ಬಂಟ್ವಾಳ: ಯುವಕನನ್ನು ಕೊಲೆಗೈದು ಪಾತಾಳಕ್ಕೆ ಎಸೆದ ಆರೋಪಿ; ಮೃತದೇಹಕ್ಕಾಗಿ ಕಾರ್ಯಾಚರಣೆ
Team Udayavani, Nov 8, 2022, 7:29 PM IST
ಬಂಟ್ವಾಳ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾಣೆಯಾದ ಯುವಕನೋರ್ವನನ್ನು ಅದೇ ಗ್ರಾಮದ ನಿವಾಸಿ ಅನೈತಿಕ ಚಟುವಟಿಕೆಗಾಗಿ ಮುಳೂರುಪದವು ಗುಡ್ಡಕ್ಕೆ ಕರೆದುಕೊಂಡು ಬಂದು ಸುಟ್ಟು ಹಾಕಿ ಹೊಂಡಕ್ಕೆ ಎಸೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಪೊಲೀಸರು ಯುವಕನ ಮೃತದೇಹವನ್ನು ಹೊರ ತೆಗೆಯಲು ಮಂಗಳವಾರ ಕಾರ್ಯಾಚರಣೆ ನಡೆಸಿದ್ದು, ಆದರೆ ಕತ್ತಲಾದ ಕಾರಣ ಕಾರ್ಯಾಚರಣೆ ನಾಳೆಗೆ ಮುಂದೂಡಿದ್ದಾರೆ.
ಬೋಳಂತೂರು ಗ್ರಾಮ ನಿವಾಸಿ ಅಬ್ದುಲ್ ಸಮದ್ ಕೊಲೆಯಾದ ಯುವಕ. ಆತನನ್ನು ಅದೇ ಗ್ರಾಮದ ನಿವಾಸಿ ಅಬ್ದುಲ್ ರಹಿಮಾನ್ ಎಂಬಾತ ಕೊಲೆ ಮಾಡಿ ಗುಡ್ಡದಲ್ಲಿರುವ ಪಾತಾಳಕ್ಕೆ ಎಸೆದಿದ್ದಾನೆ.
ಸಮದ್ ಕಾಣೆಯಾಗಿರುವ ಕುರಿತು ಮನೆಯವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರಂತೆ ಪೊಲೀಸರು ತನಿಖೆ ನಡೆಸಿದಾಗ ಆತನಿಗೆ ಆರೋಪಿ ರಹಿಮಾನ್ ಜತೆ ಸಂಪರ್ಕ ಇರುವ ಸುಳಿವು ಪತ್ತೆಯಾದಾಗ ಪ್ರಕರಣ ಇಡೀ ಚಿತ್ರಣ ಹೊರ ಬೀಳುತ್ತದೆ. ಬಂಟ್ವಾಳ ಗ್ರಾಮಾಂತರ ಹಾಗೂ ವಿಟ್ಲ ಪೊಲೀಸರು ಪ್ರಕರಣ ತನಿಖೆ ಹಾಗೂ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು