ಸುಳ್ಯ ವಿ. ಸಭಾ ಕ್ಷೇತ್ರ: ಗ್ರಾಮ ವಿಕಾಸ ಯೋಜನೆ ಅಪೂರ್ಣ

ಬಿಡುಗಡೆಗೊಂಡಿಲ್ಲ ಪೂರ್ತಿ ಅನುದಾನ

Team Udayavani, May 30, 2022, 9:21 AM IST

anudana

ಸುಳ್ಯ: ಮಹಾತ್ವಾಕಾಂಕ್ಷೆಯ 2015-16ರಲ್ಲಿ ಜಾರಿಗೆ ತಂದ ಗ್ರಾಮ ವಿಕಾಸ ಯೋಜನೆಯ ಕಾಮಗಾರಿಗಳು ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಇನ್ನೂ ಅಪೂರ್ಣ ಸ್ಥಿತಿಯಲ್ಲಿದ್ದು, ಕೆಲವು ಗ್ರಾ.ಪಂ.ಗಳಿಗೆ ಪೂರ್ತಿ ಅನುದಾನವೇ ಬಿಡುಗಡೆಗೊಂಡಿಲ್ಲ. ಕೆಲವೆಡೆ ಪೂರ್ತಿಯಾದ ಕಾಮಗಾರಿಗೂ ಬಿಲ್‌ ಪಾವತಿಯಾಗಿಲ್ಲ.

ಸಿದ್ದರಾಮಯ್ಯ ಮುಖ್ಯಮಂತ್ರಿ ಯಾಗಿದ್ದ ಗ್ರಾಮ ವಿಕಾಸ ಯೋಜನೆ ಜಾರಿ ಗೊಳಿಸಿದ್ದರು. ಯೋಜನೆಗೆ ಆಯ್ಕೆ ಯಾದ ಗ್ರಾಮಗಳ ನಿಯ ಮಿತ ಕಾಮಗಾರಿಗಳಿಗೆ 75 ಲಕ್ಷ ರೂ. ಅನುದಾನ ಬಿಡುಗಡೆ ಗೊಳಿ ಸಲಾಗಿತ್ತು. ಈ ಯೋಜನೆಯ ಪ್ರಗತಿಯನ್ನು ಪ್ರತೀ ಎರಡು ತಿಂಗಳಿಗೊಮ್ಮೆ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಪರಿಶೀಲನೆ ನಡೆಸಬೇಕೆಂದೂ ಸೂಚಿಸಲಾಗಿತ್ತು.

ಸುಳ್ಯ ವಿಧಾನ ಸಭೆ ಕ್ಷೇತ್ರದಲ್ಲಿ ಆಯ್ಕೆಯಾದ ಗ್ರಾಮಗಳಲ್ಲಿ ಹೆಚ್ಚಿನ ಕಡೆ ಕಾಮಗಾರಿ ಪೂರ್ಣಗೊಂಡಿಲ್ಲ. ಕೆಲವೆಡೆ ಕಾಮಗಾರಿ ಪೂರ್ಣಗೊಂಡಿದ್ದರೂ ಅದರ ಬಿಲ್‌ ಪಾವತಿಗೆ ಬಾಕಿ ಇರಿಸಲಾಗಿದೆ ಎಂದು ತಿಳಿದುಬಂದಿದೆ. ಕೆಲವು ಗ್ರಾಮಗಳಿಗೆ ಅರ್ಧ ಅನುದಾನ ಮಾತ್ರವೇ ಬಿಡುಗಡೆಗೊಂಡಿದೆ. ಒಟ್ಟಿನಲ್ಲಿ ಯೋಜನೆ ಜಾರಿಯಾಗಿ 7 ವರ್ಷಗಳಾಗುತ್ತಾ ಬಂದರೂ ಯೋಜನೆ ಪರಿಪೂರ್ಣ ಅನುಷ್ಠಾನ ಆಗಿಲ್ಲ. ಶೇ. 70ರಷ್ಟು ಕಾಮಗಾರಿಯಷ್ಟೇ ನಡೆದಿವೆ ಎಂದು ಅಂದಾಜಿಸಲಾಗಿದೆ.

8 ಗ್ರಾಮಗಳು

ಸುಳ್ಯ ವಿಧಾನ ಸಭ ಕ್ಷೇತ್ರ ವ್ಯಾಪ್ತಿಯಲ್ಲಿ ಗ್ರಾಮ ವಿಕಾಸ ಯೋಜನೆಗೆ 8 ಗ್ರಾಮಗಳು ಆಯ್ಕೆಯಾಗಿದ್ದವು. ಸುಳ್ಯ ತಾಲೂಕಿನ ಪೆರುವಾಜೆ, ಐವರ್ನಾಡು, ಕಲ್ಮಡ್ಕ, ನೆಲ್ಲೂರು ಕೆಮ್ರಾಜೆ, ಕಡಬ ತಾಲೂಕಿನ ಬಿಳಿನೆಲೆ, ನೂಜಿಬಾಳ್ತಿಲ, ಬಳ್ಪ, ಕೌಕ್ರಾಡಿ ಗ್ರಾಮಗಳು ಆಯ್ಕೆಯಾಗಿದ್ದವು. ಇವುಗಳಲ್ಲಿ ಐವರ್ನಾಡು, ಕಲ್ಮಡ್ಕ ಗ್ರಾಮಗಳಲ್ಲಿ ಯೋಜನೆಯ ಕಾಮಗಾರಿ ಪೂರ್ತಿಯಾಗಿದೆ ಎಂದು ಗ್ರಾ.ಪಂ. ತಿಳಿಸಿದೆ.

6 ಗ್ರಾಮಗಳಲ್ಲಿ ಯೋಜನೆ ಪೂರ್ತಿ ಪ್ರಮಾಣದಲ್ಲಿ ನಡೆದಿಲ್ಲ. ಬಿಳಿನೆಲೆ ಗ್ರಾಮದಲ್ಲಿ ಯೋಜನೆಯಲ್ಲಿ ಹೆಚ್ಚಿನ ಕಾಮಗಾರಿ ನಡೆದಿದ್ದು, ಕೇವಲ 4 ಲಕ್ಷ ರೂ. ಮೊತ್ತದ ಕಾಮಗಾರಿ ನಡೆಯಲು ಬಾಕಿ ಇದ್ದು, ಕ್ರಿಯಾ ಯೋಜನೆ ನಡೆಸಲಾಗಿದೆ. ನೂಜಿಬಾಳ್ತಿಲ ಗ್ರಾಮದ ಸಭಾಂಗಣ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಪೆರುವಾಜೆ ಗ್ರಾಮದಲ್ಲಿ ಆದ ಕೆಲ ಕಾಮಗಾರಿಗಳಿಗೆ ಬಿಲ್‌ ಪಾವತಿ ಬಾಕಿ ಇದ್ದು, ಸಭಾಂಗಣದ ಕಾಮಗಾರಿ ಕೊನೆ ಹಂತದಲ್ಲಿದೆ. ಬಳ್ಪ, ನೆಲ್ಲೂರು ಕೆಮ್ರಾಜೆ, ಕೌಕ್ರಾಡಿ ಗ್ರಾಮಗಳಿಗೆ 35 ಲಕ್ಷ ರೂ. ಅನುದಾನ ಮಾತ್ರವೇ ಬಿಡುಗಡೆಗೊಂಡಿದ್ದು, ಅವುಗಳ ಕಾಮಗಾರಿ ನಡೆದಿದೆ ಎಂದು ಗ್ರಾ.ಪಂ. ತಿಳಿಸಿದೆ. ಬಾಕಿ ಹಣ ಬಂದಿಲ್ಲ ಎನ್ನಲಾಗಿದೆ.

ಬಿಲ್‌ ಬಾಕಿ

ಯೋಜನೆಯ ಕಾಮಗಾರಿಯ ಉಸ್ತುವಾರಿಯನ್ನು ಕೆಆರ್‌ಡಿಎಲ್‌ ಸಂಸ್ಥೆ ವಹಿಸಿಕೊಂಡಿದೆ. ಸರಕಾರದ ಅನುದಾನ ನೇರವಾಗಿ ಅವರಿಗೆ ವರ್ಗಾವಣೆಯಾಗುತ್ತದೆ. ಹೆಚ್ಚಿನ ಗ್ರಾಮಗಳಲ್ಲಿ ಕಾಮಗಾರಿ ನಡೆದಿದ್ದರೂ ಕಾಮಗಾರಿ ನಡೆಸಿದ ಗುತ್ತಿಗೆದಾರರಿಗೆ ಸಂಸ್ಥೆ ಬಿಲ್‌ ಪಾವತಿಸಿಲ್ಲ ಎಂಬ ದೂರು ಕೇಳಿ ಬಂದಿದೆ. ಹೀಗಾಗಿ ಕಾಮಗಾರಿ ಪೂರ್ಣಗೊಂಡರೂ ಗ್ರಾ.ಪಂ.ಗೆ ಬಿಟ್ಟು ಕೊಡಲು ಸಾಧ್ಯವಾಗುತ್ತಿಲ್ಲ. ಗುತ್ತಿಗೆದಾರರು ಬಿಲ್‌ ವಿಚಾರಿಸುತ್ತಿರುವುದು ಗ್ರಾ.ಪಂ. ಗೆ ತಲೆನೋವಾಗಿ ಪರಿಣಮಿಸಿದೆ.

ಅನುಷ್ಠಾನದಲ್ಲಿ ಹಿನ್ನಡೆ

ಗ್ರಾಮ ವಿಕಾಸ ಯೋಜನೆಯಲ್ಲಿ ನಡೆಸುವ ಕಾಮಗಾರಿಗಳು ಶಾಶ್ವತವಾಗಿ ಬಳಕೆಗೆ ಬರುವಂತಹದ್ದಾಗಿರಬೇಕು ಎಂದು ಸೂಚಿಸಲಾಗಿತ್ತು. ಆದರೆ ಗ್ರಾ.ಪಂ. ಕ್ರಿಯಾ ಯೋಜನೆ ಸಲ್ಲಿಸಿದರೂ ಸಂಬಂಧಿಸಿದ ಸಂಸ್ಥೆಯವರು ಕಾಮಗಾರಿ ನಿರ್ವಹಣೆಯಲ್ಲಿ ಸೂಕ್ತ ರೀತಿಯಲ್ಲಿ ಮುಂದಾಗದೆ ಹೆಚ್ಚಿನ ಕಡೆ ಕಾಮಗಾರಿ ಪೂರ್ಣಗೊಂಡಿಲ್ಲ ಎನ್ನುವ ದೂರು ಕೇಳಿ ಬಂದಿದೆ. ಕಾಮಗಾರಿಯಲ್ಲಿ ಕೆಲವೆಡೆ ಹಣದ ದುರುಪಯೋಗ ಆದ ಬಗ್ಗೆಯೂ ಆರೋಪ ಕೇಳಿಬಂದಿತ್ತು. ಒಟ್ಟಿನಲ್ಲಿ ಗ್ರಾಮ ವಿಕಾಸ ಯೋಜನೆಯಲ್ಲಿ ಆಯ್ಕೆಯಾದ ಗ್ರಾಮಗಳಲ್ಲಿ ನಡೆಯಲಿರುವ ಕಾಮಗಾರಿ, ಬಾಕಿ ಹಣದ ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕಾಮಗಾರಿ ಪ್ರಗತಿಯಲ್ಲಿ

ಗ್ರಾಮ ವಿಕಾಸ ಯೋಜನೆಯ ಕಾಮಗಾರಿ ಪ್ರಗತಿಯಲ್ಲಿದೆ. ಕಾಮಗಾರಿ ಪೂರ್ಣ ಗೊಂಡಿರುವ ರಿಪೋರ್ಟ್‌ ನೀಡಿದಲ್ಲಿ ಬಿಲ್‌ ಪಾವತಿ ಸಲಾಗುತ್ತದೆ. ಈ ಬಗ್ಗೆ ಮಾಹಿತಿ ಪಡೆದು ಪರಿಶೀಲಿಸಲಾಗುವುದು. -ಡಾ| ಕುಮಾರ್‌, ಮುಖ್ಯ ಕಾರ್ಯನಿರ್ವಹಣಾಧಿಕಾರಿ ದ.ಕ. ಜಿಲ್ಲಾ ಪಂಚಾಯತ್‌

ದಯಾನಂದ ಕಲ್ನಾರ್‌

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.