ಅಲ್ಲಲ್ಲಿ ಹೊಂಡಗಳು ಸೃಷ್ಟಿಯಾಗಿ ವಾಹನ ಸಂಚಾರ ದುಸ್ತರ


Team Udayavani, Jul 27, 2021, 3:20 AM IST

ಅಲ್ಲಲ್ಲಿ ಹೊಂಡಗಳು ಸೃಷ್ಟಿಯಾಗಿ ವಾಹನ ಸಂಚಾರ ದುಸ್ತರ

ಮಹಾನಗರ: ರಾಬಜಪೆ, ಜು. 26: ಇಲ್ಲಿನ ಮುರನಗರ ಜಂಕ್ಷನ್‌ನಿಂದ ಹಳೆ ವಿಮಾನ ನಿಲ್ದಾಣದ ವರೆಗಿನ ರಸ್ತೆಯುದ್ದಕ್ಕೂ ಅಲ್ಲಲ್ಲಿ ಹೊಂಡಗಳು ಸೃಷ್ಟಿಯಾಗಿ ವಾಹನ ಸವಾರರಿಗೆ ಭಾರೀ ತೊಂದರೆಯಾಗಿ, ಸಂಚಾರ ದುಸ್ತರ ಎನಿಸಿದೆ.

ಈ ರಸ್ತೆಯಲ್ಲಿ ಹೊಂಡಗಳು ಬಿದ್ದು, ಸುಮಾರು ಒಂದು ವರ್ಷ ಕಳೆದಿದೆ. ಈ ಹೊಂಡಗಳಿಗೆ ಸ್ಥಳೀಯರು ಕಲ್ಲು, ಮಣ್ಣು ಹಾಕಿ ತೇಪೆ ಹಾಕುತ್ತಿದ್ದಾರೆ, ವಿನಃ ಪೂರ್ಣ ಪ್ರಮಾಣದ ಕಾಮಗಾರಿ ಇನ್ನೂ ಆಗಿಲ್ಲ. ರಸ್ತೆಯ ಇಕ್ಕೆಲಗಳಲ್ಲಿ ಚರಂಡಿ ಇಲ್ಲದಿರುವುದು ಮಳೆಯ ನೀರು ರಸ್ತೆಯಲ್ಲಿಯೇ ಹರಿದು ಹೊಂಡಗಳು ಸೃಷ್ಟಿಯಾಗುತ್ತಿವೆ.

ಈ ರಸ್ತೆಯ ನಿರ್ವಹಣೆ ಕಾಮಗಾರಿಗಳು ಈ ಹಿಂದೆ ವಿಮಾನ ನಿಲ್ದಾಣ ಪ್ರಾಧಿಕಾರದಿಂದ ನಡೆಯುತ್ತಿದ್ದವು. ಈ ಪ್ರಾಧಿಕಾರ ಕೆಂಜಾರಿಗೆ ಸ್ಥಳಾಂತರಗೊಂಡ ಬಳಿಕ ಕಾಮಗಾರಿಗಳು ಸಮರ್ಪಕವಾಗಿ ನಡೆದಿಲ್ಲ. ಮೂರು ವರ್ಷಗಳ ಹಿಂದೆ ಬಜಪೆಯ ಕಿನ್ನಿಪದವಿನಿಂದ ಮುರನಗರ ಜಂಕ್ಷನ್‌ವರೆಗೆ ಡಾಮರು ಕಾಮಗಾರಿ ನಡೆದಿತ್ತು. ಬಳಿಕ ವಿಮಾನ ನಿಲ್ದಾಣ ರಸ್ತೆಯ ಒಂದೆಡೆಯಿಂದ ಸ್ವಲ್ವ ಪ್ರಮಾಣದಲ್ಲಿ ಡಾಮರು ಕಾಮಗಾರಿ ನಡೆದಿತ್ತು.

ಶಾಸಕರ ಸಮನ್ವಯ ಕಾರ್ಯ ಅಗತ್ಯ:

ಹಳೆ ವಿಮಾನ ನಿಲ್ದಾಣ ರಸ್ತೆಯು ಮೂಲ್ಕಿ- ಮೂಡುಬಿದಿರೆ ಮತ್ತು ಮಂಗಳೂರು ನಗರ ಉತ್ತರ ವಿಧಾನಸಭೆ ಕ್ಷೇತ್ರದ ಗಡಿ ಗ್ರಾಮಗಳ ರಸ್ತೆಯಾಗಿದೆ. ಮುರ ಜಂಕ್ಷನ್‌ನಿಂದ ಹಳೆ ವಿಮಾನ ನಿಲ್ದಾಣದವರೆಗೆ ರಸ್ತೆಯ ಬಲ ಬದಿ (ಪಶ್ಚಿಮಕ್ಕೆ)ಮಳವೂರು ಗ್ರಾಮವು (ಬಜಪೆ ಪಟ್ಟಣ ಪಂ. ವ್ಯಾಪ್ತಿ) ಮೂಲ್ಕಿ -ಮೂಡುಬಿದಿರೆ ಕ್ಷೇತ್ರಕ್ಕೆ, ರಸ್ತೆಯ ಎಡಬದಿ (ಪೂರ್ವಕ್ಕೆ) ಮಂಗಳೂರು ನಗರ ಉತ್ತರ ವಿಧಾನಸಭೆ ಕ್ಷೇತ್ರದ ಕಂದಾವರ ಗ್ರಾ.ಪಂ.ವ್ಯಾಪ್ತಿಯ ಕೊಳಂಬೆ ಗ್ರಾಮಕ್ಕೆ ಸೇರುತ್ತದೆ. ಅದೇ ರೀತಿ ಬಜಪೆ ಪೊಲೀಸ್‌ ಠಾಣೆಯಿಂದ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಬಲಬದಿ ಬಜಪೆ ಪಟ್ಟಣ ಪಂಚಾಯತ್‌, ಎಡಬದಿ ಕೊಳಂಬೆ ಗ್ರಾಮಕ್ಕೆ ಸೇರುತ್ತದೆ. ಒಟ್ಟಿನಲ್ಲಿ ಈ ಗಡಿಭಾಗದ ರಸ್ತೆಯನ್ನು ಎರಡು ಕ್ಷೇತ್ರಗಳ ಶಾಸಕರು ಸಮನ್ವಯದಿಂದ ಅಭಿವೃದ್ಧಿಗೊಳಿಸಬೇಕಾಗಿದೆ. ಈ ರಸ್ತೆ ಕೊಳಂಬೆ, ಅದ್ಯಪಾಡಿಗೆ ಹೋಗುವ ಜನರಿಗೆ ಹೆಚ್ಚು ಉಪಯೋಗವಾಗಿದೆ. ಈ ರಸ್ತೆಯಲ್ಲಿ ನಾಲ್ಕು ಬಸ್‌ಗಳು ಅಲ್ಲದೆ ದ್ವಿಚಕ್ರ ವಾಹನಗಳು, ರಿಕ್ಷಾಗಳು, ಟಿಪ್ಪರ್‌ಗಳು ಹೆಚ್ಚಿನ ಸಂಖ್ಯೆಯಲ್ಲಿ ಓಡಾಡುತ್ತಿವೆ.

ಎಲ್ಲೆಂದರಲ್ಲಿ ಕಸ :

ಹಲವು ಸಂಘ-ಸಂಸ್ಥೆಗಳಿಂದ ವರ್ಷವಿಡೀ ಸ್ವಚ್ಛತೆ ಅಭಿಯಾನ ಕೈಗೊಂಡರು ಕೂಡ ರಸ್ತೆಯುದ್ದಕ್ಕೂ ಎಲ್ಲೆಂದರಲ್ಲಿ ಕಸ ಬಿಸಾಡುವ ಪ್ರವೃತ್ತಿ ಮುಂದುವರಿದಿದೆ.

ರಸ್ತೆಯ ಇಕ್ಕೆಲಗಳಲ್ಲಿ ಕಸ, ಮದ್ಯದ ಬಾಟಲ್‌ಗ‌ಳು ಕಾಣಸಿಗುತ್ತವೆ.   ಬಜಪೆ ಪೊಲೀಸ್‌ ಠಾಣೆ-ಮುರನಗರ ಜಂಕ್ಷನ್‌ ಹಳೆ ವಿಮಾನ ನಿಲ್ದಾಣ ಕಾಂಕ್ರೀಟ್‌ ಕಾಮಗಾರಿ ಕೈಗೊಳ್ಳಲಾಗಿದೆ. ಆದರೆ ಕಾಂಕ್ರೀಟ್‌ ಕಾಮಗಾರಿ ನಡೆಸಿದ ರಸ್ತೆಯಲ್ಲಿ ಏಕ ಕಾಲಕ್ಕೆ ಎರಡೂ ಕಡೆಗಳಿಂದ ವಾಹನ ಸಂಚಾರ ಮಾಡಲು ಕಷ್ಟಕರವಾಗಿದೆ. ಎದುರಿನಿಂದ ಬಂದ ವಾಹನಕ್ಕೆ ದಾರಿ ನೀಡಬೇಕಾದ ಸಂದರ್ಭ ರಸ್ತೆ ಬದಿಯಲ್ಲಿ ಒಂದೆಡೆ ನಿಲ್ಲಿಸಬೇಕಾಗಿದೆ. ರಸ್ತೆಯ ಇಕ್ಕೆಲಗಳಲ್ಲಿ ಮಳೆಯ ನೀರು ನಿಂತು ದ್ವಿಚಕ್ರ ವಾಹನಗಳ ಸಂಚಾರಕ್ಕೆ ಭಾರೀ ತೊಂದರೆಯಾಗುತ್ತಿದೆ.  ಸಂತ ಜಾನ್‌ ಪ್ಲಾವ್‌ ದ್ವಿತೀಯ ಅವರ ಪುಣ್ಯ ಕ್ಷೇತ್ರ, ಫಾದರ್‌ ಮುಲ್ಲರ್‌ ಆಸ್ಪತ್ರೆ ಈ ರಸ್ತೆಯಲ್ಲಿ ಬದಿಯಲ್ಲಿರುವುದರಿಂದ ಈ ಮಾರ್ಗದಲ್ಲಿ ಹೆಚ್ಚಿನ ವಾಹನ ಸಂಚರಿಸುತ್ತಿವೆ. ರಸ್ತೆ ವಿಸ್ತರಣೆ, ಮಳೆ ನೀರು ಹರಿದುಹೋಗಲು ಚರಂಡಿ ವ್ಯವಸ್ಥೆ ಆಗಬೇಕಾಗಿದೆ.

ಬಜಪೆ-ಕೊಳಂಬೆ ಮುರನಗರ ಜಂಕ್ಷನ್‌ನಿಂದ ಹಳೆ ವಿಮಾನ ನಿಲ್ದಾಣದವರೆಗೆ ರಸ್ತೆಯಲ್ಲಿ ಹೊಂಡಗಳು ಬಿದ್ದ ಬಗ್ಗೆ ಜನರಿಂದ ಮನವಿಗಳು ಬಂದಿದ್ದವು. ಈ ರಸ್ತೆಯ ನಿರ್ವಹಣೆ ವಿಮಾನ ನಿಲ್ದಾಣ ಪ್ರಾಧಿಕಾರ ಮಾಡುತ್ತಿತ್ತು. ಈ ರಸ್ತೆ ದುರಸ್ಥಿಯ ಬಗ್ಗೆ ವಿಮಾನ ನಿಲ್ದಾಣದ ಅಧಿಕಾರಿಗಳು, ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌ ಅವರಲ್ಲಿ ಮಾತನಾಡಿ ದ್ದೇನೆ. ಭಾರೀ ಮಳೆಯಾಗುತ್ತಿರುವ ಕಾರಣ ತೇಪೆ ಕಾರ್ಯಕ್ಕೆ ಅಡಚಣೆಯಾಗಿದೆ. ಮುರನಗರದಲ್ಲಿ ಚರಂಡಿ ಕಾಮಗಾರಿಗಳು ನಡೆಯುತ್ತಿವೆ. ಈ ರಸ್ತೆಗೆ ತೇಪೆ ಹಾಕುವ ಕಾರ್ಯ ಶೀಘ್ರ ಮಾಡಲಾಗುವುದು. .ಡಾ| ಭರತ್ ಶೆಟ್ಟಿ , ಶಾಸಕ

 

-ಸುಬ್ರಾಯ ನಾಯಕ್ ಎಕ್ಕಾರು

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.