ಬಿಜೆಪಿಯಿಂದ ಈಗ ವಿಜಯಸಂಕಲ್ಪ, ಮುಂದೆ ತೀರ್ಥಯಾತ್ರೆ: ಕಾಂಗ್ರೆಸ್‌

ಸಿಎಂ "ಕಸದಬುಟ್ಟಿ ' ಹೇಳಿಕೆಗೆ ತಿರುಗೇಟು

Team Udayavani, Mar 18, 2023, 5:55 AM IST

ಬಿಜೆಪಿಯಿಂದ ಈಗ ವಿಜಯಸಂಕಲ್ಪ, ಮುಂದೆ ತೀರ್ಥಯಾತ್ರೆ: ಕಾಂಗ್ರೆಸ್‌

ಮಂಗಳೂರು: ಕಸದ ಬುಟ್ಟಿ ಸೇರುವುದು ಕಾಂಗ್ರೆಸ್‌ ಅಲ್ಲ, ಬಿಜೆಪಿ. ಈಗ ವಿಜಯ ಸಂಕಲ್ಪ ಯಾತ್ರೆ ಮಾಡುತ್ತಿರುವವರು ಮುಂದೆ ತೀರ್ಥ ಯಾತ್ರೆ ಕೈಗೊಳ್ಳಬೇಕಾಗುತ್ತದೆ ಎಂದು ಕಾಂಗ್ರೆಸ್‌ ತಿರುಗೇಟು ನೀಡಿದೆ.

ಮಂಗಳೂರಿನ ಫಲಾನುಭವಿಗಳ ಸಮಾವೇಶದಲ್ಲಿ ಸಿಎಂ ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯಿಸಿ, ಇನ್ನೆರಡು ತಿಂಗಳಲ್ಲಿ ಬಿಜೆಪಿಯವರು ತೀರ್ಥ ಯಾತ್ರೆ ಕೈಗೊಳ್ಳುವ ಪರಿಸ್ಥಿತಿ ಬರಲಿದೆ ಎಂದು ಮಂಗಳೂರಿನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್‌ ಹೇಳಿದರು.

ಬಡವರು ಊಟ ಮಾಡುತ್ತಿದ್ದ ಇಂದಿರಾ ಕ್ಯಾಂಟೀನ್‌ ಬಂದ್‌ ಮಾಡಿದ್ದಾರೆ, ರೇಶನ್‌ ಅಕ್ಕಿ ಕಡಿತಗೊಳಿಸಿದ್ದಾರೆ, ಬಿಜೆಪಿಗೆ ಬಡವರ ಬಗ್ಗೆ ಕಾಳಜಿಯಿಲ್ಲ. ನಾವು ಬಡವರ ಪರ ವಾಗಿ ಗ್ಯಾರಂಟಿ ನೀಡುತ್ತೇವೆ. ಮಾ. 20ರಂದು ಬೆಳಗಾವಿಯ ಯುವ ಸಂಗಮ ಸಮಾವೇಶದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರು ಯುವಕರಿಗೆ ಗ್ಯಾರಂಟಿ ಯೋಜನೆ ಯೊಂದನ್ನು ಘೋಷಿಸುವ ಸಾಧ್ಯತೆ ಇದೆ. ಬಿಜೆಪಿಯವರಿಗೆ ಸೋಲಿನ ಭೀತಿ ಎದುರಾಗಿದೆ ಎಂದರು.

ಅಧಿಕಾರಕ್ಕಾಗಿ ದೇವರನ್ನು ಬೀದಿಗೆ ತರುವ ಬಿಜೆಪಿ ನಾಯಕರು ಈಗ ಅಧಿಕಾರದ ಮದದಲ್ಲಿ ಬಾಯಿಗೆ ಬಂದಂತೆ ಹೇಳಿಕೆ ನೀಡುತ್ತಾರೆ. ತುಳುನಾಡಿನ ಆರಾಧ್ಯ ದೈವ ಗುಳಿಗನ ಬಗ್ಗೆ ಗೃಹಸಚಿವ ಆರಗ ಜ್ಞಾನೇಂದ್ರ ಹೀಯಾಳಿಸಿ ಮಾತನಾಡಿದ್ದಾರೆ, ಅವರು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

ಶ್ರೀರಾಮುಲು 50 ಕೋ.ರೂ. ಅಕ್ರಮ ಆರೋಪ
ಸರಕಾರಿ ಸ್ವಾಮ್ಯದ ಬಸ್‌ ಮಾರ್ಗ ಗಳಲ್ಲಿ 24 ಕಿ.ಮೀ. ತನಕ ಖಾಸಗಿ ಬಸ್‌ಗಳಿಗೆ ಪರವಾನಿಗೆ ಒದಗಿಸುವ ಮಸೂದೆಯೊಂದನ್ನು ಚುನಾವಣೆ ದಿನಾಂಕ ಘೋಷಣೆಗೆ ಮುನ್ನ ತರಾತುರಿಯಲ್ಲಿ ಜಾರಿಗೊಳಿಸಲು ಸಾರಿಗೆ ಸಚಿವ ಶ್ರೀರಾಮುಲು ಮುಂದಾಗಿದ್ದು, ಇದರ ಹಿಂದೆ 50 ಕೋ.ರೂ. ಅವ್ಯವಹಾರ ಕುದುರಿದೆ ಎನ್ನುವ ಆರೋಪ ಕೇಳಿ ಬಂದಿದೆ. ಈ ತೀರ್ಮಾನ ಆಘಾತಕಾರಿ, ಇದು ಕೆಎಸ್ಸಾರ್ಟಿಸಿಯನ್ನು ಮುಚ್ಚುವ ಹುನ್ನಾರ ಎಂದರು.

ಕಾಂಗ್ರೆಸ್‌ಗೆ ಎಸ್‌ಡಿಪಿಐ ಜತೆ ಒಪ್ಪಂದ ಮಾಡಿಕೊಂಡಿಲ್ಲ. ಈ ಬಗ್ಗೆ ಎಸ್‌ಡಿಪಿಐ ಮುಖಂಡರು ಮಾಡಿರುವ ಆರೋಪಕ್ಕೆ ಮಹತ್ವ ವಿಲ್ಲ. ಎಸ್‌ಡಿಪಿಐ ಮತ್ತು ಬಿಜೆಪಿ ಸಮಾ® ‌ಮನಸ್ಕ ಪಕ್ಷಗಳು. ಒಪ್ಪಂದ ವಿರುವುದು ಆ ಎರಡು ಪಕ್ಷಗಳ ನಡುವೆ. ಉಳ್ಳಾಲದಲ್ಲಿ ಕಳೆದ ಚುನಾವಣೆಯೊಂದರ ಸಂದರ್ಭ ಏನು ನಡೆದಿದೆ ಎಂದು ಎಲ್ಲರಿಗೂ ಗೊತ್ತು. ಎಲ್ಲ 224 ವಿಧಾನಸಭಾ ಕ್ಷೇತ್ರಗಳಲ್ಲಿ ಎಸ್‌ಡಿಪಿಐ ಸ್ಪರ್ಧಿಸಿದರೂ ನಮಗೆ ತೊಂದರೆ ಇಲ್ಲ ಎಂದರು.

ಕಾಂಗ್ರೆಸ್‌ ಮುಖಂಡರಾದ ಸಂತೋಷ್‌ ಕುಮಾರ್‌ ಶೆಟ್ಟಿ, ಮಹಾಬಲ ಮಾರ್ಲ, ಪ್ರಕಾಶ್‌ ಸಾಲ್ಯಾನ್‌, ಮೊಹಮ್ಮದ್‌ ಕುಂಜತ್ತಬೈಲು, ಉದಯ ಆಚಾರ್‌, ಸಲೀಂ ಅಹಮ್ಮದ್‌ ಉಪಸ್ಥಿತರಿದ್ದರು.

 

ಟಾಪ್ ನ್ಯೂಸ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.