ದಶಕದಿಂದ ಬಾಗಿಲು ತೆರೆಯದ ಪಶು ಚಿಕಿತ್ಸಾಲಯ


Team Udayavani, Jan 4, 2019, 4:42 AM IST

4-january-1.jpg

ಸುಬ್ರಹ್ಮಣ್ಯ : ಹೋಬಳಿ ಕೇಂದ್ರ ಪಂಜದ ಪಶು ಚಿಕಿತ್ಸಾಲಯ ಹತ್ತು ವರ್ಷಗಳಿಂದ ಬಾಗಿಲು ತೆರೆದಿಲ್ಲ. ಬಾಗಿಲು ಮುಚ್ಚಿದ ಈ ಕೇಂದ್ರದಿಂದ ರೈತರಿಗೆ ಯಾವುದೇ ಪ್ರಯೋಜನವಾಗಿಲ್ಲ.

ಇಲ್ಲಿನ ಪಶು ಚಿಕಿತ್ಸಾ ಕೇಂದ್ರದಲ್ಲಿ ಯಾವ ಹುದ್ದೆಯಲ್ಲೂ ಅಧಿಕಾರಿಗಳು ಮತ್ತು ಸಿಬಂದಿ ಕರ್ತವ್ಯ ನಿರ್ವಹಿಸುತ್ತಿಲ್ಲ. ಸಹಾಯಕ ನಿದೇಶಕರು, ಜಾನುವಾರು ಅಧಿಕಾರಿ, ಪಶುವೈದ್ಯಕೀಯ ಪರಿವೀಕ್ಷಕರು, ಪಶುವೈದ್ಯ ಸಹಾಯಕರು, ಇಬ್ಬರು ಡಿ ದರ್ಜೆಯ ಹುದ್ದೆಗಳು ಖಾಲಿ ಇವೆ. ಕಚೇರಿಯ ಬಾಗಿಲಿನಲ್ಲಿ ಬೆಳ್ಳಾರೆ ಕೇಂದ್ರದ ವೈದ್ಯರ ಮೊಬೈಲ್‌ ಸಂಖ್ಯೆ ನಮೂದಿಸಿದ್ದು, ಅಗತ್ಯ ಸೇವೆ ಬಯಸಿ ಬರುವವರು ಈ ವೈದ್ಯರಿಗೆ ಕರೆ ಮಾಡಿ ವೈದ್ಯಕೀಯ ಸೇವೆ ಪಡೆಯಬಹುದು.

ಪಶುವೈದ್ಯಾಧಿಕಾರಿ ಕಚೇರಿ, ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಈ ಪಶು ಚಿಕಿತ್ಸಾಲಯ ಮತ್ತು ಕೃತಕ ಗರ್ಭಧಾರಣ ಕೇಂದ್ರ ವರ್ಷಗಳ ಹಿಂದೆಯೇ ಕಾರ್ಯಾರಂಭ ಮಾಡಿದ್ದರೂ ಆಮೇಲೆ ಇದರ ಕಥೆ ಕೇಳುವವರೇ ಇಲ್ಲದಂತಾಗಿದೆ. ಹೀಗಾಗಿ ಹೋಬಳಿ ಕೇಂದ್ರದ ಬಹುಮುಖ್ಯ ಕಚೇರಿ ಕಟ್ಟಡವೀಗ ಪಾಳು ಬಿದ್ದಿದೆ.

ಪ್ರಯೋಜನಕಾರಿಯಾಗಿತ್ತು
ಈ ಪಶು ಚಿಕಿತ್ಸಾಲಯ ಕೃಷಿಕರ ಸಾಕು ಪ್ರಾಣಿಗಳ ತುರ್ತು ಸೇವೆಗೆ ಬಹಳಷ್ಟು ಪ್ರಯೋಜನಕಾರಿಯಾಗಿತ್ತು. ಜಾನುವಾರು, ನಾಯಿ, ಆಡು, ಕುರಿ ಕುಕ್ಕುಟ ಹೀಗೆ ಪ್ರಾಣಿ, ಪಕ್ಷಿಗಳಿಗೆ ಅನಾರೋಗ್ಯ ಕಾಣಿಸಿಕೊಂಡಾಗ ರೋಗ ನಿವಾರಣೆ ಔಷಧಿ, ಚುಚ್ಚುಮದ್ದನ್ನು ಇಲ್ಲಿ ನೀಡಲಾಗುತ್ತಿತ್ತು. ಪಂಜ, ಕೇನ್ಯ, ಬಳ್ಪ, ಕೂತ್ಕುಂಜ, ಐವತ್ತೂಕ್ಲು, ಕಲ್ಮಡ್ಕ, ಪಂಬೆತ್ತಾಡಿ ಎಣ್ಮೂರು ಮುರುಳ್ಯ, ಎಡಮಂಗಲ ಮೊದಲಾದ ಗ್ರಾಮಗಳ ಕೃಷಿಕರು ಈ ಪಶು ಚಿಕಿತ್ಸಾ ಕೇಂದ್ರದ ಪ್ರಯೋಜನ ಪಡೆಯುತ್ತಿದ್ದರು. ಈ ಕೇಂದ್ರ ಬಾಗಿಲು ಮುಚ್ಚಿದ್ದರಿಂದ ಈಗ ಸಾಕು ಪ್ರಾಣಿಗಳ ಚಿಕಿತ್ಸೆಗೆ ದೂರದ ಕೇಂದ್ರಗಳಿಗೆ ತೆರಳಬೇಕಾಗಿದೆ.

ಹೈನುಗಾರರಿಗೆ ತೊಂದರೆ
ಕೃಷಿ ಅವಲಂಬಿತ ಈ ಭಾಗದಲ್ಲಿ ಅನೇಕ ಮಂದಿ ಹೈನುಗಾರಿಕೆಯಲ್ಲಿ ತೊಡಗಿದ್ದಾರೆ. ಪಂಜ, ಐವತ್ತೂಕ್ಲು, ಕೂತ್ಕುಂಜ, ಬಳ್ಪ ಮೊದಲಾದೆಡೆ ಹಾಲಿನ ಡೈರಿ ಕೂಡ ಇದೆ. ಎಂಟು ಕ್ಲಸ್ಟರ್‌ ವ್ಯಾಪ್ತಿಗೆ ಸಂಬಂಧಿಸಿ ಪಂಜದಲ್ಲಿ ಸಾಂದ್ರ ಶೀತಲೀಕರಣ ಕೇಂದ್ರ ಕೂಡ ಇದೆ. ಈ ಶೀತಲೀಕರಣ ಕೇಂದ್ರದಲ್ಲಿ ದಿನವೊಂದಕ್ಕೆ 3 ಸಾವಿರ ಲೀ.ನಷ್ಟು ಹಾಲು ಸಂಗ್ರಹಿಸಲಾಗುತ್ತಿದೆ. ಅಧಿಕ ಮಂದಿ ಹಾಲಿನ ಡೈರಿಗೆ ನಿತ್ಯ ಹಾಲು ಒದಗಿಸುತ್ತಿರುವವರು ಈ ಭಾಗದಲ್ಲಿದ್ದು, ಪಶು ಚಿಕಿತ್ಸಾ ಕೇಂದ್ರ ಮುಚ್ಚಿರುವ ಕಾರಣ ಹೈನುಗಾರರು ತೊಂದರೆಗೆ ಒಳಗಾಗಿದ್ದಾರೆ.

ಗಮನ ಹರಿಸುತ್ತೇನೆ
ಪಂಜದಲ್ಲಿ ಹೊಸ ಆಸ್ಪತ್ರೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಇಷ್ಟರೊಳಗೆ ಕಟ್ಟಡ ಪೂರ್ಣಗೊಳ್ಳಬೇಕಿತ್ತು. ಏನೋ ಕಾರಣಕ್ಕೆ ವಿಳಂಬವಾಗಿದೆ.ಇತ್ತೀಚೆಗಷ್ಟೆ ಜವಾಬ್ದಾರಿ ವಹಿಸಿಕೊಂಡಿದ್ದು, ಈ ಕುರಿತು ಗಮನಹರಿಸುವೆ.
ಡಾ| ಗುರುಮೂರ್ತಿ, 
 ಸಹಾಯಕ ನಿರ್ದೇಶಕರು,
 ಪಶುಸಂಗೋಪನೆ ಇಲಾಖೆ 

ಹೊಸ ಕಟ್ಟಡ ಪ್ರಗತಿಯಲ್ಲಿ 
ಸುದೀರ್ಘ‌ ಅವಧಿ ಬಾಗಿಲು ಮುಚ್ಚಿದ ಈ ಪಶುಚಿಕಿತ್ಸಾ ಕೇಂದ್ರ ಸಂಪೂರ್ಣ ಶಿಥಿಲಗೊಂಡಿದೆ. ಪಕ್ಕದಲ್ಲೇ ನೂತನ ಪಶು ಚಿಕಿತ್ಸಾ ಕೇಂದ್ರ ಕೆಆರ್‌ಡಿಸಿಎಲ್‌ ಹಾಗೂ ನಿರ್ಮಿತಿ ಕೇಂದ್ರದ ಮೂಲಕ ನಿರ್ಮಾಣಗೊಳ್ಳುತ್ತಿದೆ. ಕಾಮಗಾರಿ ಪ್ರಗತಿಯಲ್ಲಿದೆ. ನಿಗದಿತ ಸಮಯದಲ್ಲಿ ಕಟ್ಟಡ ಪೂರ್ಣಗೊಳ್ಳದೆ ಇರುವುದರಿಂದ ಸಮಸ್ಯೆ ಬಿಗಡಾಯಿಸಿದೆ. ಕಟ್ಟಡ ಕಾಮಗಾರಿಗೆ ವೇಗ ದೊರಕಿ ಶೀಘ್ರ ಈ ಕೇಂದ್ರ ಕೃಷಿಕರ ಪ್ರಾಣಿ, ಪಕ್ಷಿಗಳಿಗೆ ಪ್ರಯೋಜನಕ್ಕೆ ಸಿಗಬೇಕಿದೆ.

ಅಕ್ರಮ ಚಟುವಟಿಕೆ ತಾಣ! 
ಪೊದರುಗಳಿಂದ ಆವೃತವಾಗಿರುವ ಪಶು ಚಿಕಿತ್ಸಾ ಕೇಂದ್ರ ಹಾಗೂ ಪಕ್ಕದ ಜಾನುವಾರು ತಪಾಸಣೆ ಕೊಠಡಿ ಸಾರ್ವಜನಿಕ ಮುಕ್ತವಾಗಿದೆ. ಕಾನೂನು ಬಾಹಿರ ಚಟುವಟಿಕೆಗೆ ಈ ಕಟ್ಟಡಗಳು ಬಳಕೆಯಾಗುವ ಸಾಧ್ಯತೆ ಹೆಚ್ಚು. ಪರಿಸರದಲ್ಲಿ ಮದ್ಯ, ಧೂಮಪಾನ ಸೇವನೆಯಂತಹ ಚಟುವಟಿಕೆಗಳು ನಡೆದಿರುವುದು ಕಂಡುಬರುತ್ತಿದೆ. ಅಕ್ರಮ ಕೇಂದ್ರವಾಗಿ ಪರಿವರ್ತನೆ ಆಗುವ ಮುನ್ನ ಪರಿಸರ ಶುಚಿಗೊಳಿಸಬೇಕಿದೆ.

ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.