ಲಂಚ ಕೇಳುವ ಅಧಿಕಾರಿಗಳು ನೇರ ಮನೆಗೆ: ಆಲಂಕಾರಿನಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ


Team Udayavani, Jun 19, 2022, 6:35 AM IST

ಲಂಚ ಕೇಳುವ ಅಧಿಕಾರಿಗಳು ನೇರ ಮನೆಗೆ: ಆಲಂಕಾರಿನಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ

ಆಲಂಕಾರು: ಅಧಿಕಾರಿಗಳು ಭಿಕ್ಷುಕರ ಹಾಗೆ ಜನರಲ್ಲಿ ಬೇಡುವ ಆವಶ್ಯಕತೆಯಿಲ್ಲ. ಪ್ರತೀ ಕೆಲಸಕ್ಕೂ ಸಾರ್ವಜನಿಕರನ್ನು ಇಲಾಖಾಧಿಕಾರಿಗಳ ಬಳಿ ಕಳುಹಿಸಿ ಕಿರುಕುಳ ನೀಡಬಾರದು. ಒಂದು ಅರ್ಜಿ ಬಂದ ಬಳಿಕ ಅದರ ಜವಾಬ್ದಾರಿ ಅಧಿಕಾರಿಗಳದ್ದು, ಅದನ್ನು ಬಿಟ್ಟು ಅರ್ಜಿದಾರರನ್ನೇ ಪ್ರತೀ ಹಂತದ ಕೆಲಸಕ್ಕೆ ಕಳುಹಿಸುವುದು ಸರಿಯಲ್ಲ ಎಂದು ಆಲಂಕಾರಿನಲ್ಲಿ ನಡೆದ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರು ಹೇಳಿದರು.

ಅಧಿಕಾರಿಗಳು ಕಡತ ವಿಲೇವಾರಿಗೆ ಸಾರ್ವಜನಿಕರನ್ನು ಸತಾಯಿಸಿ ಹಣಕ್ಕೆ ಪೀಡಿಸಿದರೆ ನನ್ನ ಗಮನಕ್ಕೆ ತಂದಲ್ಲಿ ಅಂತಹ ಅಧಿಕಾರಿಗಳನ್ನು ನೇರವಾಗಿ ಮನೆಗೆ ಕಳುಹಿಸುತ್ತೇನೆ ಎಂದರು.

ಆಲಂಕಾರಿನಲ್ಲಿ ಎಂಡೋ ಸಂತ್ರಸ್ತ ರಿಗಾಗಿ ಶಾಶ್ವತ ಪುನರ್‌ವಸತಿ ಕೇಂದ್ರ ತೆರೆಯಲು ಸರಕಾರದಿಂದ ಮಂಜೂರಾತಿ ದೊರೆತು ಈಗಾಗಲೇ ಜಾಗ ಗುರುತು ಮಾಡಲಾಗಿದೆ. ಪಹಣಿ ಕೂಡ ಆಗಿದೆೆ. ಆದರೆ ಕೇಂದ್ರ ಅನುಷ್ಠಾನ ಇನ್ನೂ ಆಗಿಲ್ಲ. ಆದ್ದರಿಂದ ತತ್‌ಕ್ಷಣ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು. ಹಾಸಿಗೆ ಹಿಡಿರುವ ಎಂಡೋ ಸಂತ್ರಸ್ತರನ್ನು ಅವರ ತಾಯಂದಿರು ಆರೈಕೆ ಮಾಡುತ್ತಿದ್ದು, ಅಂಥ ತಾಯಂದಿರಿಗೆ ಮಾಸಾಶನ ಕೊಡಿಸಬೇಕು ಎಂದು ಹೋರಾಟಗಾರ ಪೀರ್‌ ಮಹಮ್ಮದ್‌ ಸಾಹೇಬ್‌ ಮನವಿ ಮಾಡಿದರು.

ಈ ಬಗ್ಗೆ ಉತ್ತರಿಸಿದ ಡಿ.ಸಿ., ಆಲಂಕಾರು, ಬೆಳ್ತಂಗಡಿಯಲ್ಲಿ ಶಾಶ್ವತ ಪುನರ್ವಸತಿ ಕೇಂದ್ರ ನಿರ್ಮಾಣದ ಬೇಡಿಕೆ ಇದೆ. ಈ ಬಗ್ಗೆ ಸರಕಾರದ ಗಮನಕ್ಕೆ ತರಲಾಗುವುದು ಎಂದರು.

94ಸಿ ಹಕ್ಕುಪತ್ರ: ಸತಾಯಿಸುತ್ತಾರೆ
ಅಧಿಕಾರಿಗಳು 94ಸಿಯಲ್ಲಿ ಹಕ್ಕುಪತ್ರ ನೀಡಲು ಸತಾಯಿಸುತ್ತಾರೆ ಎಂದು ಪದ್ಮಾವತಿ ದೂರಿದರು. ಇದಕ್ಕೆ ಉತ್ತರಿಸಿದ ಡಿ.ಸಿ., 94ಸಿಯಲ್ಲಿ ಬೋಗಸ್‌ ಅರ್ಜಿಯೂ ಇದೆ.

ಅರ್ಹರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು, ಸಮಸ್ಯೆಗಳನ್ನು ಎಡಿಸಿಯವರಲ್ಲಿ ತಿಳಿಸಿ ಪರಿ ಹರಿಸಿಕೊಳ್ಳಬೇಕು ಎಂದು ಹೇಳಿದರು.

ಧ್ವನಿವರ್ಧಕದ ಸಮಸ್ಯೆ-ದೂರು
ಪಕ್ಕದ ಮಸೀದಿಯಲ್ಲಿ ನಿಯಮ ಮೀರಿ ಧ್ವನಿವರ್ಧಕ ಬಳಸಲಾಗುತ್ತಿದೆ. ಇದರಿಂದ ತೊಂದರೆಯಾಗುತ್ತಿದೆ. ಈ ಬಗ್ಗೆ ಸ್ಥಳೀಯಾಡಳಿತಕ್ಕೆ ಲಿಖೀತ ಹಾಗೂ ಪೊಲೀಸ್‌ ಇಲಾಖೆಗೆ ಮೌಖೀಕ ದೂರು ನೀಡಲಾಗಿದೆ. ಮಸೀದಿಯವರು ಯಾವುದೇ ಬದಲಾವಣೆ ಮಾಡಿಲ್ಲ ಎಂದು ಕೊçಲ ಗ್ರಾ.ಪಂ. ಮಾಜಿ ಅಧ್ಯಕ್ಷ ಬಾಲಕೃಷ್ಣ ಗೌಡ ದೂರಿದರು. ನ್ಯಾಯಾಲಯದ ಆದೇಶ ಪ್ರಕಾರ 75 ಡೆಸಿಬಲ್‌ರಿಂದ ಜಾಸ್ತಿ ಶಬ್ದ ಬರುವ ಹಾಗಿಲ್ಲ, ನಿಯಮ ಮೀರಿದರೆ ಕ್ರಮ ಜರಗಿಸಿ ಎಂದು ಜಿಲ್ಲಾಧಿಕಾರಿ ರಾಜೇಂದ್ರ ಅವರು ಪೊಲೀಸರಿಗೆ ಸೂಚನೆ ನೀಡಿದರು.

ಸಮಸ್ಯೆಗಳ ಬಗ್ಗೆ ಚರ್ಚೆ
ದಲಿತ ಮಹಿಳೆಯೊಬ್ಬರು ನಿವೇಶನ ದೊರೆಯದ ಬಗ್ಗೆ ದೂರಿದರು. ಅಡಿಕೆಗೆ ಹಳದಿ ರೋಗ ಇನ್ನಿತರ ಸಮಸ್ಯೆಗಳ ಬಗ್ಗೆ ಶಿವಣ್ಣ ಗೌಡ ಕಕ್ವೆ ಗಮನ ಸೆಳೆದರು. ಆಲಂಕಾರು ಹಾಗೂ ಬಲ್ಯ ಗ್ರಾಮದಲ್ಲಿ ಖಾಯಂ ಗ್ರಾಮ ಕರಣಿಕರ ನೇಮಕವಾಗಬೇಕು, ಆಲಂಕಾರನ್ನು ಹೋಬಳಿ ಮಾಡಬೇಕು, 110 ಕೆವಿ ವಿದ್ಯುತ್‌ ಸಬ್‌ಸ್ಟೇಶನ್‌ ಶೀಘ್ರ ಅನುಷ್ಠಾನವಾಗಬೇಕು ಮೊದಲಾದ ಬೇಡಿಕೆಗಳನ್ನು ಗ್ರಾಮಸ್ಥರು ಸಭೆಯ ಮುಂದಿಟ್ಟರು. ಜಿಲ್ಲಾಧಿಕಾರಿಯವರು ತಡರಾತ್ರಿ ತನಕ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಅರ್ಜಿಗಳ ವಿಲೇವಾರಿ ಮಾಡಿದರು. ಸಭೆಯಲ್ಲಿ ಸರಕಾರದ ವಿವಿಧ ಯೋಜನಗಳ 120 ಫ‌ಲಾನುಭವಿಗಳಿಗೆ ಹಕ್ಕುಪತ್ರ, ಪರಿಹಾರ ಧನ ವಿತರಿಸಲಾಯಿತು.

ಟಾಪ್ ನ್ಯೂಸ್

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.