ಪಿಡಿಒ ಬದಲಾಯಿಸಲು ಗ್ರಾಮಸ್ಥರ ಆಗ್ರಹ

ಬಾರ್ಯ ಗ್ರಾಮ ಪಂಚಾಯತ್‌ ಗ್ರಾಮಸಭೆ

Team Udayavani, Apr 24, 2022, 10:12 AM IST

barya

ಉಪ್ಪಿನಂಗಡಿ: ಗ್ರಾಮಸ್ಥರಿಗೆ ಕಾನೂನಿನ ಪಾಠ ಹೇಳಿ ಕರ್ತವ್ಯ ಅವಧಿಗೆ ತಡವಾಗಿ ಬರುತ್ತಿದ್ದ ಗ್ರಾ.ಪಂ. ಪಿಡಿಒವನ್ನು ತತ್‌ಕ್ಷಣ ಬದಲಾಯಿಸಿ ಎಂದು ಬಾರ್ಯ ಗ್ರಾ. ಪಂ. ಗ್ರಾಮಸಭೆಯಲ್ಲಿ ಗ್ರಾಮಸ್ಥರು ಪಟ್ಟು ಹಿಡಿದರು.

ಬಾರ್ಯ ಗ್ರಾ.ಪಂ. ಸಭಾಂಗಣದಲ್ಲಿ ನಡೆದ ಸಭೆಯ ನೋಡಲ್‌ ಅಧಿಕಾರಿಯಾಗಿ ವಿರೂಪಾಕ್ಷಪ್ಪ ಕಾರ್ಯ ನಿರ್ವಹಿಸಿದರೆ, ಗ್ರಾ.ಪಂ. ಅಧ್ಯಕ್ಷೆ ಉಷಾ ಶರತ್‌ ಅಧ್ಯಕ್ಷತೆ ವಹಿಸಿದ್ದರು.

ಗ್ರಾ.ಪಂ. ಮಾಜಿ ಸದಸ್ಯ ಬಿ.ಕೆ. ಸುಲೈಮಾನ್‌ ಮಾತನಾಡಿ, ಎಲ್ಲ ಕಾನೂನು ಹೇಳುವ ಪಿಡಿಒ ಗಣರಾಜ್ಯ ದಿನದಂದು ಧ್ವಜಾರೋಹಣ ಯಾಕೆ ನೆರವೇರಿಸಿಲ್ಲ? ದಿನ ನಿತ್ಯ ಕಚೇರಿಗೆ ನಿಗದಿತ ಸಮಯಕ್ಕೆ ಬಾರದೆ ಗ್ರಾಮ ಸ್ಥರಿಗೆ ತೊಂದರೆ ಕೊಡುತ್ತಿದ್ದಾರೆ. ಕೆಲಸ ನಿಭಾಯಿಸಲು ಸಾಧ್ಯವಾಗದಿದ್ದರೆ ವರ್ಗಾವಣೆ ಮಾಡಿಕೊಳ್ಳಬಹುದು ಎಂದರು.

ದಾರಿದೀಪ ಅಳವಡಿಸುವಲ್ಲಿ ತಾರತಮ್ಯ ಯಾಕೆ? ಸಧರ್ಮಗಿರಿ ತಿರುವಿನಲ್ಲಿ ಈ ಹಿಂದೆ ಹಲವು ಜೀವಗಳು ಬಲಿಯಾಗಿದ್ದು, ಊರಿನವರು ಹಂಪ್ಸ್‌ ಹಾಕಿದರೂ ದಾರಿದೀಪ ಅಳವಡಿಸದೇ ಖಾಸಗಿ ವ್ಯಕ್ತಿಯ ಜಮೀನಿಗೆ ತೆರಳುವಲ್ಲಿ ಅಳವಡಿಸಿರುವುದು ಯಾಕೆ ಎಂದು ಅಧ್ಯಕ್ಷರನ್ನು ಪ್ರಶ್ನಿಸಿದರು.

ಬಾರ್ಯ ಸಿಎ ಬ್ಯಾಂಕ್‌ ಉಪಾಧ್ಯಕ್ಷ ಪ್ರವೀಣ ರೈ ಮಾತನಾಡಿ, ಏಕ ವಿನ್ಯಾಸ ಭೂಪರಿವರ್ತನೆ ಅನು ಮೋದನೆ ಯನ್ನು ಜಿಲ್ಲಾಮಟ್ಟದ ಇಲಾಖೆಗೆ ವರ್ಗಾಯಿಸಿರುವುದರಿಂದ ತೊಂದರೆಯಾಗಿದೆ. ಸಣ್ಣ ಪುಟ್ಟ ಮನೆಗಳ ನಿರ್ಮಾಣಕ್ಕೆ ಏಕ ವಿನ್ಯಾಸ ಇಲ್ಲದೆ ಸಾಲ ಪಡೆಯಲು ಅಸಾಧ್ಯವಾಗಿದೆ. ಈ ಬಗ್ಗೆ ಪರಿಹಾರ ಕಂಡುಕೊಳ್ಳಲಾಗಿಲ್ಲ ಎಂದರು.

ಕೆಲವೊಂದು ನಿರ್ಜನ ಪ್ರದೇಶಗಳಲ್ಲಿ ರಾತ್ರಿ ಗಾಂಜಾ ವ್ಯವಹಾರ ನಿರಂತರ ನಡೆಯುತ್ತಿದ್ದು ಹದಿಹರೆಯದವರು ಬಲಿಯಾಗುತ್ತಿದ್ದಾರೆ. ತಡರಾತ್ರಿ ಅಪರಿಚಿತ ವ್ಯಕ್ತಿಗಳು ಕೇರಳ ಮೂಲದ ಕಾರುಗಳಲ್ಲಿ ಕಾಣಿಸಿಕೊಳ್ಳುತ್ತಿದ್ದು, ಪೊಲೀಸ್‌ ಇಲಾಖೆ ನಿಗಾವಹಿಸಬೇಕು ಎಂದು ಬಿ.ಕೆ. ಸುಲೈಮಾನ್‌ ಆಗ್ರಹಿಸಿದರು.

ಇದಕ್ಕೆ ಉತ್ತರಿಸಿದ ಉಪ್ಪಿನಂಗಡಿ ಠಾಣೆ ಹೆಡ್‌ ಕಾನ್ಸ್‌ಸ್ಟೆಬಲ್‌ ಕುಶಾಲಪ್ಪ ಅಂತಹ ಪ್ರಕರಣ ಕಂಡು ಬಂದರೆ 112ಕ್ಕೆ ಕರೆ ಮಾಡಿ ಎಂದರು. ಉಪಾಧ್ಯಕ್ಷ ಪಿ.ಕೆ.ಉಸ್ಮಾನ್, ಸದಸ್ಯರಾದ ಧರ್ಣಪ್ಪ ಗೌಡ, ವಸಂತ, ಜಯಶ್ರೀ, ಪವಿತ್ರ, ಕಮಲಾಕ್ಷ, ಬಾಲಕೃಷ್ಣ ಶೆಟ್ಟಿ, ಸರೋಜಿನಿ, ಯಶೋದಾ, ನಝಿಯಾ, ಮೈಮುನಾ, ನವೀನ ಪ್ರಸಾದ್‌, ಅನುರಾಗ್‌, ಪುಷ್ಪಾ, ಪ್ರಶಾಂತ್‌ ಪೈ, ರಾಜೇಶ ರೈ, ನವೀನ ರೈ, ಅಶ್ರಫ್, ಆದಂ, ಜಯಪೂಜಾರಿ, ಗೀತಾ ಎಂ., ವಿಠಲ ಬಂಗೇರ ಉಪಸ್ಥಿತರಿದ್ದರು. ಪಿಡಿಒ ಸುಶೀಲಾ ನಿರೂಪಿಸಿದರು.

ಹಳ್ಳ ಹಿಡಿದ ತನಿಖೆ

ಅಕ್ರಮ ವ್ಯವಹಾರ ಸಮಗ್ರ ತನಿಖೆಗೆ ಒತ್ತಾಯಿಸಿ ವರ್ಷ ಕಳೆದರೂ ಈ ತನಕವು ಸಮಗ್ರ ತನಿಖೆ ವರದಿ ಬಂದಿಲ್ಲ. ತನಿಖೆ ಹಳ್ಳ ಹಿಡಿಯುವಂತಾಗಿದೆ ಎಂದು ಟಿ.ಕೆ. ಸುಲೈಮಾನ್‌ ಹೇಳಿದರು.

ಮಾಹಿತಿ ಕೊರತೆ

ಗ್ರಾ. ಪಂ.ಮಾಜಿ ಅಧ್ಯಕ್ಷ ರಾಜೇಶ ರೈ ಮಾತನಾಡಿ, ಉದ್ಯೋಗ ಖಾತರಿ ಯೋಜನೆ ಸಮರ್ಪಕವಾಗಿ ರೈತರಿಗೆ ಪ್ರಯೋಜನವಾಗುತ್ತಿಲ್ಲ. ಅಂತರ್ಜಲ ವೃದ್ಧಿಯ ಯೋಜನೆಯ ಮಾಹಿತಿ ಕೊರತೆ ಇದೆ ಎಂದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.