ಕೋಸ್ಟ್‌ ಗಾರ್ಡ್‌ಗೆ ವಿಕ್ರಮ್‌ನ ಬಲ


Team Udayavani, May 14, 2018, 11:15 AM IST

vikram.png

ಪಣಂಬೂರು: ರಾಜ್ಯದ ಕರಾವಳಿ ತೀರದ ರಕ್ಷಣೆಗಾಗಿ ಭಾರತೀಯ ತಟ ರಕ್ಷಣಾ ಪಡೆಗೆ ನಿಯೋಜನೆಗೊಂಡಿರುವ ವಿಕ್ರಮ್‌ ಕಣ್ಗಾವಲು ಹಡಗು ರವಿವಾರ ನವಮಂಗಳೂರು ಬಂದರಿಗೆ ಆಗಮಿಸಿತು. ಕೋಸ್ಟ್‌ಗಾರ್ಡ್‌ನ ಕರ್ನಾಟಕ ಕೇಂದ್ರೀಯ ವಿಭಾಗದ ವತಿಯಿಂದ ಸ್ವಾಗತಿಸಲಾಯಿತು.

ಶಾಸಕ ಮೊದಿನ್‌ ಬಾವಾ ನೌಕೆಯನ್ನು ಸ್ವಾಗತಿಸಿ ವಿಕ್ರಮ್‌ ಆಗಮನದಿಂದ ತಟ ರಕ್ಷಣಾ ಪಡೆಗೆ ಹೆಚ್ಚಿನ ಬಲ ಬಂದಂತಾಗಿದೆ ಎಂದರು.

ಆದಾಯ ಇಲಾಖೆಯ ಆಯುಕ್ತ ನರೋತ್ತಮ್‌ ಮಿಶ್ರ ಐಆರ್‌ಎಸ್‌ ಮಾತನಾಡಿ, ಮೇಕ್‌ ಇನ್‌ ಇಂಡಿಯಾ ಯೋಜನೆಯಡಿ ಭಾರತದಲ್ಲೇ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣವಾಗಿದ್ದು ಹೆಮ್ಮೆಯೆನಿಸುತ್ತದೆ. ಅಮೆರಿಕ ತನ್ನ ನೌಕಾ ಬಲದಿಂದಲೇ ಸೂಪರ್‌ ಪವರ್‌ ಪಟ್ಟವನ್ನು ಅಲಂಕರಿಸಿದೆ.  ಹಡಗು ನಿರ್ಮಾಣದಲ್ಲಿ ಭಾರತವೂ ಇದೀಗ ತನ್ನದೇ ತಂತ್ರಜ್ಞಾನ ಬಳಸಿ ಯಶಸ್ವಿಯಾಗುತ್ತಿದ್ದು ತನ್ನ ಬಲವನ್ನು ವೃದ್ಧಿಸಿಕೊಳ್ಳುತ್ತಿದೆ ಎಂದರು. ಕೋಸ್ಟ್‌ಗಾರ್ಡ್‌ ಕಮಾಂಡರ್‌ ಸತ್ವಂತ್‌ ಸಿಂಗ್‌ ಪ್ರಸ್ತಾವನೆಗೈದು, ಕಣ್ಗಾವಲು ನೌಕೆಯ ವಿಶೇಷತೆಗಳನ್ನು ವಿವರಿಸಿದರು. ಎನ್‌ಎಂಪಿಟಿ ಚೇರ್‌ಮನ್‌ ಸುರೇಶ್‌ ಪಿ. ಶಿರ್ವಾಡ್ಕರ್‌, ಕೋಸ್ಟ್‌ ಗಾರ್ಡ್‌ ಕಮಾಂಡೆಂಟ್‌ ಗುಲ್ವಿಂದರ್‌ ಸಿಂಗ್‌ ಮತ್ತಿತರರು ಉಪಸ್ಥಿತರಿದ್ದರು.

ವಿಕ್ರಮ್‌ ವೈಶಿಷ್ಟ é?
ಕೋಸ್ಟ್‌ಗಾರ್ಡ್‌ಗೆ ಸೇರ್ಪಡೆ ಗೊಂಡಿರುವ ವಿಕ್ರಮ್‌ ನೌಕೆ ದಾಳಿ ಕಾರ್ಯಾಚರಣೆಗೆ ಅನುಕೂಲವಾಗುವಂತೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಒಳಗೊಂಡಿದೆ. 98 ಮೀಟರ್‌ ಉದ್ದ, 15 ಮೀಟರ್‌ ಅಗಲ, 2,100 ಟನ್‌ ಭಾರವಿದೆ. ಗಂಟೆಗೆ 24 ನಾಟಿಕಲ್‌ ಮೈಲು ದೂರ ಸಂಚರಿಸಬಲ್ಲ ಈ ನೌಕೆ ಎರಡು ಎಂಜಿನ್‌ಗಳ ಒಂದು ಹೆಲಿಕಾಪ್ಟರನ್ನು ಹೊತ್ತೂಯ್ಯಬಲ್ಲದು ಮಾತ್ರವಲ್ಲ 30 ಎಂಎಂ ಗನ್‌, ಎರಡು ಅತ್ಯಾಧುನಿಕ ಸ್ಪೀಡ್‌ ಬೋಟ್‌ ಹೊಂದಿದೆ. ಅಗ್ನಿ
ಅನಾಹುತದ ವಿರುದ್ಧ ಕಾರ್ಯಾಚರಣೆ, ಆಟೋಮೇಟೆಡ್‌ ಪವರ್‌ ಮ್ಯಾನೇಜ್‌ ಮೆಂಟ್‌ ಸಮುದ್ರದ ನೀರನ್ನು ಶುದ್ಧೀಕರಿಸುವ ವಿಶೇಷ ತಂತ್ರಜ್ಞಾನ ಇದರಲ್ಲಿದ್ದು 14 ಅ ಧಿಕಾರಿಗಳು, 88 ಸಿಬಂದಿ ಇದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ನೌಕೆಯನ್ನು ಲಾರ್ಸನ್‌ ಆಂಡ್‌ ಟೂಬ್ರೋ ಕಂಪೆನಿ ಚೆನ್ನೈಯ ಕಟ್ಟುಪಲ್ಲಿ ಹಡಗು ಕಟ್ಟೆಯಲ್ಲಿ ನಿರ್ಮಿಸಿ ಕೋಸ್ಟ್‌ಗಾರ್ಡ್‌ಗೆ ಹಸ್ತಾಂತರಿಸಿದೆ.

ಟಾಪ್ ನ್ಯೂಸ್

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.