ಪಚ್ಚನಾಡಿಗೆ ವಿಶೇಷ ಅಧ್ಯಯನ ತಂಡ ಭೇಟಿ
Team Udayavani, Sep 20, 2019, 5:20 AM IST
ಮಹಾನಗರ: ಪಚ್ಚನಾಡಿ ಡಂಪಿಂಗ್ ಯಾರ್ಡ್ನಿಂದ ತ್ಯಾಜ್ಯದ ರಾಶಿಯು ಜರಿದು ಮಂದಾರ ಪ್ರದೇಶಕ್ಕೆ ವ್ಯಾಪಿಸಿದ ಪರಿಣಾಮ ಉಂಟಾಗಿರುವ ಅನಾ ಹುತಗಳ ಬಗ್ಗೆ ಸರಕಾರಕ್ಕೆ ವರದಿ ನೀಡುವ ನೆಲೆಯಲ್ಲಿ ರಾಜ್ಯದ ವಿಶೇಷ ಅಧ್ಯಯನ ತಂಡ ಗುರುವಾರ ಮಂಗಳೂರಿಗೆ ಆಗಮಿಸಿ ಮಂದಾರ ಪ್ರದೇಶಕ್ಕೆ ಭೇಟಿ ನೀಡಿತು.
ವಿವಿಧ ಕ್ಷೇತ್ರದ ತಜ್ಞರಾಗಿರುವ ಚೆನ್ನೈಯ ಎಸ್. ಪಟ್ಟಾಭಿರಾಮಣ್, ಮೈಸೂರಿನ ಡಾ| ಪಿ.ಎಂ. ಕುಲಕರ್ಣಿ, ಬೆಂಗಳೂರಿನ ರಮೇಶ್, ತಮಿಳುನಾಡಿನ ನಾಗೇಶ್ ಪ್ರಭು ಅವರನ್ನು ಒಳಗೊಂಡಿರುವ ತಂಡವು ಮಂದಾರ ಪ್ರದೇಶದಲ್ಲಿ ಪರಿ ಶೀಲನೆ ನಡೆಸಿತು. ಬಳಿಕ ಮಂದಾರ ಪ್ರದೇ ಶದ ನಿರ್ವಸಿತರು ತಾತ್ಕಾಲಿಕ ಪುನರ್ವಸತಿ ಪಡೆದಿರುವ ಕುಲಶೇಖರದ ಬೈತುರ್ಲಿಗೆ ತಂಡ ಭೇಟಿ ನೀಡಿ ಮಾತುಕತೆ ನಡೆಸಿತು. ನಿರ್ವಸಿತರು ಮನವಿಯನ್ನು ತಂಡಕ್ಕೆ ಸಲ್ಲಿಸಿದರು. ಪಾಲಿಕೆಯ ಆಯುಕ್ತ ಅಜಿತ್ ಕುಮಾರ್ ಹೆಗ್ಡೆ ಶಾನಾಡಿ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಮಂಗಳೂರಿನ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಬಳಿಕ ಅಧ್ಯಯನ ತಂಡವು ಮಹಾನಗರ ಪಾಲಿಕೆ ಕಚೇರಿಯಲ್ಲಿ ಅಧಿಕಾರಿಗಳ ಜತೆ ಚರ್ಚಿಸಿತು. ರಾತ್ರಿ ವೇಳೆ ಅಧ್ಯಯನ ತಂಡವು ಜಿಲ್ಲಾಧಿಕಾರಿಗಳ ಜತೆ ಮಾತುಕತೆ ನಡೆಸಲಿದೆ.
ಮಂದಾರದಲ್ಲಿ ಸಂಗ್ರಹವಾಗಿರುವ ತ್ಯಾಜ್ಯದ ಪ್ರಮಾಣದ ಲೆಕ್ಕಾಚಾರ, ಪರಿಹಾರ ಉಪಾಯಗಳ ಬಗ್ಗೆ ವರದಿ, ಮುಂದೆ ಇಂತಹ ಘಟನೆ ಆಗದಂತೆ ಎಚ್ಚರಿಕೆ ಹಾಗೂ ಸದ್ಯ ಪರಿಸರದ ಮೇಲೆ ಬೀಳುವ ಪರಿಣಾಮ ಹಾಗೂ ಪರಿಹಾರ ಇತ್ಯಾದಿಯಾಗಿ ಅಧ್ಯಯನ ತಂಡವು 15 ದಿನಗಳ ಒಳಗೆ ಸರಕಾರಕ್ಕೆ ಸಲ್ಲಿಸಲಿದೆ ಎಂದು ಪಾಲಿಕೆ ಆಯುಕ್ತರು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ