ನಿರೀಕ್ಷಿತ ಫ‌ಲ ನೀಡದ ತಹಶೀಲ್ದಾರ್‌ ಭೇಟಿ

ಮತದಾನ ಬಹಿಷ್ಕಾರ ನಿರ್ಧಾರ ಬದಲಿಸದ ಕಲ್ಮಕಾರು ನಿವಾಸಿಗರು

Team Udayavani, Apr 17, 2019, 6:00 AM IST

Udayavani Kannada Newspaper

ಸುಬ್ರಹ್ಮಣ್ಯ: ಸೇತುವೆ ಹಾಗೂ ರಸ್ತೆ ಸಹಿತ ಪ್ರಮುಖ ಮೂಲ ಸೌಕರ್ಯ ಬೇಡಿಕೆಗಳನ್ನು ಈಡೇರಿಸದೆ ಇರುವುದಕ್ಕೆ ಅಸಮಾಧಾನಗೊಂಡು ಎ. 18ರ ಲೋಕಸಭಾ ಚುನಾವಣೆ ಬಹಿಷ್ಕಾರಕ್ಕೆ ಮುಂದಾಗಿರುವ ಕಲ್ಮಕಾರು ಭಾಗದ 40ಕ್ಕೂ ಅಧಿಕ ಕುಟುಂಬಗಳು ಸರಿಯಾದ ಪರಿಹಾರ ದೊರಕುವ ವಿಶ್ವಾಸ ದೊರಕದೆ ಇರುವುದರಿಂದ ಮತದಾನ ಬಹಿಷ್ಕಾರದ ತಮ್ಮ ನಿರ್ಧಾರಕ್ಕೆ ಬದ್ಧರಾಗಿ ನಡೆದುಕೊಳ್ಳಲು ನಿರ್ಧರಿಸಿದ್ದಾರೆ.

ಕಲ್ಮಕಾರು ಭಾಗದ ಶೆಟ್ಟಿಕಟ್ಟ ಪರಿಸರದಲ್ಲಿ ಹರಿಯುವ ಹೊಳೆಗೆ ಸೇತುವೆ ನಿರ್ಮಾಣವಾಗದೆ ಕಾಜಿಮಡ್ಕ, ಕೊಪ್ಪಡ್ಕ, ಮೆಂಟಕಜೆ, ಆಂಜನಕಜೆ ಗುಳಿಕಾನ ಮೊದಲಾದ ಭಾಗಗಳಿಗೆ ಮಳೆಗಾಲದ ಅವಧಿಯಲ್ಲಿ ಸಂಪರ್ಕ ಸಾಧ್ಯವಾಗದೆ ನಾಗರಿಕರು, ಮಕ್ಕಳು ತುಂಬಾ ತೊಂದರೆ ಅನುಭವಿಸುತ್ತಿದ್ದರು. ಈ ಕುರಿತು ಪರಿಸರದವರು ಸಂಬಂಧಿಸಿದ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಕಳೆದ 35 ವರ್ಷಗಳಿಂದ ಮನವಿ ಸಲ್ಲಿಸುತ್ತಲೇ ಬಂದಿದ. ಈ ತನಕ ಯಾವುದೇ ಸ್ಪಂದನೆ ದೊರಕಿರಲಿಲ್ಲ. ಇದಕ್ಕೆ ಅಸಮಧಾನಗೊಂಡ ಈ ಭಾಗದ ನಲವತ್ತು ಕುಟುಂಬಗಳು ಈ ಭಾರಿಯ ಲೋಕಸಭಾ ಚುನಾವಣೆ ಬಹಿಷ್ಕರಿಸುವ ನಿರ್ಧಾರಕ್ಕೆ ಬಂದಿದ್ದರು.

ಮನವೊಲಿಸಿದ್ದರು
ಪರಿಸರದವರೆಲ್ಲರೂ ಕುಳಿತು ಚರ್ಚಿಸಿ ಮತದಾನ ಬಹಿಷ್ಕಾರದ ಸಾಮೂಹಿಕ ನಿರ್ಧಾರಕ್ಕೆ ಬಂದು ಸೇತುವೆ ನಿರ್ಮಾಣವಾಗಬೇಕಿರುವ ಸ್ಥಳದಲ್ಲಿ ಬ್ಯಾನರು ತೂಗು ಹಾಕಿ ಮತದಾನ ಬಹಿಷ್ಕಾರಕ್ಕೆ ವಾರದ ಹಿಂದೆ ನಿರ್ಧರಿಸಿದ್ದರು. ವಿಚಾರ ತಿಳಿದು ಸುಳ್ಯ ತಾ| ತಹಸಿಲ್ದಾರ್‌ ಕುಂಞಿ ಅಹಮ್ಮದ್‌ ಸ್ಥಳಕ್ಕೆ ಭೇಟಿ ಇತ್ತು ನಾಗರಿಕರ ಜತೆ ಮಾತುಕತೆ ನಡೆಸಿ ಮನವೊಲಿಸುವ ಕೆಲಸ ಮಾಡಿದ್ದರು.

ಸಂಬಂಧಿಸಿದ ಅಧಿಕಾರಿಗಳನ್ನು ಸಂಪರ್ಕಿಸಿ ಭೇಟಿ ಇತ್ತ ಮರುದಿನವೇ ಅಧಿಕಾರಿಗಳ ಸಭೆ ಕರೆದು ಸೇತುವೆ ನಿರ್ಮಾಣಕ್ಕೆ ಹಿಂದಿನ ಕಡತಗಳ ಪರಿಶೀಲನೆ ನಡೆಸಿ ಸೂಕ್ತ ವ್ಯವಸ್ಥೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ತಹಸಿಲ್ದಾರ್‌ ಅವರ ಸ್ಪಂದನೆ ಸ್ಥಳೀಯ ನಿವಾಸಿಗಳಿಗೆ ಆಗ ತೃಪ್ತಿ ನೀಡಿತ್ತು.
ಸಾಧ್ಯವಿಲ್ಲ ಎಂದರು.

ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಇಲಾಖೆಗಳು ಸೇತುವೆ ನಿರ್ಮಾಣಕ್ಕೆ ಹೆಚ್ಚು ಅನುದಾನದ ಆವಶ್ಯಕತೆ ಇದೆ. ಅಷ್ಟು ಬೃಹತ್‌ ಪ್ರಮಾಣದ ಅನುದಾನ ಹೊಂದಿಸಲು ಸಾಧ್ಯವಿಲ್ಲ ಎನ್ನುವ ಉತ್ತರವನ್ನು ಸಭೆಯ ಅನಂತರದಲ್ಲಿ ಕೊಟ್ಟಿದ್ದರಿಂದ ನಿರಾಸೆಗೊಂಡ ಗ್ರಾಮಸ್ಥರು ಮತದಾನ ಬಹಿಷ್ಕಾರ ನಿರ್ಧಾರಕ್ಕೆ ಬದ್ಧರಾಗಿ ನಡೆದುಕೊಳ್ಳಲು ನಿರ್ಧರಿಸಿದ್ದಾರೆ. ನಮ್ಮ ಬೇಡಿಕೆ ಸೂಕ್ತ ಪರಿಹಾರದ ಭರವಸೆ ದೊರೆಯದೆ ಕಾರಣ ನಿವಾಸಿಗಳೆಲ್ಲರೂ ಮತದಾನ ಬಹಿಷ್ಕರಿಸುವ ನಿರ್ಧಾರ ಹಿಂಪಡೆಯದೇ ಇರಲು ನಿರ್ಧರಿಸಿರುವರು.

ಶಾಸಕರ ವಿರುದ್ಧ ಅಕ್ರೋಶ
ಈ ಭಾಗದ ಮೂಲ ಸೌಕರ್ಯ ವಿಚಾರವಾಗಿ ಸುಳ್ಯದ ಶಾಸಕರ ಸಹಿತ ಜನಪ್ರತಿನಿಧಿಗಳ ಸತತ ನಿರ್ಲಕ್ಷಕ್ಕೆ ಭಾರಿ ಆಕ್ರೋಶಗಳು ಪರಿಸರದ ಜನತೆಯಿಂದ ವ್ಯಕ್ತವಾಗಿದೆ. ನಲವತ್ತು ಕುಟುಂಬಗಳು ವಾಸವಿರುವ ಈ ಭಾಗಕ್ಕೆ ಕಿರು ಸೇತುವೆ ನಿರ್ಮಿಸಲು 37 ವರ್ಷಗಳು ಬೇಕಿತ್ತೆ ಎನ್ನುವ ಪ್ರಶ್ನೆಯನ್ನು ಪರಿಸರದವರು ಕೇಳುತ್ತಿದ್ದಾರೆ. ಇಷ್ಟೆಲ್ಲ ಸಮಸ್ಯೆಗಳಿಂದ ಬಳಲಿದ್ದರೂ, ಶಾಸಕರು ಕನಿಷ್ಠ ಸೌಜನ್ಯಕ್ಕೂ ಮತ ಕೇಳುವ ನೆಪದಲ್ಲಾದರೂ ಈ ಭಾಗಕ್ಕೆ ಭೇಟಿ ನೀಡಬೇಕಿತ್ತು. ಅದನ್ನೂ ಮಾಡದೆ ಇರುವ ಶಾಸಕರ ನಿಲುವಿಗೆ ಮತ್ತು ಸ್ಥಳೀಯ ಮುಖಂಡರ ತಟಸ್ಥ ನಿಲುವಿನ ವಿರುದ್ಧ ನಿವಾಸಿಗರು ಆಕ್ರೋಶಿತರಾಗಿದ್ದಾರೆ.

ಇಂದು ಮತ್ತೆ ಸಭೆ
ಎ. 17ರಂದು ಮತ್ತೆ ಸ್ಥಳಿಯರೆಲ್ಲರೂ ಸಭೆ ಸೇರಿ ಚರ್ಚೆ ನಡೆಸಲು ನಿರ್ಧರಿಸಿದ್ದಾಗಿ ಫಲಾನುಭವಿ ಗೋಪಾಲಕೃಷ್ಣ ಕೊಪ್ಪಡ್ಕ ತಿಳಿಸಿದ್ದಾರೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.