ಕೊಡಗಿಗೆ ವಾಹನ ಸಂಚಾರ
Team Udayavani, May 6, 2020, 4:38 AM IST
ಸುಳ್ಯ: ದ.ಕ. ಮತ್ತು ಕೊಡಗು ಜಿಲ್ಲೆಯ ನಡುವೆ ಬಂದ್ ಆಗಿದ್ದ ವಾಹನ ಸಂಚಾರ ಲಾಕ್ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಮೇ 4ರಿಂದ ಪುನಾರಂಭಗೊಂಡಿದೆ. ಜಿಲ್ಲಾಡಳಿತದ ನಿಯಮ ಅನುಸಾರದಡಿ ಮಾತ್ರ ಸಂಚಾರಕ್ಕೆ ಅವಕಾಶ ಇದ್ದು, ಉಭಯ ಜಿಲ್ಲೆಗಳಿಂದ ಜನರು ಓಡಾಟ ನಡೆಸುತ್ತಿರುವುದು ಕಂಡು ಬಂತು.
ಚೆಕ್ಪೋಸ್ಟ್
ದ.ಕ. ಜಿಲ್ಲೆಯ ಕಲ್ಲುಗುಂಡಿ ಕೂಲಿಶೆಡ್ ಹಾಗೂ ಕೊಡಗು ಜಿಲ್ಲೆಯ ಗಡಿ ಪ್ರದೇಶ ಕೊಡಗು ಸಂಪಾಜೆ ಅರಣ್ಯ ತಪಾಸಣ ಚೆಕ್ ಪೋಸ್ಟ್ ಬಳಿ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಆಶಾ ಕಾರ್ಯಕರ್ತೆಯರು ಹಾಗೂ ಸ್ಥಳೀಯ ಗ್ರಾ.ಪಂ. ನೇತೃತ್ವದಲ್ಲಿ ಚೆಕ್ ಪೋಸ್ಟ್ ತೆರೆಯಲಾಗಿದೆ. ಕಲ್ಲುಗುಂಡಿಯಲ್ಲಿ ಸುಳ್ಯದ ಇಲಾಖಾಧಿಕಾರಿಗಳು, ಕೊಡಗು ಸಂಪಾಜೆಯಲ್ಲಿ ಮಡಿಕೇರಿ ಇಲಾಖಾಧಿಕಾರಿಗಳು ಕರ್ತವ್ಯದಲ್ಲಿದ್ದಾರೆ.
ಕ್ವಾರಂಟೈನ್ ಸೂಚನೆ
ಉಭಯ ಜಿಲ್ಲೆಯಿಂದ ಸಂಚರಿಸುವ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಕಲ್ಲುಗುಂಡಿ ಪೊಲೀಸ್ ಹೊರಠಾಣೆಯ ಬಳಿ ದ.ಕ. ಜಿಲ್ಲೆಯಿಂದ ಕೊಡಗು ಜಿಲ್ಲೆಗೆ ಪ್ರಯಾಣಿಸುವ ಪ್ರಯಾಣಿಕರ ಆರೋಗ್ಯ ತಪಾಸಣ ಕಾರ್ಯ ನಡೆಯುತ್ತಿದೆ. ಕೊಡಗು ಸಂಪಾಜೆ ಚೆಕ್ಪೋಸ್ಟ್ ಬಳಿಯೂ ಕೊಡಗು ಜಿಲ್ಲಾ ಆರೋಗ್ಯ ಕಾರ್ಯಕರ್ತೆಯರ ಮೂಲಕ ಆರೋಗ್ಯ ತಪಾಸಣೆ ನಡೆಸಿ, ಕೈಗೆ ಸೀಲ್ ಹಾಕಿ 14 ದಿನಗಳ ಕ್ವಾರಂಟೈನ್ ಇರುವಂತೆ ಸೂಚನೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ