ಕೊಯಿಲ- ತಿಮರಗುಡ್ಡೆ ರಸ್ತೆ ಗ್ರಾಮಸ್ಥರಿಂದಲೇ ದುರಸ್ತಿ


Team Udayavani, Jun 15, 2018, 3:00 AM IST

road-repair-14-6.jpg

ಆಲಂಕಾರು: ನಾವು ಉಪಯೋಗಿಸುವ ರಸ್ತೆ ನಮ್ಮದು. ಅದು ನಮ್ಮಿಂದಲೇ ದುರಸ್ತಿ ಎನ್ನುವ ಧ್ಯೇಯ ವಾಕ್ಯದೊಂದಿಗೆ ಕೊಯಿಲ ಗ್ರಾಮದ ಕೊಲ್ಯ- ತಿಮರಗುಡ್ಡೆ ಕಚ್ಚಾ ರಸ್ತೆಯನ್ನು ಪ್ರತಿ ವರ್ಷದಂತೆ ಈ ವರ್ಷವೂ ಬುಧವಾರ ಊರಿನ ನಾಗರಿಕರೇ ದುರಸ್ತಿ ಮಾಡಿದರು. ಕೊಯಿಲ – ತಿಮರಗುಡ್ಡೆ ರಸ್ತೆ ಮಳೆಗಾಲ ಬಂತೆಂದರೆ ದುರ್ಗಮವಾಗುತ್ತದೆ. ವಾಹನ ಸಂಚಾರ ದುಸ್ತರವಾಗುತ್ತದೆ. ಪಾದಚಾರಿಗಳಿಗೂ ಕಷ್ಟವಾಗುತ್ತಿದೆ. 2000ನೇ ಇಸವಿಯಲ್ಲಿ ಕೊಯಿಲ ಗ್ರಾ.ಪಂ.ನಲ್ಲಿ ನ್ಯಾಯವಾದಿ ರವಿಕಿರಣ್‌ ಕೊಯಿಲ ಅಧ್ಯಕ್ಷರಾಗಿದ್ದಾಗ 1 ಕಿ.ಮೀ. ಉದ್ದದ ರಸ್ತೆಗೆ ಅನುದಾನ ಒದಗಿಸಿದ್ದರು. ಆ ಬಳಿಕ 16 ವರ್ಷಗಳಲ್ಲಿ ಊರವರೇ ರಸ್ತೆ ದುರಸ್ತಿ ಮಾಡುತ್ತಿದ್ದಾರೆ. ಗ್ರಾ.ಪಂ.ನವರು ರಸ್ತೆಗೆ ಹಾಸಲು ಕೆಂಪು ಕಲ್ಲು ಒದಗಿಸಿಕೊಟ್ಟರೆ, 10-15 ಜನ ಸೇರಿ ಅದನ್ನು ಹಾಸುತ್ತಾರೆ. ಕಳೆದ ಬೇಸಗೆಯಲ್ಲಿ ಕೊçಲ ಗ್ರಾ.ಪಂ. ಈ ರಸ್ತೆಯನ್ನು ದುರಸ್ತಿ ಮಾಡಿತ್ತು. ಇದರ ಬೆನ್ನಲ್ಲೇ ಮಳೆಗಾಲ ಪ್ರಾರಂಭವಾಗಿದ್ದರಿಂದ ರಸ್ತೆಯಲ್ಲಿ ಕೆಸರು ತುಂಬಿ ಸಂಚಾರಕ್ಕೆ ಸಂಚಕಾರ ತಂದಿತ್ತು.


ರಸ್ತೆಯ ತುರ್ತು ದುರಸ್ತಿಗಾಗಿ ಈ ಭಾಗದ ಜನರು ಗ್ರಾ.ಪಂ.ಗೆ ಮನವಿ ನೀಡಿದರು. ಇದಕ್ಕೆ ಸ್ಪಂದಿಸಿದ ಸದಸ್ಯ ಸುಂದರ ನಾಯ್ಕ ಹಾಗೂ ಗ್ರಾ.ಪಂ. ಅಧ್ಯಕ್ಷೆ ಹೇಮಾ ಮೋಹನದಾಸ್‌ ಶೆಟ್ಟಿ, ಗ್ರಾ.ಪಂ. ವತಿಯಿಂದ ಮೂರು ಪಿಕ್‌ – ಅಪ್‌ ಚರೆಲ್‌ (ದೊಡ್ಡ ಗಾತ್ರದ ಮರಳು) ನೀಡಿದ್ದಾರೆ. ಅದೂ ಸಾಲದೇ ಹೋದಾಗ ಊರವರೇ ಹಣ ಸಂಗ್ರಹಿಸಿ, ಮತ್ತೆ ಎರಡು ಲೋಡ್‌ ಮರಳು ತರಿಸಿ, ರಸ್ತೆ ದುರಸ್ತಿ ಮಾಡಿಕೊಂಡಿದ್ದಾರೆ. ಬುಧವಾರ 15ಕ್ಕೂ ಹೆಚ್ಚು ಗ್ರಾಮಸ್ಥರು ಶ್ರಮದಾನದಲ್ಲಿ ಭಾಗವಹಿಸಿದ್ದರು. ರಸ್ತೆಯಲ್ಲಿದ್ದ ಕೆಸರನ್ನು ತೆಗೆದು ಅಲ್ಲಲ್ಲಿ ಕಲ್ಲು ಹಾಕಿ, ಗುಂಡಿ ಮುಚ್ಚಿ, ಚರಲ್‌ ಹೊಯಿಗೆಯನ್ನು ಹಾಸಿ ರಸ್ತೆಯನ್ನು ಸಂಚಾರ ಯೋಗ್ಯವನ್ನಾಗಿ ಮಾಡಿದ್ದಾರೆ. ಎಲ್ಲವನ್ನೂ ಸರಕಾರದಿಂದ ನಿರೀಕ್ಷಿಸದೆ ತಮ್ಮ ರಸ್ತೆಯನ್ನು ತಾವೇ ದುರಸ್ತಿ ಮಾಡುತ್ತಾ ಬಂದು ಇತರರಿಗೆ ಮಾದರಿಯಾಗಿದ್ದಾರೆ. ಬುಧವಾರ ಪತ್ರಕರ್ತ ಕೆ.ಎಸ್‌. ಬಾಲಕೃಷ್ಣ ಕೊಯಿಲ ಅವರ ನೇತೃತ್ವದಲ್ಲಿ ನಡೆದ ಶ್ರಮದಾನದಲ್ಲಿ ಕುಶಾಲಪ್ಪ ಗೌಡ ಕೊಲ್ಯ, ಬೆಳ್ಳಿಯಪ್ಪ ಗೌಡ ತಿಮರಗುಡ್ಡೆ, ತಿಮ್ಮಪ್ಪ ಗೌಡ ಓಕೆ, ಶೇಖರ ಕೊಲ್ಯ, ತಿಮ್ಮಪ್ಪ ಗೌಡ ತಿಮರಗುಡ್ಡೆ, ಪ್ರವೀಣ್‌ರಾಜ್‌, ಡೊಂಬಯ್ಯ ಗೌಡ, ದಯಾನಂದ, ಹರೀಶ, ಕೃಷ್ಣಪ್ಪ ತಿಮರಗುಡ್ಡೆ ಭಾಗವಹಿಸಿದ್ದರು.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

Puttur ಶ್ರೀಗಂಧ ದಾಸ್ತಾನು ಪತ್ತೆ: ಓರ್ವ ಸೆರೆ

Puttur ಶ್ರೀಗಂಧ ದಾಸ್ತಾನು ಪತ್ತೆ: ಓರ್ವ ಸೆರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.