Viral; ತೋಟಕ್ಕೆ ಮಂಗ ಬಂದಿದೆ, ಬೇಗ ಬನ್ನಿ: ಪೊಲೀಸರಿಗೆ ದ. ಕನ್ನಡ ಕೃಷಿಕರ ಮೊರೆ!
Team Udayavani, Apr 12, 2024, 6:35 AM IST
ಪುತ್ತೂರು/ ವಿಟ್ಲ: ಚುನಾವಣೆ ಹಿನ್ನೆಲೆಯಲ್ಲಿ ಕೋವಿಗಳನ್ನು ಪೊಲೀಸ್ ಠಾಣೆಗಳಲ್ಲಿ ಠೇವಣಿ ಇಟ್ಟಿರುವುದರಿಂದ ಬೆಳೆ ರಕ್ಷಣೆಗಾಗಿ ಕೃಷಿಕರು ಈಗ ಬೇರೆ ದಾರಿ ಇಲ್ಲದೆ ಪೊಲೀಸರ ಹಾಗೂ ಕೋರ್ಟ್ ಮೊರೆ ಹೋಗುತ್ತಿದ್ದಾರೆ. ವಿನಾಯಿತಿ ನೀಡುವಂತೆ ಮಾಡಿರುವ ಮನವಿಗೆ ಬೆಲೆ ಸಿಗದ ಕಾರಣ ಕಾಡು ಪ್ರಾಣಿಗಳು ತೋಟಕ್ಕೆ ಬಂದಾಕ್ಷಣ 112 ಪೊಲೀಸ್ ಸಹಾಯವಾಣಿಗೆ ಕರೆ ಮಾಡಲಾರಂಭಿಸಿದ್ದಾರೆ.
ಕಾಡುಪ್ರಾಣಿಗಳಿಂದ ಬೆಳೆ, ಸ್ವರಕ್ಷಣೆ ಗಾಗಿ ನಾವು ಹೊಂದಿರುವ ಕೋವಿಗಳನ್ನು ಪೊಲೀಸರು ಠೇವಣಿ ಇರಿಸಿ ಕೊಂಡಿರುವುದರಿಂದ ಈಗ ಪೊಲೀಸರೇ ನಮಗೆ ರಕ್ಷಣೆ ಒದಗಿಸ ಬೇಕು ಎಂಬುದು ಕೃಷಿಕರ ವಾದ. ಈ ನಿಟ್ಟಿನಲ್ಲಿ ಪುತ್ತೂರು ಭಾಗದ ಕೃಷಿಕರು ಈಗಾಗಲೇ ಅಭಿಯಾನ ಆರಂಭಿಸಿದ್ದಾರೆ. ಜತೆಗೆ ಈಗಾಗಲೇ ಹಲವಾರು ಕರೆಗಳು ಪೊಲೀಸರ ಸಹಾಯವಾಣಿಗೆ ಹೋಗಿವೆ.
“ತೋಟದಲ್ಲಿ ಈಗ ಕೋತಿ, ಹಂದಿ ಮತ್ತಿತರ ಕಾಡುಪ್ರಾಣಿಗಳ ಹಾವಳಿ ವಿಪರೀತವಾಗಿದೆ.ರಕ್ಷಣೆಗೆ ಕೋವಿ ನಮ್ಮಲ್ಲಿಲ್ಲ. ಹೀಗಾಗಿ ಪೊಲೀಸರೇ ಬಂದು ಬೆಳೆ ರಕ್ಷಣೆ ಮಾಡಬೇಕು’ ಎಂಬುದು ಕೃಷಿಕರ ಆಗ್ರಹ. ತುರ್ತು ಸೇವೆ 112ಕ್ಕೆ ಕರೆ ಮಾಡುವ ಚಳವಳಿಯನ್ನು ಪರವಾನಗಿ ಹೊಂದಿದ ಎಲ್ಲ ಕೃಷಿಕರೂ ಆರಂಭಿಸಬೇಕು ಎಂದು ಕರ್ನಾಟಕ ರಾಜ್ಯ ಹಸುರು ಸೇನೆಯ ದಕ್ಷಿಣ ಕನ್ನಡ ಜಿಲ್ಲಾ ಘಟಕ ಕರೆ ನೀಡಿದೆ. ದ.ಕ. ಜಿಲ್ಲೆಯಲ್ಲಿ ಸುಮಾರು 4 ಸಾವಿರಕ್ಕಿಂತಲೂ ಅಧಿಕ ಕೃಷಿಕರು ಕೋವಿ ಪರವಾನಿಗೆ ಹೊಂದಿದ್ದಾರೆ.
ಏನಿದು ಪ್ರಕರಣ?: ಚುನಾವಣೆ ಸಂದರ್ಭ ಮೂರು ತಿಂಗಳು ಎಲ್ಲರೂ ಕೋವಿಗಳನ್ನು ಪೊಲೀಸ್ ಠಾಣೆಗಳಲ್ಲಿ ಠೇವಣಿ ಇಡಬೇಕೆಂಬುದು ಜಿಲ್ಲಾಡಳಿತ ದ ಸೂಚನೆ. ಕಾಡು ಪ್ರಾಣಿಗಳು ತೋಟಕ್ಕೆ ನುಗ್ಗಿ ಹಾನಿ ಮಾಡಿದಾಗ ಅವುಗಳನ್ನು ಓಡಿಸಲು ಕೋವಿ ಇಲ್ಲದೆ ಬೆಳೆದ ಬೆಳೆ ಕಣ್ಣೆದುರೇ ನಾಶವಾಗುತ್ತಿದ್ದರೂ ಕೈಕಟ್ಟಿಕುಳಿತುಕೊಳ್ಳುವ ಸ್ಥಿತಿ. ರೈತರಿಗೆ ವಿನಾ ಯಿತಿ ನೀಡಬೇಕೆಂದು ಎಷ್ಟೇ ಮನವಿ ಮಾಡಿದರೂ ಅದಕ್ಕೆ ಸ್ಪಂದನೆ ಸಿಕ್ಕಿಲ್ಲ.
ಕೃಷಿಕರಿಂದ ಮೊಕದ್ದಮೆ: ಕೋವಿ ಠೇವಣಿಯಿಂದ ವಿನಾಯಿತಿ ಕೋರಿ ಎ.1ರಂದು ಕೃಷಿಕರು ನ್ಯಾಯಾಲಯ ದಲ್ಲಿ ದಾವೆ ಹೂಡಿ ದ್ದಾರೆ. ಎ. 2ರಂದು ವಿನಾಯಿತಿ ನೀಡಿ ರುವ ಮಾಹಿತಿಯನ್ನು ದ.ಕ. ಜಿಲ್ಲಾಧಿಕಾರಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಎ. 3 ರಂದು ಕೋವಿಯನ್ನು ತತ್ಕ್ಷಣ ಹಿಂದಿ ರುಗಿಸಬೇಕೆಂದು ನ್ಯಾಯಾಲಯವು ಆದೇಶಿ ಸಿತ್ತು. ಆದರೆ ಪೊಲೀಸರು ಕೋವಿಯನ್ನು ಹಿಂದಿರುಗಿಸಿರಲಿಲ್ಲ. ಬಳಿಕ ಈ ಕೃಷಿಕರು 112ಕ್ಕೆ ಕರೆ ಮಾಡಿ ನ್ಯಾಯಾಲಯದ ಆದೇಶ, ಜಿಲ್ಲಾಧಿಕಾರಿಯ ಸೂಚನೆ ಇದ್ದರೂ ಕೋವಿ ಹಿಂದಿರುಗಿಸಿಲ್ಲ. ಹೀಗಾಗಿ ತೋಟಕ್ಕೆ ಬಂದಿರುವ ಕೋತಿಗಳನ್ನು ಪೊಲೀಸರೇ ಓಡಿಸಬೇಕು ಎಂದು ಹೇಳಿದ್ದರು.
ಪೊಲೀಸರೇ ಕೋವಿ ಮನೆಗೆ ತಲುಪಿಸಿದರು!
ಈ ನಡುವೆ ಪೊಲೀಸ್ ಠಾಣೆಯಲ್ಲಿ ಠೇವಣಿ ಇರಿಸಲಾಗಿದ್ದ ಕೋವಿಯನ್ನು ಪೊಲೀಸರೇ ಕೃಷಿಕರೊಬ್ಬರ ಮನೆಗೆ ತಲುಪಿಸಬೇಕಾಗಿ ಬಂದ ಘಟನೆಯೂ ನಡೆದಿದೆ. ನ್ಯಾಯಾಲಯಕ್ಕೆ ಹೋಗಿ ತನಗೆ ಕೋವಿಯ ಅನಿವಾರ್ಯವನ್ನು ಮನವರಿಕೆ ಮಾಡಿ ಅನುಮತಿ ಪಡೆದ ವ್ಯಕ್ತಿಯೊಬ್ಬರಿಗೆ ಪೊಲೀಸರೇ ಕೋವಿಯನ್ನು ಮನೆಗೆ ತಲುಪಿಸಿದ್ದಾರೆ. ಕೋವಿಯನ್ನು ಸಾರ್ವ ಜನಿಕವಾಗಿ ಪ್ರದರ್ಶನ ಮಾಡಬಾರದು ಎಂಬ ಷರತ್ತನ್ನು ಕೋವಿ ಠೇವಣಿಯಿಂದ ಕೃಷಿಕರಿಗೆ ವಿನಾಯಿತಿ ನೀಡುವ ನಿಯಮದಲ್ಲಿ ನಮೂದಿಸಿರುವುದೇ ಇದಕ್ಕೆ ಕಾರಣ. ನಾವು ಠಾಣೆಗೆ ಹೋಗಿ
ಕೋವಿ ಪಡೆದು ಮನೆಗೆ ಒಯ್ಯುವಾಗ ಅದನ್ನೇ ಸಾರ್ವಜನಿಕ ಪ್ರದರ್ಶನ ಎಂದು ನಿರ್ಣಯಿಸಿ ಕೇಸು ದಾಖಲಿಸಿ ಕೊಂಡರೆ ಏನು ಮಾಡುವುದು ಎಂಬ ಪ್ರಶ್ನೆ ಕೃಷಿಕರದು. ಇದಕ್ಕಾಗಿ ಖುದ್ದು ಪೊಲೀಸರೇ ಕೋವಿಯನ್ನು ತಂದು ಒಪ್ಪಿಸಬೇಕೆಂಬ ಷರತ್ತನ್ನು ಕೃಷಿಕರು ವಿಧಿಸುತ್ತಿ¨ªಾರೆ. ವಿಟ್ಲ ಠಾಣಾ ವ್ಯಾಪ್ತಿಯ ಕೃಷಿಕರೊಬ್ಬರ ಈ ಷರತ್ತಿಗೆ ಕೊನೆಗೂ ಪೊಲೀಸ್ ಇಲಾಖೆ ಒಪ್ಪಿದ್ದು, ಮನೆಗೆ ಹೋಗಿ ಕೋವಿ ಹಸ್ತಾಂತರಿಸಿ ಬಂದಿದೆ. ದ.ಕ. ಜಿಲ್ಲೆಯಲ್ಲಿ ಒಟ್ಟು 9 ಮಂದಿ ಕೃಷಿಕರು ನ್ಯಾಯಾಲಯದ ಮೊರೆ ಹೋಗಿದ್ದು, ಅವರಿಗೆ ಅನುಮತಿ ದೊರಕಿದೆ. 7 ಮಂದಿ ಕೃಷಿಕರು ಠಾಣೆಯಿಂದ ಕೋವಿ ವಾಪಸ್ ಕೊಂಡೊ ಯ್ದಿದ್ದು, ಓರ್ವರು ಠೇವಣಿ ಇಟ್ಟಿರಲಿಲ್ಲ. ಮತ್ತೋರ್ವ ಕೃಷಿಕರ ಒತ್ತಾಯದಂತೆ ಪೊಲೀಸರೇ ಕೋವಿಯನ್ನು ಮನೆಗೆ ತಲುಪಿಸಿದ್ದಾರೆ.
ವೈರಲ್ ಆದ ಆಡಿಯೋ
ವಿಟ್ಲದ ಕೃಷಿಕರೊಬ್ಬರು 112 ಸಹಾಯವಾಣಿಗೆ ಕರೆ ಮಾಡಿ, “ತೋಟಕ್ಕೆ ಮಂಗ ಬಂದಿದೆ. ಕೂಡಲೇ ಬರಬೇಕು’ ಎಂದು ಮನವಿ ಮಾಡಿದ್ದರು. ಆ ಆಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಸಂಜೆ 5 ಗಂಟೆಯ ವೇಳೆಗೆ ಅವರು ಫೋನ್ ಮಾಡಿದ್ದು, 8 ಗಂಟೆಯ ವೇಳೆಗೆ ವಿಟ್ಲ ಪೊಲೀಸರು ಅವರ ಮನೆಗೆ ಭೇಟಿ ನೀಡಿದ್ದಾರೆ. ಮರುದಿನ ಬೆಳಗ್ಗೆ ಅವರ ಕೋವಿಯನ್ನೂ ಮರಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ