ಮಹಿಳೆಗೆ ಆಸರೆಯಾದ ವಿನಾಯಕ ಮಿತ್ರ ಮಂಡಳಿ

ಸ್ವಚ್ಚ ಭಾರತ್‌ ಕಲ್ಪನೆಯಲ್ಲಿ ಮನೆ ಮೇಲ್ಛಾವಣಿ ದುರಸ್ತಿ

Team Udayavani, May 28, 2019, 6:04 AM IST

2705HALE-4

ಪಡುಪಣಂಬೂರು: ಇಲ್ಲಿನ ಪಡುಪಣಂಬೂರು ಗ್ರಾಮ ಪಂಚಾಯತ್‌ನ ಬೆಳ್ಳಾಯರು ಗ್ರಾಮದ ಕೆರೆಕಾಡು ಜಳಕದ ಕೆರೆಯ ನಿವಾಸಿ ಪ್ರಮಿಳಾ ಅವರು ಪತಿಯನ್ನು ಕಳೆದುಕೊಂಡು ಬುದ್ಧಿಮಾಂದ್ಯ ಮಗ ಚರಣ್‌ನೊಂದಿಗೆ ಬೀಡಿ ಕಟ್ಟಿ ಜೀವನ ನಡೆಸುತ್ತಿದ್ದಾರೆ.

ಈಕೆ ವಾಸಿಸುತ್ತಿದ್ದ ಮನೆಯ ಮೆಲ್ಛಾವಣಿ ಕುಸಿಯುವ ಹಂತ ದಲ್ಲಿದ್ದು ಅಪಾಯವನ್ನು ಗಮನಿಸಿದ ಪಕ್ಷಿಕೆರೆಯ ಶ್ರೀ ವಿನಾಯಕ ಮಿತ್ರಮಂಡಳಿಯ ಸದಸ್ಯರು ತಮ್ಮ ತಿಂಗಳ ಸ್ವತ್ಛ ಭಾರತ್‌ ಅಭಿಯಾನದಲ್ಲಿ ದುರಸ್ತಿ ಮಾಡಿ ಪ್ರಮೀಳಾ ಅವರಿಗೆ ಆಸರೆಯಾಗಿದ್ದಾರೆ.

ಮಂಗಳೂರಿನ ಯುವ ಕಾರ್ಯ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಇದರ ಮಾರ್ಗದರ್ಶನದಲ್ಲಿ ಅಲ್ಲಲ್ಲಿ ಸ್ವತ್ಛತಾ ಕಾರ್ಯವನ್ನು ನಡೆಸುತ್ತಿರುವ ವಿನಾಯಕ ಮಿತ್ರ ಮಂಡಳಿಯು ಪ್ರಮೀಳಾ ಅವರ ಮನೆಯ ಅಂಗಣವನ್ನೇ ತಿಂಗಳ ಸ್ವತ್ಛತಾ ಅಭಿಯಾನಕ್ಕೆ ಬಳಸಿಕೊಂಡು ಬೀಳುವ ಸ್ಥಿತಿಯಲ್ಲಿದ್ದ ಮೇಲ್ಛಾವಣಿಯನ್ನು ದಿನಪೂರ್ತಿ ನಡೆಸಿದ ಶ್ರಮದಾನದ ಮೂಲಕ ಹೆಂಚುಗಳನ್ನು ತೆಗೆದು, ಪಕ್ಕಾಸು ಮತ್ತು ರೀಪುಗಳನ್ನು ಕಳಚಿ ದೀರ್ಘ‌ಕಾಲಿಕಾವಾಗಿ ಬಾಳಿಕೆ ಬರುವ ಶೀಟ್‌ಗಳನ್ನು ಅಳವಡಿಸಿ, ಸುತ್ತ ಸಿಮೆಂಟ್‌ ಬ್ಲಾಕ್‌ನಿಂದ ಮನೆಗೆ ಭದ್ರತೆಯನ್ನು ನೀಡಿದೆ.

ದಾನಿಗಳ ಸಹಕಾರವನ್ನು ಹಾಗೂ ಮಂಡಳಿಯ ಸದಸ್ಯರ ನೆರವಿನಿಂದ ಸುಮಾರು 35 ಸಾವಿರ ರೂ. ವೆಚ್ಚದ ಸಾಮಗ್ರಿಗಳನ್ನು ಬಳಸಲಾಗಿದೆ. ಸದಸ್ಯರ ಶ್ರಮದಾನಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪಡುಪಣಂಬೂರು ಗ್ರಾಮ ಪಂಚಾಯತ್‌ ಅಧ್ಯಕ್ಷ ಮೋಹನ್‌ದಾಸ್‌, ಸದಸ್ಯರಾದ ಹೇಮನಾಥ ಅಮೀನ್‌, ಸುದರ್ಶನ್‌ ಬಂಗೇರ, ಧನಂಜಯ ಪಿ. ಶೆಟ್ಟಿಗಾರ್‌, ರಾಜೇಶ್‌ ದಾಸ್‌, ಉಮೇಶ್‌ ಶೆಟ್ಟಿಗಾರ್‌, ಮಾರ್ಗದರ್ಶಕರಾದ ವಿನೋದ್‌ ತೋಕೂರು, ಉಮೇಶ್‌ ಪಂಜ, ಕಿರಣ್‌ ಸಾಲ್ಯಾನ್‌, ಹರೀಶ್‌ ಹೊಸಕಾಡು, ಧನುಷ್‌, ಅಶೋಕ್‌ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.