ಕೋರ್ಟ್ ನಲ್ಲಿ ತಪ್ಪು ಒಪ್ಪಿಕೊಂಡ ವ್ಯಕ್ತಿಗೆ ಅಂಗನವಾಡಿ ಶುಚಿಗೊಳಿಸುವ ಶಿಕ್ಷೆ
ಒಂದು ವರ್ಷ ವೇತನ ರಹಿತ ಸೇವೆ ಸಲ್ಲಿಸಲು ಆದೇಶ
Team Udayavani, Mar 8, 2023, 7:35 AM IST
ವಿಟ್ಲ: ಜಾಗದ ವಿಚಾರದಲ್ಲಿ ನೆರೆಮನೆಯ ವ್ಯಕ್ತಿಯೊಬ್ಬರಿಗೆ ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ಬಂಟ್ವಾಳ ತಾಲೂಕು ಕರೋಪಾಡಿ ಗ್ರಾಮದ ನಿವಾಸಿ ಐತಪ್ಪ ನಾಯ್ಕ ಹೈಕೋರ್ಟ್ನಲ್ಲಿ ತನ್ನ ತಪ್ಪನ್ನು ಒಪ್ಪಿಕೊಂಡ ಹಿನ್ನೆಲೆಯಲ್ಲಿ ಕೆಳಗಿನ ನ್ಯಾಯಾಲಯ ಅವರಿಗೆ ವಿಧಿಸಿದ್ದ ಶಿಕ್ಷೆಯನ್ನು ರದ್ದುಪಡಿಸಿದೆ. ಅದರ ಬದಲಾಗಿ ಒಂದು ವರ್ಷ ಕಾಲ ಸ್ಥಳೀಯ ಅಂಗನವಾಡಿಯಲ್ಲಿ ವೇತನ ಇಲ್ಲದೆ ಸೇವೆ ಸಲ್ಲಿಸಲು ಆದೇಶಿಸಿದೆ. ಅದರಂತೆ, ಕರೋಪಾಡಿ ಗ್ರಾಮದ ಅಂಗನವಾಡಿಯಲ್ಲಿ ವೃದ್ಧ ಐತಪ್ಪ ನಾಯ್ಕ ಈಗ ಶುಚಿತ್ವದ ಕೆಲಸ ಆರಂಭಿಸಿದ್ದಾರೆ.
ಈ ಮೊದಲು ಬಂಟ್ವಾಳದ ಕೋರ್ಟ್, ಆರೋಪಿ ಐತಪ್ಪ ನಾಯ್ಕರಿಗೆ ಮೂರು ದಿನಗಳ ಜೈಲು ಶಿಕ್ಷೆ ಮತ್ತು ಹತ್ತು ಸಾವಿರ ದಂಡ ವಿಧಿಸಿತ್ತು. ಆದರೆ ದೂರುದಾರ ವ್ಯಕ್ತಿ ಆರೋಪಿಗೆ ಶಿಕ್ಷೆಯ ಪ್ರಮಾಣ ಹೆಚ್ಚಿಸಬೇಕೆಂದು ಮಂಗಳೂರಿನ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ 2014ರಲ್ಲಿ ಆರೋಪಿ ಐತಪ್ಪ ನಾಯ್ಕನಿಗೆ ಎರಡು ವರ್ಷಗಳ ಶಿಕ್ಷೆ ವಿಧಿಸಿ ತೀರ್ಪು ಕೊಟ್ಟಿತ್ತು.
ಮಂಗಳೂರಿನ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಐತಪ್ಪ ನಾಯ್ಕ ಪರ ವಕೀಲರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಮಕ್ಕಳಿಲ್ಲದ ವೃದ್ಧ ಮತ್ತು ಮನೆಯಲ್ಲಿ ಪತ್ನಿ ಒಬ್ಬಂಟಿಯಾಗಿರುವುದರಿಂದ ವಯಸ್ಸನ್ನು ನೋಡಿ ಶಿಕ್ಷೆಗೆ ವಿನಾಯಿತಿ ನೀಡಬೇಕೆಂದು ವಕೀಲರು ಕೋರಿದ್ದರು. ಆರೋಪಿ ಐತಪ್ಪ ನಾಯ್ಕ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಲ್ಲದೆ, ಪಶ್ಚಾತ್ತಾಪಪಟ್ಟಿದ್ದರಿಂದ ನ್ಯಾಯಾಧೀಶರು ಕೆಳಗಿನ ಕೋರ್ಟಿನ ಶಿಕ್ಷೆಯನ್ನು ರದ್ದುಗೊಳಿಸಿದ್ದಾರೆ.
ಐತಪ್ಪ ನಾಯ್ಕ ಅವರಿಗೆ ಬಂಟ್ವಾಳದ ವಕೀಲರೊಬ್ಬರು ಸಹಾಯ ಹಸ್ತ ನೀಡಿದ್ದು, ಹೈಕೋರ್ಟಿನಲ್ಲಿ ವಾದಿಸಿದ್ದಾರೆ. ಇಳಿ ವಯಸ್ಸಿನಲ್ಲಿ ಜೈಲು ಸೇರುವ ಬದಲಾಗಿ ಮನೆ ಬಳಿಯಲ್ಲೇ ಅಂಗನವಾಡಿ ಸೇವೆ ಸಲ್ಲಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ