ಬಿಒಬಿ ಜತೆ ವಿಜಯ ಬ್ಯಾಂಕ್‌ ವಿಲೀನ


Team Udayavani, Apr 2, 2019, 6:30 AM IST

vijay-bank

ಮಂಗಳೂರು: ಕರಾವಳಿ ಮೂಲದ ಪ್ರತಿಷ್ಠಿತ ವಿಜಯ ಬ್ಯಾಂಕ್‌, ಮಹಾರಾಷ್ಟ್ರ ಮೂಲದ ದೇನಾ ಬ್ಯಾಂಕ್‌ ಸೋಮವಾರ ಬ್ಯಾಂಕ್‌ ಆಫ್‌ ಬರೋಡಾ ಜತೆಗೆ ಅಧಿಕೃತವಾಗಿ ವಿಲೀನಗೊಳ್ಳುವ ಮೂಲಕ ದೇಶದ ಎರಡನೇ ಅತಿ ದೊಡ್ಡ ಸರಕಾರಿ ಸ್ವಾಮ್ಯದ ಬ್ಯಾಂಕ್‌ ಎಂಬ ಮಾನ್ಯತೆ ಪಡೆದು ಕೊಂಡಿದೆ.

ವಿಜಯ ಬ್ಯಾಂಕ್‌ನ ಮಂಗಳೂರಿನಲ್ಲಿ ಕಾರ್ಯಾಚರಿ ಸುತ್ತಿದ್ದ ಪ್ರಾದೇಶಿಕ ಕಚೇರಿಯಲ್ಲಿ ಸೋಮವಾರ ದೀಪ ಬೆಳಗುವ ಮೂಲಕ ಔಪಚಾರಿಕವಾಗಿ ಬ್ಯಾಂಕ್‌ಗಳ ವಿಲೀನ ಪ್ರಕ್ರಿಯೆ ನಡೆಯಿತು. ಮೂರೂ ಪ್ರತಿಷ್ಠಿತ ಬ್ಯಾಂಕ್‌ಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಬಳಿಕ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಹಿಂದಿನ ವಿಜಯ ಬ್ಯಾಂಕ್‌ನ ಮಹಾಪ್ರಬಂಧಕ ಶ್ರೀಧರಮೂರ್ತಿ ಹಾಗೂ ಬ್ಯಾಂಕ್‌ ಆಫ್ ಬರೋಡಾದ ಡಿಜಿಎಂ ಲಲಿತ್‌ ತ್ಯಾಹಿ ಅವರು ಮಾತನಾಡಿ, ಬ್ಯಾಂಕ್‌ ಆಫ್‌ ಬರೋಡಾ ಜತೆಗೆ ವಿಜಯ ಬ್ಯಾಂಕ್‌, ದೇನಾ ಬ್ಯಾಂಕ್‌ ಅಧಿಕೃತವಾಗಿ ವಿಲೀನವಾಗುವ ಮುಖೇನ ಭಾರತದ ಎರಡನೇ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್‌ ಆಗಿ ಪರಿವರ್ತನೆಗೊಂಡಿದೆ. ಮಾ. 30ರಂದು ಆರ್‌ಬಿಐ ಅಧಿಸೂಚನೆಯ ಅನ್ವಯ ವಿಜಯ ಬ್ಯಾಂಕ್‌, ದೇನಾ ಬ್ಯಾಂಕ್‌ನ ಎಲ್ಲ ಶಾಖೆಗಳೂ ಬ್ಯಾಂಕ್‌ ಆಫ್ ಬರೋಡಾದ ಶಾಖೆ ಗಳಾಗಿ ಕಾರ್ಯನಿರ್ವಹಿಸಲಿವೆ.

ಈ ಬ್ಯಾಂಕ್‌ಗಳ ಗ್ರಾಹಕರೆಲ್ಲರೂ ಬ್ಯಾಂಕ್‌ ಆಫ್ ಬರೋಡಾದ ಗ್ರಾಹಕ ರಾಗಲಿದ್ದಾರೆ. ಈ ಮೂಲಕ ದೇಶದ ಬ್ಯಾಂಕಿಂಗ್‌ ಕ್ಷೇತ್ರ ದಲ್ಲಿ ಬಹುದೊಡ್ಡ ಬದಲಾವಣೆ ಆಗಲಿದೆ ಎಂದರು.

ವಿಜಯ ಬ್ಯಾಂಕ್‌ನ ವಿನೂತನ ಕಾರ್ಯಕ್ರಮಗಳಾದ ತೋಟಗಾರಿಕಾ ಹಣಕಾಸು ನೆರವು, ಸಣ್ಣ ರಸ್ತೆ ಸಾರಿಗೆ ಆಪರೇಟರುಗಳ ಸಾಲದಂತಹ ಯೋಜನೆಗಳನ್ನು ಮುಂದುವರಿಸಲಾಗುವುದು ಎಂದು ವಿವರಿಸಿದರು.

ವಿಲೀನ ರದ್ದಾಗುವುದೇ?
ಕರಾವಳಿ ಭಾಗದಲ್ಲಿ ವಿಜಯ ಬ್ಯಾಂಕ್‌ ವಿಲೀನಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ವಿಜಯ ಬ್ಯಾಂಕ್‌ ವಿಲೀನ ಪ್ರಕ್ರಿಯೆಯನ್ನು ರದ್ದು ಮಾಡಿ ಹಿಂದಿನ ವ್ಯವಸ್ಥೆಗೆ ಮರಳುವುದು ಇನ್ನು ಸಾಧ್ಯವೇ? ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ತ್ಯಾಹಿ ಅವರು ಇದು ಸರಕಾರದ ನಿರ್ಧಾರವಾಗಿರುತ್ತದೆ. ಇದಕ್ಕೆ ನಾವು ಉತ್ತರಿಸಲು ಆಗುವುದಿಲ್ಲ ಎಂದರು. ದೇನಾ ಬ್ಯಾಂಕ್‌ ಮುಖ್ಯಪ್ರಬಂಧಕ ನಾಗರಾಜು, ಎಂ.ಎಸ್‌.ಕುಮಾರ್‌, ವಿಜಯ ಬ್ಯಾಂಕ್‌ನ ರಂಗರಾಜನ್‌ ಉಪಸ್ಥಿತರಿದ್ದರು.

ವಿಜಯ ಬ್ಯಾಂಕ್‌ ಈಗ “ಬ್ಯಾಂಕ್‌ ಆಫ್‌ ಬರೋಡಾ’!
ವಿಜಯ ಬ್ಯಾಂಕ್‌ ವಿಲೀನ ಹಿನ್ನೆಲೆಯಲ್ಲಿ ಬ್ಯಾಂಕಿನ ಫಲಕಗಳೆಲ್ಲ ಕೆಲವೇ ದಿನಗಳಲ್ಲಿ ಹಂತ ಹಂತವಾಗಿ “ಬ್ಯಾಂಕ್‌ ಆಫ್‌ ಬರೋಡಾ’ ಆಗಿ ಪರಿವರ್ತನೆಯಾಗಲಿವೆ. ಪೂರ್ವಭಾವಿಯಾಗಿ ಮಂಗಳೂರಿನ ವಿಜಯ ಬ್ಯಾಂಕಿನ ಪ್ರಾದೇಶಿಕ ಕಚೇರಿಯ ಫಲಕದ ಕೆಳ ಭಾಗದಲ್ಲಿ “ಈಗ ಬ್ಯಾಂಕ್‌ ಆಫ್‌ ಬರೋಡಾ’ ಎಂಬ ಚಿಕ್ಕ ಪೋಸ್ಟರ್‌ ಅಂಟಿಸಲಾಗಿದೆ. ಜತೆಗೆ ಕಚೇರಿಯ ಒಳಗೆ ಬ್ಯಾಂಕ್‌ ಆಫ್‌ ಬರೋಡಾ ಸ್ಟಿಕ್ಕರ್‌ ಸೇರಿಸಲಾಗಿದೆ. ಈ ಮಧ್ಯೆ ಗ್ರಾಹಕರ ಅನುಕೂಲಕ್ಕಾಗಿ ವಿಜಯ ಬ್ಯಾಂಕ್‌ನ ಹೆಸರು ತಾತ್ಕಾಲಿಕವಾಗಿ ಮುಂದುವರಿಯಲಿದೆ. ಆದರೆ ಆ ಹೆಸರಿನ ಕೆಳಗೆ “ಈಗ ಬ್ಯಾಂಕ್‌ ಆಫ್‌ ಬರೋಡಾ’ ಸ್ಟಿಕ್ಕರ್‌ ಸೇರಿಕೊಳ್ಳಲಿದೆ.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.