ವಿಟ್ಲ ಮೀನು ಮಾರುಕಟ್ಟೆ ಕಾಮಗಾರಿ ಸ್ಥಗಿತ 


Team Udayavani, Oct 24, 2018, 10:34 AM IST

24-october-4.gif

ವಿಟ್ಲ : ಇಲ್ಲಿನ ಬೊಬ್ಬೆಕೇರಿಯಲ್ಲಿ ನಿರ್ಮಾಣವಾಗಬೇಕಿದ್ದ 30 ಲಕ್ಷ ರೂ. ವೆಚ್ಚದ ಸುಸಜ್ಜಿತ ಮೀನು ಮಾರುಕಟ್ಟೆ ಕಟ್ಟಡ ಕಾಮಗಾರಿ ಸ್ಥಗಿತಗೊಂಡು ಯೋಜನೆ ಭರವಸೆ ಕಳೆದುಕೊಂಡಿದೆ. ಪರಿಣಾಮವಾಗಿ ಅವ್ಯವಸ್ಥೆ, ಮೂಗು ಮುಚ್ಚಿಹೋಗುವ ಪರಿಸ್ಥಿತಿ ಉಂಟಾಗಿದೆ.

ಯೋಜನೆ
ಇದು ಕರಾವಳಿ ಅಭಿ ವೃದ್ಧಿ ಪ್ರಾಧಿಕಾರದ ಯೋಜನೆ. 30 ಲಕ್ಷ ರೂ. ಗಳ ಯೋಜನೆಗೆ ಶೇ.5ರಷ್ಟು ಅನುದಾನವನ್ನು ಸ್ಥಳೀಯ ಶಾಸ ಕರು ಒದಗಿಸಿದ್ದಾರೆ. ಅಂದರೆ ಶೇ. 95 ರಷ್ಟು ಅನುದಾನವನ್ನು ಪ್ರಾಧಿಕಾರವೇ ನೀಡಿದೆ. 2016ರ ಎಪ್ರಿಲ್‌ ತಿಂಗಳಲ್ಲಿ ಈ ಯೋಜನೆಗೆ ಕರಾವಳಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ನಿವೇದಿತ್‌ ಆಳ್ವ ಮತ್ತು ಅಂದಿನ ಶಾಸಕಿ ಶಕುಂತಳಾ ಟಿ. ಶೆಟ್ಟಿ ಉಪಸ್ಥಿತಿಯಲ್ಲಿ ಶಿಲಾನ್ಯಾಸ ನೆರವೇರಿಸಲಾಗಿತ್ತು. ಈಗ ಇವರಿಬ್ಬರೂ ಮಾಜಿ. ಪ್ರಾಧಿಕಾರದಲ್ಲಿ ನಿವೇದಿತ್‌ ಆಳ್ವ ಅವರ ಬಳಿಕ ಶಾರದಾ ಮೋಹನ ಶೆಟ್ಟಿ ಅಧ್ಯಕ್ಷೆಯಾಗಿದ್ದರೂ ಈಗ ಅವರೂ ಹುದ್ದೆಯಲ್ಲಿಲ್ಲ. ಆದುದರಿಂದ ಈ ಕಾಮಗಾರಿಯ ಪ್ರಗತಿಯ ಹಿಂದೆ ಓಡಾಡ ಬೇಕಾದವರು ಅಲ್ಲಿನ ಅಧಿಕಾರಿಗಳು.

28.50 ಲಕ್ಷ ರೂ. ಬಿಡುಗಡೆ
ಗುತ್ತಿಗೆದಾರರ ಬೇಜವಾಬ್ದಾರಿಯಿಂದ ಕಾಮಗಾರಿ ಮುಂದುವರಿಯುತ್ತಿಲ್ಲ. ಇದಕ್ಕೆ ಕಾರಣ ಏನು ಎಂಬ ಸತ್ಯ ಇನ್ನೂ ಹೊರಬಿದ್ದಿಲ್ಲ. ಶೇ. 95ರಷ್ಟು ಅನುದಾನ ನೀಡಬೇಕಾದ ಕರಾವಳಿ ಪ್ರಾಧಿಕಾರವು ಗುತ್ತಿಗೆದಾರರಿಗೆ 28.50 ಲಕ್ಷ ರೂ. ಅನುದಾನವನ್ನೂ ಬಿಡುಗಡೆಗೊಳಿಸಿದೆ. ಆದುದರಿಂದ ಪ್ರಾಧಿಕಾರವೇ ಗುತ್ತಿಗೆದಾರರ ಹಿಂದೆ ಬೀಳಬೇಕಾಗಿದೆ. ಆದರೆ ಕೆಆರ್‌ಐಡಿಎಲ್‌ ಈ ಗುತ್ತಿಗೆಯ ಅನುದಾನ ಪಡೆದುಕೊಂಡು ಎರಡೂವರೆ ವರ್ಷಗಳ ಬಳಿಕವೂ ಕಾಮಗಾರಿಯನ್ನು ಪೂರ್ತಿಗೊಳಿಸುತ್ತಿಲ್ಲ.

ಸ್ಥಗಿತಗೊಂಡ ಕಾಮಗಾರಿ
ಪ್ರಸ್ತುತ ಕಾಮಗಾರಿ ಸ್ಥಗಿತಗೊಂಡಿದೆ. 1ನೇ ಮಹಡಿಯ ಸ್ಲ್ಯಾಬ್‌ ಕಾಮಗಾರಿ ನಡೆಸಲಾಗಿದೆ. ಬಳಿಕ ಕಟ್ಟಡ ಮೇಲೇರಿಲ್ಲ. ಅತ್ತ ಕಾಮಗಾರಿಯೂ ನಡೆಯದೆ, ಇತ್ತ ಮೀನು ಮಾರುಕಟ್ಟೆಗೆ ಸ್ಥಳಾವಕಾಶವೂ ಇಲ್ಲದೆ ಶೋಚನೀಯ ಸ್ಥಿತಿ ತಲುಪಿದೆ. ಗುತ್ತಿಗೆದಾರರು ಕಾಮಗಾರಿ ಮುಂದುವರಿಸುತ್ತೇವೆ ಎನ್ನುತ್ತಾರೆ ಹೊರತು ಕಾಮಗಾರಿ ಮುಂದುವರಿಸುತ್ತಿಲ್ಲವೆಂದು ಪ್ರಾಧಿಕಾರದ ಅಧಿಕಾರಿಗಳು, ವಿಟ್ಲ ಪ.ಪಂ. ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೆ ಹೇಗಿತ್ತು ? 
ಬೊಬ್ಬೆಕೇರಿ ಕಟ್ಟೆಯ ಸಮೀಪದಲ್ಲಿ ಕಟ್ಟೆಯಿಂದ ವಿಟ್ಲ ಪಂಚಲಿಂಗೇಶ್ವರ ದೇಗುಲಕ್ಕೆ ತೆರಳುವ ಮಾರ್ಗದಲ್ಲಿ ಮೀನು ಮಾರುಕಟ್ಟೆಯಿತ್ತು. ಆದರೆ ಕಟ್ಟಡ ದುಸ್ಥಿತಿಯಲ್ಲಿತ್ತು. ಸುತ್ತಲೂ ಸ್ವತ್ಛವಿರಲಿಲ್ಲ. ಗಬ್ಬುನಾತ ಬೀರುತ್ತಿದ್ದುದರಿಂದ ಈ ರಸ್ತೆಯಲ್ಲಿ ಸಂಚರಿಸುವುದೇ ಕಷ್ಟವಾಗಿತ್ತು. ಸುಸಜ್ಜಿತ ಮೀನು ಮಾರುಕಟ್ಟೆ ನಿರ್ಮಾಣವಾಗಬೇಕೆಂದು ಹಲವಾರು ವರ್ಷಗಳ ಬೇಡಿಕೆಯಿತ್ತು. ಅದು ಕೊನೆಗೂ ಈಡೇರಿತು ಎಂಬ ಸಂತಸದಲ್ಲಿದ್ದಾಗಲೇ ಆಮೆವೇಗದಲ್ಲಿ ನಡೆಯುತ್ತಿರುವ ಕಾಮಗಾರಿಯಿಂದ ಮೀನು ಮಾರಾಟಗಾರರು, ಗ್ರಾಹಕರು ಹಾಗೂ ಸ್ಥಳೀಯರು ಬೇಸತ್ತಿದ್ದಾರೆ.

ಪ್ರಸ್ತುತ ಸ್ಥಿತಿ
ಕಟ್ಟಡ ನಿರ್ಮಾಣವಾಗುತ್ತಿರುವುದರಿಂದ ಜಾಗವಿಲ್ಲ. ರಸ್ತೆಬದಿಯಲ್ಲೇ ಮೀನು ವಾಹನಗಳು ನಿಲ್ಲುತ್ತವೆ. ಗ್ರಾಹಕರು ವಾಹನಗಳ ಬಳಿಯೇ ಖರೀದಿಸಬೇಕಾಗುತ್ತದೆ. ಈ ಸಮಯದಲ್ಲಿ ಪಾದಚಾರಿಗಳಿಗೆ ಅಡ್ಡಾಡಲು ಜಾಗವಿಲ್ಲದೆ, ಸ್ವಚ್ಛತೆಯೂ ಇಲ್ಲದೆ ಮೂಗುಮುಚ್ಚಿ ಸಂಚರಿಸುವ ಸ್ಥಿತಿಯಿದೆ.

 ಸ್ಪಂದಿಸುವವರಿಲ್ಲ
ಕೆಆರ್‌ಐಡಿಎಲ್‌ ಅಧಿಕಾರಿಗಳಿಗೆ ಕರೆ ಮಾಡಿ ಕಾಮಗಾರಿಯನ್ನು ಮುಗಿಸಬೇಕೆಂದು ಆಗಾಗ ಹೇಳುತ್ತಿದ್ದೇವೆ. ಜಿಲ್ಲಾಧಿಕಾರಿಗೆ ಮತ್ತು ಸಂಬಂಧಪಟ್ಟವರಿಗೆ ಮಾಹಿತಿ ನೀಡಿದ್ದೇವೆ. ಆದರೆ ಅಧ್ಯಕ್ಷರಿಲ್ಲದೇ ನಮ್ಮ ಮಾತನ್ನು ಕೇಳುವವರೇ ಇಲ್ಲವಾಗಿದೆ. ನಮ್ಮ ಮಾತಿಗೆ ಸ್ಪಂದಿಸುವವರಿಲ್ಲ.
– ಪ್ರದೀಪ್‌ ಡಿ’ಸೋಜಾ
ಕಾರ್ಯದರ್ಶಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ

ಉದಯಶಂಕರ್‌ ನೀರ್ಪಾಜೆ 

ಟಾಪ್ ನ್ಯೂಸ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-wwwqewq

RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.