ವಿಟ್ಲದಲ್ಲಿ ಅಕ್ರಮ ದನ ಸಾಗಾಟ ಪತ್ತೆ: ಇಬ್ಬರ ಸೆರೆ
Team Udayavani, Aug 5, 2018, 2:40 PM IST
ವಿಟ್ಲ: ಅಕ್ರಮವಾಗಿ ಕೇರಳಕ್ಕೆ ದನ ಸಾಗಾಟ ಮಾಡುತಿದ್ದ ಇಬ್ಬರನ್ನು ವಿಟ್ಲ ಪೊಲೀಸರು ಬಂಧಿಸಿದ ಘಟನೆ ಭಾನುವಾರ ಮದ್ಯಾಹ್ನ ವಿಟ್ಲ ಸಮೀಪದ ಪುಣಚ ಗ್ರಾಮದ ಚಂದಳಿಕೆ- ಮಾಡತ್ತಡ್ಕ ರಸ್ತೆಯ ಕಂಬಳಮೂಲೆಯಲ್ಲಿ ನಡೆದಿದೆ.
ಬಂಧಿತರನ್ನು ಉಪ್ಪಳ ನಿವಾಸಿ ಅಬೂಬಕ್ಕರ್ ಮತ್ತು ರಾಜ್ ಕುಮಾರ್ ಎಂದು ಗುರುತಿಸಲಾಗಿದೆ. ಆರೋಪಿಗಳು ದನಗಳನ್ನು ಕೇರಳ ರಿಜಿಸ್ಟೃಶನ್ ಹೊಂದಿದ ಕೆಂಪು ಬಣ್ಣದ ಏಸ್ ಟೆಂಪೋವಿನಲ್ಲಿ ಸಾಗಿಸುತ್ತಿದ್ದರು. ಸಂದರ್ಭ ವಿಟ್ಲ ಎಸ್ಐ ನಾಗರಾಜ್ ಅವರ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ದನ ಅಕ್ರಮ ಸಾಗಟ ಜಾಲವನ್ನು ಬಂಧಿಸಿದ್ದಾರೆ.
ಎರಡು ದನಗಳನ್ನು ರಕ್ಷಿಸಲಾಗಿದೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ