ವಿಟ್ಲ: ಆಕ್ಟಿವಾ- ಜೀಪ್ ಡಿಕ್ಕಿ; ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ಸಾವು
Team Udayavani, Aug 8, 2022, 4:19 PM IST
ವಿಟ್ಲ: ವಿಟ್ಲ ಕಾಸರಗೋಡು ಹೆದ್ದಾರಿಯ ಉಕ್ಕುಡ ಚೆಕ್ ಪೋಸ್ಟ್ ಬಳಿ ಆಕ್ಟಿವಾ ಮತ್ತು ಜೀಪ್ ನಡುವೆ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸವಾರ ದಿನೇಶ್ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ದಿನೇಶ್ ಅವರ ತಲೆಗೆ ಗಂಭೀರ ಗಾಯವಾಗಿತ್ತು. ಆರಂಭದಲ್ಲಿ ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದುಕೊಂಡು ಹೋಗಲಾಗಿತ್ತು.
ಅವರು ಓವರ್ ಟೇಕ್ ಮಾಡುವ ಭರದಲ್ಲಿ ಜೀಪ್ ಗೆ ಢಿಕ್ಕಿ ಹೊಡೆದಿತ್ತು.