ವಾಹನಗಳ ಬಾಡಿಗೆ ಪಾವತಿ ಇನ್ನೂ ಬಾಕಿ!


Team Udayavani, Jun 26, 2019, 5:53 AM IST

13

ಸಾಂದರ್ಭಿಕ

ಮಹಾನಗರ: ಲೋಕಸಭೆ ಚುನಾವಣೆ ಮುಗಿದು ಎರಡು ತಿಂಗಳು ಸಮೀಪಿಸಿದರೂ ಚುನಾವಣೆ ಕಾರ್ಯ ನಿಮಿತ್ತ ಅಧಿಕಾರಿ ವರ್ಗದವರ ಓಡಾಟ ಮತ್ತು ಮತದಾನದ ದಿನದಂದು ಬಳಸಿದ್ದ ಬಹುತೇಕ ವಾಹನಗಳಿಗೆ ಬಾಡಿಗೆ ಪಾವತಿ ಇನ್ನೂ ಆಗಿಲ್ಲ. ಈ ಕುರಿತಂತೆ ವಾಹನ ಚಾಲಕರು ಮತ್ತು ಮಾಲಕರು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ಕಂದಾಯ, ಪೊಲೀಸ್‌ ಹಾಗೂ ಭದ್ರತೆ ದಳಗಳು ಚುನಾವಣ ಕಾರ್ಯದ ನಿಮಿತ್ತ ಜಿಲ್ಲಾದ್ಯಂತ ಸುತ್ತಾಡಲು ವಾಹನಗಳ ಆವಶ್ಯಕತೆ ಇರುತ್ತದೆ. ಈ ಸಂದರ್ಭ ದಲ್ಲಿ ನಗರ ವ್ಯಾಪ್ತಿಯ ಆರ್‌ಟಿಒ ಅಧಿಕಾರಿಗಳು ವಾಹನಗಳನ್ನು ಒದಗಿಸಿಕೊಡಬೇಕಾಗುತ್ತದೆ. ಇಲಾಖೆ ವಾಹನ ಚಾಲಕರು, ಮಾಲಕರು ಸಂಘ ಅಥವಾ ಟ್ಯಾಕ್ಸಿ ಮೆನ್ಸ್‌ ಮ್ಯಾಕ್ಸಿ ಕ್ಯಾಬ್‌ ಅಸೋಸಿಯೇಶನ್‌, ಖಾಸಗಿ ಟೂರಿಸ್ಟ್‌ ವಾಹನ ಚಾಲಕರು ಮತ್ತು ಮಾಲ ಕರನ್ನು ಸಂಪರ್ಕಿಸಿ ವಾಹನಗಳನ್ನು ವ್ಯವಸ್ಥೆಗೊಳಿ ಸಬೇಕಾಗುತ್ತದೆ. ಈ ಬಾರಿ ಜಿಲ್ಲಾದ್ಯಂತ ಸುಮಾರು 360 ವಾಹನಗಳನ್ನು ಪಡೆದು ಕೊಳ್ಳಲಾಗಿತ್ತು. ಅದರಲ್ಲಿ ಶೇ. 25ರಷ್ಟು ವಾಹನಗಳ ಪಾವತಿ ಮಾತ್ರ ಆಗಿದೆ.

ಈ ಬಾರಿ ಎ. 18ರಂದು ನಡೆದ ಲೋಕಸಭಾ ಚುನಾವಣೆಗೆ ಸ್ವಲ್ಪ ಮುಂಚಿತವಾಗಿ ಅಗತ್ಯವಿರುವ ವಾಹನಗಳನ್ನು ಪಡೆದುಕೊಳ್ಳಲಾಗಿತ್ತು. ಆದರೆ ಚುನಾವಣೆ ಮುಗಿದು ಎರಡು ತಿಂಗಳು ಕಳೆದರೂ ಬಹುತೇಕ ವಾಹನಗಳ ಪಾವತಿ ಇನ್ನೂ ಆಗಿಲ್ಲ.

ವಾಹನ ನೀಡಲು ನಿರಾಕರಿಸಿದ್ದರು!
ನಗರಗಳಿಗೆ ಹೊರಭಾಗದಿಂದ ಬರುವ ಗಣ್ಯರ ಭದ್ರತೆ, ಚುನಾವಣೆ, ಪಲ್ಸ್ ಪೋಲಿಯೋ ಹಾಗೂ ಇತರ ತುರ್ತು ಸಂದರ್ಭದಲ್ಲಿ ಸಹಿತ ವಿವಿಧ ಕಾರಣಗಳಿಗೆ ಟ್ಯಾಕ್ಸಿ ಮ್ಯಾಕ್ಸಿ ಕ್ಯಾಬ್‌ಗಳನ್ನು ಆರ್‌ಟಿಒ/ ಪೊಲೀಸರು ಬಳಸಿಕೊಳ್ಳುವ ಅವಕಾಶವಿದೆ. ಕಾರಿಗೆ ದಿನ ಬಾಡಿಗೆಯ ರೀತಿಯಲ್ಲಿ ಹಣ ನಿಗದಿ ಮಾಡಿ ಚಾಲಕನ ಸಮೇತ ವಾಹನಗಳನ್ನು ಆರ್‌ಟಿಒ/ ಪೊಲೀಸರು ಪಡೆದುಕೊಳ್ಳುತ್ತಾರೆ. ತಮ್ಮ ಕೆಲಸದ ಬಳಿಕ ನಿಗದಿ ಮಾಡಿದ ಹಣವನ್ನು ನೀಡಿ ವಾಹನವನ್ನು ಹಿಂತಿರಿಗಿಸುವುದು ನಿಯಮ. ಆದರೆ ಕಳೆದ ಕೆಲವು ವರ್ಷಗಳಲ್ಲಿ ಚುನಾವಣೆ ಹಾಗೂ ಗಣ್ಯರ ಆಗಮನದ ಸಂದರ್ಭದಲ್ಲಿ ಬಳಕೆಯಾಗುವ ವಾಹನಗಳ ಬಿಲ್ ಮೊತ್ತ ಪಾವತಿ ಮಾಡಲು ಸರಕಾರ ಹಿಂದೇಟು ಹಾಕಿದ ಹಲವು ಉದಾಹರಣೆಯಿದ್ದ ಕಾರಣದಿಂದ ಪ್ರವಾಸಿ ಕಾರು, ಜೀಪು, ವ್ಯಾನ್‌ನವರು ವಾಹನ ನೀಡಲು ನಿರಾಕರಿಸುತ್ತಿದ್ದರು.

ವಿಧಾನಸಭಾ ಚುನಾವಣೆ ಹಣ ಪಾವತಿ!
ಟಿಪ್ಪು ಜಯಂತಿ ಆಚರಣೆ ಹಿನ್ನೆಲೆಯಲ್ಲಿ 2016 ನ. 8ರಂದು ಕೊಂಡುಹೋಗಿದ್ದ ಕೆಲವು ಟ್ಯಾಕ್ಸಿಗಳ ಬಿಲ್ ಪಾವತಿಗೆ ಹಲವು ತಿಂಗಳು ಕಾಯಬೇಕಾಗಿತ್ತು. ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿಯ ಸಂದರ್ಭದಲ್ಲಿ ಬಳಸಲಾಗಿದ್ದ ವಾಹನಗಳ ಬಿಲ್ ಅನ್ನು ಪೊಲೀಸ್‌ ಇಲಾಖೆ ನೀಡಲು ಹಲವು ತಿಂಗಳು ಕಾಯಿಸಿತ್ತು. ಆದರೆ, ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಳಕೆ ಮಾಡಲಾದ ಎಲ್ಲ ವಾಹನಗಳಿಗೆ ತಡವಾಗಿಯಾದರೂ ಸಮರ್ಪಕ ರೀತಿಯಲ್ಲಿ ಹಣ ನೀಡಿದೆ.

ಆಯಾ ಇಲಾಖೆಯಿಂದಲೇ ಪಾವತಿ

ಚುನಾವಣೆ ಅಥವಾ ಇನ್ನಿತರ ಸರಕಾರಿ ಕೆಲಸಗಳಿಗೆ ವಾಹನಗಳನ್ನು ಒದಗಿಸುವ ಬಗ್ಗೆ ಜಿಲ್ಲಾಧಿಕಾರಿಗಳು ನಮಗೆ ಸೂಚನೆ ನೀಡುತ್ತಾರೆ.ಅದರಂತೆ ನಾವು ವಾಹನಗಳ ವ್ಯವಸ್ಥೆ ಮಾಡುತ್ತೇವೆ. ಆ ಬಳಿಕ ಆಯಾಯಾ ಇಲಾಖೆಯೇ ಅವರಿಗೆ ಪಾವತಿ ಮಾಡುತ್ತದೆ. ಈ ಬಗ್ಗೆ ನಮಗೆ ಯಾವುದೇ ಸಂಬಂಧ ಇರುವುದಿಲ್ಲ.
– ಚಂದ್ರ ಉಪ್ಪಾರ, ಆರ್‌ಟಿಒ, ಮಂಗಳೂರು

15 ದಿನದ ಒಳಗಾಗಿ ಹಣ ಪಾವತಿ ಮಾಡುವ ಭರವಸೆ
ಚುನಾವಣೆ ಬಳಕೆಗೆ ಎ. 12ರಿಂದ ನಮ್ಮ ವಾಹನಗಳನ್ನು ಪಡೆದುಕೊಂಡಿದ್ದರು. ಎ. 18ರ ಅನಂತರ 15 ದಿನದ ಒಳಗಾಗಿ ಹಣ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಎರಡು ತಿಂಗಳು ಕಳೆದರೂ ಹಣ ಪಾವತಿಯಾಗಿಲ್ಲ. ಕೆಲವು ವಾಹನಗಳ ಹಣವನ್ನು ಅಸಮರ್ಪಕವಾಗಿ ನೀಡಿದ್ದಾರೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಲ್ಲೂ ಮಾತುಕತೆ ನಡೆಸಿದ್ದೇವೆ.
– ದಿನೇಶ್‌ ಕುಂಪಲ, ಅಧ್ಯಕ್ಷರು, ದ.ಕ. ಟ್ಯಾಕ್ಸಿ ಮೆನ್ಸ್‌ ಮ್ಯಾಕ್ಸಿ ಕ್ಯಾಬ್‌ ಅಸೋಸಿಯೇಶನ್‌.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.