ವಿಟ್ಲ-ಕಬಕ ರಸ್ತೆ ಸ್ಥಿತಿ ಶೋಚನೀಯ : ರಸ್ತೆ ವಿಸ್ತರಣೆಯೂ ಆಗಲಿಲ್ಲ, ಮರುಡಾಮರು ಕಾಣಲೇ ಇಲ್ಲ


Team Udayavani, Aug 18, 2022, 3:35 PM IST

ವಿಟ್ಲ-ಕಬಕ ರಸ್ತೆ ಸ್ಥಿತಿ ಶೋಚನೀಯ : ರಸ್ತೆ ವಿಸ್ತರಣೆಯೂ ಆಗಲಿಲ್ಲ, ಮರುಡಾಮರು ಕಾಣಲೇ ಇಲ್ಲ

ವಿಟ್ಲ : ಕಬಕ-ಸುರತ್ಕಲ್‌ ರಾಜ್ಯ ಹೆದ್ದಾರಿಯು ಗ್ರಾಮೀಣ ಭಾಗವಾದ ಕಬಕದಿಂದ ವಿಟ್ಲದವರೆಗೆ ಶೋಚನೀಯ ಸ್ಥಿತಿ ತಲುಪಿದೆ. ಹತ್ತಾರು ವರ್ಷಗಳ ಬಳಿಕವೂ ಮರುಡಾಮರು ಕಾಣಲೇ ಇಲ್ಲ. ಈ 7 ಕಿ.ಮೀ. ದೂರದ ರಸ್ತೆಯಲ್ಲಿ ಸಂಚರಿಸಲು ವಾಹನ ಚಾಲಕರು, ಮಾಲಕರು ಸಂಕಟಪಡುತ್ತಾರೆ.

ಈ ಹಿಂದೆ ಈ ಹೆದ್ದಾರಿಯ ಪೊಳಲಿ ಕೈಕಂಬದಿಂದ ಕಬಕ ವರೆಗೆ ರಸ್ತೆಯ ಅಗಲ 5.50 ಮೀಟರ್‌ ಇತ್ತು. ಅದನ್ನು 7 ಮೀಟರ್‌ ಅಗಲ ಮಾಡಲು ಇಲಾಖೆ ಕ್ರಮ ಕೈಗೊಂಡಿತ್ತು. ಇದಕ್ಕಾಗಿ 18 ಕೋಟಿ ರೂ. ಅನು ದಾನ ಮಂಜೂರಾಗಿತ್ತು. ಗುತ್ತಿಗೆದಾರರು ಕಾಮಗಾರಿಯನ್ನು ಅಲ್ಲಲ್ಲಿ ಆರಂಭಿಸಿ, ವಿಟ್ಲ ಕಬಕ ರಸ್ತೆಯನ್ನು ವಿಸ್ತರಿಸುವ ಕಾಮಗಾರಿ ಕೈಗೆತ್ತಿಕೊಂಡರು. 1.50 ಮೀಟರ್‌ ಅಗಲ, ಒಂದು ಅಡಿ ಹೊಂಡ ತೋಡ ಲಾಯಿತು. ಆ ಹೊಂಡದಲ್ಲಿ ನೀರು ತುಂಬಿ, ಅಪಾಯಕಾರಿ ಸನ್ನಿವೇಶ ಉಂಟಾಯಿತು. ಅರ್ಧಂಬರ್ಧ ಕಾಮಗಾರಿ ನಡೆಯುತ್ತಿದ್ದಂತೆ ಗುತ್ತಿಗೆದಾರರು ನಾಪತ್ತೆಯಾದರು. ಕಾಮಗಾರಿ ಸ್ಥಗಿತ ಗೊಂಡಿತು. ರಸ್ತೆ ಹದಗೆಡುತ್ತಲೇ ಹೋಯಿತು.

ಗುತ್ತಿಗೆ ರದ್ದು
ರಸ್ತೆ ಫಲಾನುಭವಿಗಳಿಂದ ವ್ಯಾಪಕ ವಿರೋಧ ವ್ಯಕ್ತವಾಯಿತು. ಪ್ರಬಲ ಹೋರಾಟ, ಆಕ್ಷೇಪಗಳಿಗೆ ತುತ್ತಾದ ಇಲಾಖೆಯು ಗುತ್ತಿಗೆಯನ್ನು ರದ್ದುಪಡಿಸಿತು. ಹೊಸ ಟೆಂಡರ್‌ ಪ್ರಕ್ರಿಯೆಯೂ ನಡೆಯಿತು. ಗುತ್ತಿಗೆದಾರರು ಮುಂದೆ ಬರಲಿಲ್ಲ.

ರಸ್ತೆ ಫಲಾನುಭವಿಗಳು ಅಸಂಖ್ಯ
ಈ ರಸ್ತೆಯಲ್ಲಿ ನಿತ್ಯವೂ 30ಕ್ಕೂ ಅಧಿಕ ಬಸ್‌ ಸಂಚಾರ, ಟೂರಿಸ್ಟ್‌ ಕಾರು, ರಿಕ್ಷಾ, ಖಾಸಗಿ ವಾಹನಗಳ ಸಂಖ್ಯೆ ಅಪಾರ. ಅಳಿಕೆ, ಕನ್ಯಾನ, ಕರೋಪಾಡಿ, ಕೇಪು, ಪೆರುವಾಯಿ, ಮಾಣಿಲ, ವಿಟ್ಲಮುಟ್ನೂರು, ಕುಳ, ಇಡಿRದು, ವಿಟ್ಲ ಗ್ರಾಮಗಳ ಜನತೆ ಪುತ್ತೂರಿಗೆ ಈ ರಸ್ತೆಯಲ್ಲೇ ಸಾಗಬೇಕು. ಕೇರಳದಿಂದ ವಿಟ್ಲ ಪುತ್ತೂರು ಸಾಗುವುದಕ್ಕೇ ಇದೇ ಮುಖ್ಯ ರಸ್ತೆ. ಕೇರಳ ಕೆಎಸ್‌ಆರ್‌ಟಿಸಿ ಬಸ್ಸುಗಳ ಸಂಚಾರವೂ ಇದೇ ಮಾರ್ಗದಲ್ಲಿ.

ಸಾವು ನೋವು
ದ್ವಿಚಕ್ರ ವಾಹನ ಹೊಂಡಕ್ಕಿಳಿದಾಗ ಹಿಂಬದಿ ಕುಳಿತಿದ್ದ ಮಹಿಳೆಯೋರ್ವರು ಆಯ ತಪ್ಪಿ ರಸ್ತೆಗೆ ಬಿದ್ದು ಮೃತಪಟ್ಟಿದ್ದರೆ ಇನ್ನೋರ್ವ ಪುರುಷರೂ ಇದೇ ರೀತಿ ಸಾವನ್ನಪ್ಪಿದ್ದಾರೆ. ಈ ರಸ್ತೆಯಲ್ಲಿ ಸಂಚಾರ ಮಾಡಿದಾಗ ಸಂಭವಿಸಿದ ಅನೇಕ ಅಪಘಾತಗಳಲ್ಲಿ ನೂರಾರು ಮಂದಿ ಗಾಯಗೊಂಡಿದ್ದಾರೆ.

ಮರುಡಾಮರಿಗೆ ಆಗ್ರಹ
ಈ ಪ್ರಮುಖ ರಸ್ತೆಯ ಅವಗಣನೆಯನ್ನು ಖಂಡಿಸುತ್ತೇವೆ. ಇನ್ನು ಸಹಿಸುವುದಕ್ಕೆ ಸಾಧ್ಯವಿಲ್ಲ. ಸಂಬಂಧಪಟ್ಟವರು ಕೂಡಲೆ ಕ್ರಮ ಕೈಗೊಳ್ಳಬೇಕು ಎಂದು ನಾಗರಿಕರು ಆಗ್ರಹಿಸುತ್ತಿದ್ದಾರೆ.

ಅಧಿಕಾರಿಗಳಿಂದ ಪರಿಶೀಲನೆ
ಎಸ್‌ಎಚ್‌ಡಿಪಿ ಅಧಿಕಾರಿಗಳು ಮತ್ತು ಲೋಕೋಪಯೋಗಿ ಇಲಾ ಖಾಧಿಕಾರಿಗಳು ಈ ರಸ್ತೆಯನ್ನು ಪರಿಶೀಲಿಸಿದ್ದಾರೆ. ಎಸ್‌ಎಚ್‌ಡಿಪಿ ಇಲಾಖೆ ಇದಕ್ಕೆ ಅನುದಾನ ಬಿಡುಗಡೆ ಮಾಡಬೇಕು. ಲೋಕೋ ಪಯೋಗಿ ಇಲಾಖೆ ಕಾಮಗಾರಿ ನಡೆಸಬೇಕು. 2019ರ ನ. 1ರಂದು ಕಾಮಗಾರಿ ಅರ್ಧಕ್ಕೆ ನಿಲ್ಲಿಸಿದ ಅದೇ ಗುತ್ತಿಗೆದಾರರಿಗೆ ಮತ್ತೆ ಜವಾಬ್ದಾರಿ ನೀಡಿದ್ದರು. ಅವರು ಕಾಮಗಾರಿ ಆರಂಭಿಸಲೇ ಇಲ್ಲ.

2022ರಲ್ಲಿ ಬದಲಾಗಲಿಲ್ಲ
2022ರ ಜುಲೈ ಕೊನೆಯ ವರೆಗೂ ರಸ್ತೆಯ ಸ್ಥಿತಿ ಶೋಚನೀಯವಾಗಿಯೇ ಇದೆ. ಎರಡು ತಾಲೂಕುಗಳನ್ನು ಸಂಪರ್ಕಿಸುವ ಪ್ರಮುಖ ರಸ್ತೆಗೆ ಡಾಮರು ಕಾಮಗಾರಿ ಎಂದೋ ಆಗಬೇಕಿತ್ತು ಆದರೆ ಆಗಲಿಲ್ಲ.

ಈಗ ರಸ್ತೆ ಹೇಗಿದೆ ?
ಕಂಬಳಬೆಟ್ಟು ಎಂಬಲ್ಲಿ ರಸ್ತೆಯಲ್ಲೇ ನೀರು ಸಾಗಿ, ರಸ್ತೆಯ ಅಗಲ ನಾಲ್ಕು ಮೀಟರಿಗೆ ಕುಸಿದಿದೆ. ವಿಟ್ಲ, ಕಲ್ಲಕಟ್ಟ, ಚಂದಳಿಕೆ, ಬದನಾಜೆ, ಕಂಬಳಬೆಟ್ಟು, ಉರಿ ಮಜಲು, ಅಳಕೆಮಜಲು, ಕಬಕವರೆಗೆ ರಸ್ತೆ ಯುದ್ದಕ್ಕೂ ಹೊಂಡಗಳೇ ಇವೆ. ಇದೀಗ ತೇಪೆ ಹಚ್ಚುವ ಕಾರ್ಯ ನಡೆದಿದೆ.

13 ಕೋಟಿ ರೂ. ಅನುದಾನ
5.50 ಮೀಟರ್‌ ರಸ್ತೆಯನ್ನು 7 ಮೀ.ಗೆ ವಿಸ್ತರಿಸುವ ಕಾಮಗಾರಿಯ ಗುತ್ತಿಗೆದಾರ ಕಾಮಗಾರಿ ಸ್ಥಗಿತಗೊಳಿಸಿದ್ದರಿಂದ ತೊಂದರೆಯಾಗಿದೆ. ಆದರೆ ಇದೀಗ ಹೊಸ ಗುತ್ತಿಗೆದಾರರು ಈ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದಾರೆ. ಮಾರ್ನಬೈಲಿನಿಂದ ಕಬಕ ವರೆಗೆ ಒಟ್ಟು 13 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಮಳೆ ನಿಂತ ಕೂಡಲೇ ಕಾಮಗಾರಿ ಆರಂಭಿಸುತ್ತೇವೆ.
– ಪ್ರೀತಮ್‌, ಎಂಜಿನಿಯರ್‌, ಲೋಕೋಪಯೋಗಿ ಇಲಾಖೆ, ಬಂಟ್ವಾಳ‌.

ಕಾಮಗಾರಿ ನಡೆಯಲಿ
ಈ ರಸ್ತೆ ಸರ್ವಋತು ಉತ್ತಮ ರಸ್ತೆ ಯಾಗಬೇಕೆಂದು ಸಂಬಂಧಪಟ್ಟ ಇಲಾಖೆಗೆ ಮನವಿ ಮಾಡುತ್ತೇನೆ. ನೆನೆಗುದಿಗೆ ಬಿದ್ದ ಈ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಸಿಕೊಡಬೇಕಾಗಿರುವುದು ಇಲಾಖೆಯ, ಅಧಿಕಾರಿಗಳ, ಜನಪ್ರತಿನಿಧಿಗಳ ಕರ್ತವ್ಯವೂ ಆಗಿದೆ.
– ಕೃಷ್ಣರಾಜ್‌, ಅಳಕೆಮಜಲು

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.