ಪ್ರೇಮ ಪ್ರಕರಣ : 18 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ
Team Udayavani, Dec 15, 2022, 6:34 AM IST
ವಿಟ್ಲ: ಖಾಸಗಿ ಪ.ಪೂ. ಕಾಲೇಜಿನ ಹಿಂದೂ ವಿದ್ಯಾರ್ಥಿನಿ ಮುಸ್ಲಿಂ ವಿದ್ಯಾರ್ಥಿಯ ನಡುವಿನ ಪ್ರೇಮ ಪ್ರಕರಣ ವಿಚಾರದಲ್ಲಿ ಸಹಕರಿಸಿದ ಹಾಗೂ ವಿವಾದ ಮಾಡಲು ಹೋದ ವಿದ್ಯಾರ್ಥಿಗಳನ್ನು ಪೋಷಕರ ಸಮ್ಮುಖದಲ್ಲಿ ಆಡಳಿತ ಮಂಡಳಿ ಮತ್ತು ಉಪನ್ಯಾಸಕರು ಮಾತುಕತೆ ನಡೆಸಿ ಮುನ್ನೆಚ್ಚರಿಕೆ ದೃಷ್ಟಿಯಿಂದ ಸುಮಾರು 18 ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಮಾತ್ರ ಹಾಜರಾಗುವಂತೆ ಸೂಚಿಸಿ ಮನೆಗೆ ಕಳುಹಿಸಲಾಗಿದೆ.
ಕೆಲ ಸಮಯ ಹಿಂದೆ ಇದ್ದ ಪ್ರೇಮ ಪ್ರಕರಣವು ಕಾಲೇಜು ವಾರ್ಷಿಕೋತ್ಸವದ ವೇಳೆ ಮತ್ತೆ ಚರ್ಚಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಉಪನ್ಯಾಸಕರ ತಂಡ ವಿದ್ಯಾರ್ಥಿಗಳ ಮೊಬೈಲ್ ತಪಾಸಣೆಗೆ ನಡೆಸಿದ್ದಾರೆ. ಈ ಸಂದರ್ಭ ಹಿಂದೂ ಯುವತಿಯ ಕೈಯಲ್ಲಿ ಪ್ರೇಮ ಪತ್ರ ಪತ್ತೆಯಾಗಿತ್ತು. ಯುವತಿಯ ಪೊಷಕರಲ್ಲಿ ಮಾತುಕತೆ ನಡೆಸಿ ಮುನ್ನೆಚ್ಚರಿಕೆಯ ದೃಷ್ಟಿಯಿಂದ ಯುವತಿಯನ್ನು ಪರೀಕ್ಷೆಗೆ ಮಾತ್ರ ಆಗಮಿಸುವಂತೆ ಸೂಚನೆ ನೀಡಿದರು.
ಮುಸ್ಲಿಂ ಯುವಕ ತರಗತಿಗೆ ಹಾಜರಾಗುತ್ತಿದ್ದಂತೆ ಉಪನ್ಯಾಸಕರಿಗೆ ತಿಳಿಯದಂತೆ ಕೆಲವು ಹಿಂದೂ ಯುವಕರು ಗುಂಪು ಕಟ್ಟಿಕೊಂಡು ಹೋಗಿ ಪ್ರಶ್ನಿಸಿದ್ದಾರೆ. ಮುಸ್ಲಿಂ ಯುವಕ ಹಾಗೂ ಆತನಿಗೆ ಸಹಕಾರ ಮಾಡಿದ 6 ಮಂದಿಯನ್ನು ಹಾಗೂ ಪ್ರಶ್ನಿಸಲು ಹೋದ ಹಿಂದೂ ಯುವಕರನ್ನು ವಿಚಾರಣೆ ನಡೆಸಿ ಪರೀಕ್ಷೆಗೆ ಮಾತ್ರ ಹಾಜರಾಗುವಂತೆ ಸೂಚಿಸಿ ಮನೆಗೆ ಕಳುಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು