ  ಶೇ. 40ರಷ್ಟು ಬೀಜ ಇನ್ನೂ ಇದೆ. ಇಲಾಖೆಯ ಜಿಲ್ಲಾ ಉಪನಿರ್ದೇಶಕರನ್ನು ಕೇಳಿದರೆ ಕೃಷಿಕರು ದಾಖಲೆಯಾಗಿ ಆಧಾರ್‌ ಕಾರ್ಡ್‌, ಆರ್‌ಟಿಸಿ ಮಾತ್ರ ಸಾಕು ಎಂದರೆ, ಬೆಳ್ತಂಗಡಿಯ ಸಹಾಯಕ ನಿರ್ದೇಶಕರು ಗ್ರಾ.ಪಂ.ನ ಶಿಫಾರಸು ಪತ್ರ, ಬ್ಯಾಂಕ್‌ ಪಾಸ್‌ ಬುಕ್‌ ಪ್ರತಿ ಬೇಕು ಎನ್ನುತ್ತಿದ್ದಾರೆ.

ಕಾಲು ಎಕ್ರೆಗೆ 500 ರೂ.
ತೋಟಗಾರಿಕೆ ಇಲಾಖೆಯು ತರಕಾರಿ ಬೀಜಗಳನ್ನು ಉಚಿತವಾಗಿ ವಿತರಿಸುತ್ತಿದೆಯಾದರೂ ಕೃಷಿಕರ ಲಭ್ಯ ಜಮೀನಿನ ಆಧಾರದಲ್ಲಿ ನಿರ್ದಿಷ್ಟ ಮೌಲ್ಯದ ಬೀಜಗಳನ್ನೇ ವಿತರಿಸುತ್ತಿದೆ. ಅಂದರೆ ಕಾಲು ಎಕ್ರೆ ಜಮೀನಿಗೆ 500 ರೂ.ಗಳ ಬೀಜ ವಿತರಿಸಬಹುದಾಗಿದ್ದು, ಎಕ್ರೆಗೆ 2000 ರೂ.ಗಳ ಬೀಜ ವಿತರಿಸಲು ಅವಕಾಶವಿದೆ.

ಬೆಂಡೆಕಾಯಿ, ಹೀರೆಕಾಯಿ, ಸೌತೆ ಹಾಗೂ ಸೋರೆಕಾಯಿ ಹೀಗೆ ನಾಲ್ಕು ವಿಧಗಳ ತರಕಾರಿ ಬೀಜಗಳು ಇಲಾಖೆಯಲ್ಲಿ ಲಭ್ಯವಿವೆ. ಬೀಜಗಳನ್ನು ವಿತರಿಸಿ ಸ್ವಲ್ಪ ಸಮಯಗಳ ಬಳಿಕ ಇಲಾಖೆಯು ಕೃಷಿಕರ ಜಮೀನಿಗೆ ತೆರಳಿ ತರಕಾರಿ ಗಿಡಗಳ ಪರಿಸ್ಥಿತಿಯನ್ನು ಪರಿಶೀಲನೆ ನಡೆಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇ-ಮೇಲ್‌ ಗೊಂದಲ!
ತಾಲೂಕು ತೋಟಗಾರಿಕೆ ಇಲಾಖೆಯಿಂದ ಪ್ರತಿ ಗ್ರಾ.ಪಂ.ಗಳಿಗೆ ಶಿಫಾರಸು ಪತ್ರಕ್ಕಾಗಿ ಅರ್ಜಿ ನಮೂನೆಯನ್ನು ಕಳುಹಿಸಲಾಗಿದೆ. ಆದರೆ ಕೆಲವೊಂದು ಗ್ರಾ.ಪಂ.ಗಳು ಇ-ಮೇಲ್‌ ವಿಳಾಸ ಬದಲಿಸಿವೆ. ಜತೆಗೆ ಹೊಸದಾಗಿ ಅಸ್ತಿತ್ವಕ್ಕೆ ಬಂದ ಗ್ರಾ. ಪಂ.ಗಳ ಇ-ಮೇಲ್‌ ವಿಳಾಸ ಸಿಗದೆ ಈ ರೀತಿ ತೊಂದರೆಯಾಗಿದೆ. ಇಲಾಖೆಯಿಂದ ಮಾರ್ಚ್‌ ಹಾಗೂ ಜೂನ್‌ ತಿಂಗಳಲ್ಲಿ ಎರಡೆರಡು ಬಾರಿ ಇ-ಮೇಲ್‌ ಕಳುಹಿಸಲಾಗಿದ್ದರೂ ಕೆಲವೊಂದು ಗ್ರಾ.ಪಂ.ಗೆ ಮಾಹಿತಿ ತಲುಪಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಪ್ರಸ್ತುತ ಕೃಷಿಕರು ತೋಟಗಾರಿಕೆ ಇಲಾಖೆಗೆ ಬಂದು ಶಿಫಾರಸು ಪತ್ರಕ್ಕಾಗಿ ಗ್ರಾ.ಪಂ.ಗೆ ತೆರಳಿದರೆ ನಮಗೆ ಮಾಹಿತಿಯೇ ಇಲ್ಲ ಎಂಬ ಉತ್ತರ ಸಿಗುತ್ತಿದೆ. ಈ ರೀತಿ ಇಲಾಖೆ – ಗ್ರಾ.ಪಂ.ಗೆ ಅಲೆದಾಡುವ ಸ್ಥಿತಿ ನಿರ್ಮಾಣವಾಗಿದ್ದು, ಕೃಷಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಜಿಲ್ಲೆಯ ಟಾರ್ಗೆಟ್‌
ದ.ಕ. ಜಿಲ್ಲೆಯ ಪುತ್ತೂರು, ಸುಳ್ಯ, ಬಂಟ್ವಾಳ ತಾಲೂಕಿಗೆ ತಲಾ 6 ಲಕ್ಷ ರೂ., ಮಂಗಳೂರು ತಾಲೂಕಿಗೆ 3 ಲಕ್ಷ ರೂ. ಮೊತ್ತದ ತರಕಾರಿ ಬೀಜ ವಿತರಿಸಿದೆ. ಬೆಳ್ತಂಗಡಿ ತಾಲೂಕಿಗೆ ಮಾತ್ರ ಅತಿ ಹೆಚ್ಚು ಅಂದರೆ 9 ಲಕ್ಷ ರೂ.ಗಳ ತರಕಾರಿ ಬೀಜ ನೀಡಲಾಗಿದೆ. ಪ್ರಸ್ತುತ ಬೆಳ್ತಂಗಡಿ ತಾಲೂಕಿನಲ್ಲಿ ಶೇ. 40ರಷ್ಟು ಬೀಜ ವಿತರಣೆಗೆ ಬಾಕಿಯಿದೆ.

ಇ-ಮೇಲ್‌ ತೊಂದರೆ
ಪ್ರತಿ ಗ್ರಾ.ಪಂ.ಗೂ ಅರ್ಜಿ ನಮೂನೆಯನ್ನು ಇ-ಮೇಲ್‌ ಮಾಡಲಾಗಿದ್ದು, ಕೆಲವು ಗ್ರಾ.ಪಂ.ಗಳ ಇ-ಮೇಲ್‌ ವಿಳಾಸ ಬದಲಾವಣೆ, ಹೊಸ ಗ್ರಾ.ಪಂ.ಗಳ ವಿಳಾಸ ಸಿಗದೆ ಅರ್ಜಿ ನಮೂನೆ ತಲುಪದೇ ಇರ ಬಹುದು. ಅದರ ಕುರಿತು ಮಾಹಿತಿ ನೀಡುವ ಕಾರ್ಯ ಮಾಡಲಾಗುತ್ತದೆ.  ನಿಗದಿತ ದಾಖಲೆಯಿಲ್ಲದೆ ತರಕಾರಿ ಬೀಜ ವಿತರಿಸುವಂತಿಲ್ಲ. 
– ಶಿವಪ್ರಕಾಶ್‌, ಸಹಾಯಕ ನಿರ್ದೇಶಕರು (ಪ್ರಭಾರ) ತೋಟಗಾರಿಕೆ ಇಲಾಖೆ, ಬೆಳ್ತಂಗಡಿ

ಗ್ರಾ.ಪಂ.ನಲ್ಲಿ ಮಾಹಿತಿ ಇಲ್ಲ
ತೋಟಗಾರಿಕೆ ಇಲಾಖೆ ತರಕಾರಿ ಬೀಜಕ್ಕಾಗಿ ರೈತರನ್ನು ಅಲೆದಾಡಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಶಿಫಾರಸು ಪತ್ರಕ್ಕಾಗಿ ಗ್ರಾ.ಪಂ.ಗೆ ತೆರಳಿದರೆ ಮಾಹಿತಿ ಇಲ್ಲ ಎನ್ನುತ್ತಾರೆ. ತೆಕ್ಕಾರು ಗ್ರಾ.ಪಂ.ಗೆ ಇಲಾಖೆಯಿಂದ ಅರ್ಜಿ ನಮೂನೆ ಬಂದಿಲ್ಲ. ಅಧಿಕಾರಿಗಳು ರೈತರನ್ನು ಸತಾಯಿಸುವ ಕೆಲಸ ಮಾಡುತ್ತಾರೆ. ಜತೆಗೆ ಜನ ಪ್ರತಿನಿಧಿಗಳಿಗೂ ಮಾಹಿತಿ ನೀಡುತ್ತಿಲ್ಲ. 
– ಮಂಜುನಾಥ್‌ ಸಾಲ್ಯಾನ್‌, ಮಾಜಿ ಸದಸ್ಯರು, ತಾ.ಪಂ., ಬೆಳ್ತಂಗಡಿ

— ಕಿರಣ್‌ ಸರಪಾಡಿ

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

udAgricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Agricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Sullia: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಈವರೆಗೂ 7ಮಂದಿಯ ಪತ್ತೆಯೇ ಆಗಿಲ್ಲ!

Sullia: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಈವರೆಗೂ 7ಮಂದಿಯ ಪತ್ತೆಯೇ ಆಗಿಲ್ಲ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.