ವಿವೇಕಾನಂದರು ಭಾರತದ ಆತ್ಮ


Team Udayavani, Feb 13, 2017, 3:45 AM IST

12-LOC-13.jpg

ಮಂಗಳೂರು: ವಿವೇಕಾನಂದರು ಭಾರತದ ಆತ್ಮ ಇದ್ದಂತೆ. ದೇಶವನ್ನು ಸಾಂಸ್ಕೃತಿಕ, ಬೌದ್ಧಿಕ, ಆಧ್ಯಾತ್ಮಿಕವಾಗಿ ಮೇಲಕ್ಕೆತ್ತಿದ ಸಂತ ಸ್ವಾಮೀಜಿಯವರು ಎಂದು ಗುಜರಾತ್‌ನ ರಾಜಕೋಟ್‌ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಸರ್ವಸ್ಥಾನಂದಜೀ ಮಹಾರಾಜ್‌ ನುಡಿದರು.

ಯುವ ಬ್ರಿಗೇಡ್‌ ಮತ್ತು ಸೋದರಿ ನಿವೇದಿತಾ ಪ್ರತಿಷ್ಠಾನದ ಆಶ್ರಯಧಿದಲ್ಲಿ ನಗರದ ಕೇಂದ್ರ ಮೈದಾನದ ಗುಡ್ವಿನ್‌ ಮಂಟಪದಲ್ಲಿ ಎರಡು ದಿನಗಳ ಕಾಲ ನಡೆದ ಸ್ವಾಮಿ ವಿವೇಕಾನಂದ ಅಕ್ಕ ನಿವೇದಿತಾ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾಧಿರಂಭದಲ್ಲಿ ಅವರು ರವಿಧಿವಾರ ಮಾತನಾಡಿದರು. ವಿವೇಕಾನಂದರನ್ನು ಅರ್ಥೈಸಿಧಿಕೊಳ್ಳದೇ ಭಾರತವನ್ನು ಅರ್ಥೈಸಿಕೊಳ್ಳಲು ಸಾಧ್ಯವಿಲ್ಲ. ದೇಶದ ಶ್ರೇಷ್ಠ ಪರಂಪರೆ, ಆಧ್ಯಾತ್ಮಿಕ ಸಂಸ್ಕೃತಿಯನ್ನು ಜಗತ್ತಿಗೇ ಬೋಧಿಸಿದ ಮಹಾನ್‌ ಪ್ರೇರಕ ಶಕ್ತಿ ಅವರು. ಯುವಕರ ಮೇಲೆ ಅವರು ಇಟ್ಟ ನಂಬಿಕೆ ಅಪಾರ. ಸ್ವಾಮೀಜಿಯವರ ಕನಸಿನಂತೆ ಸದೃಢ ಭಾರತ ಕಟ್ಟುವಲ್ಲಿ ಯುವ ಸಮೂಹ ಶ್ರಮಿಸಬೇಕು. ಸಾಮಾಜಿಕ, ಆರ್ಥಿಕ, ರಾಜಕೀಯವಾಗಿ ಭಾರತವನ್ನು ಸಶಕ್ತವನ್ನಾಗಿಸಲು ಯುವಕರು ಮುಂದಾಗಬೇಕು ಎಂದು ಅವರು ಆಶಯ ವ್ಯಕ್ತಪಡಿಸಿದರು.

ಸಾಹಿತ್ಯ ಸಾರ್ವಕಾಲಿಕ
ಸಮ್ಮೇಳನಾಧ್ಯಕ್ಷತೆ ವಹಿಸಿದ್ದ ತಿರುವಣ್ಣಾಮಲೈ ಶ್ರೀ ಶಾರದಾ ಆಶ್ರಮದ ಮಾತಾಜಿ ಯತೀಶ್ವರಿ ಕೃಷ್ಣಪ್ರಿಯ ಅಂಬಾಜಿ ಅವರು ಮಾತನಾಡಿ, ಸ್ವಾಮೀಜಿ ಮತ್ತು ನಿವೇದಿತಾರ ಸಂದೇಶ, ಸಾಹಿತ್ಯಗಳು ಸಾರ್ವಕಾಲಿಕ. ಅವರ ಸಾಹಿತ್ಯಗಳಂತೆ ಬದುಕಿದರೆ ಜೀವನ ಸಾರ್ಥಕ್ಯ ಪಡೆಯುತ್ತದೆ. ಇಡೀ ವಿಶ್ವಕ್ಕೇ ಭಾರತೀಯ ಸಂಸ್ಕೃತಿಯ ಸಿರಿವಂತಿಕೆಯನ್ನು ಬೋಧಿಸಿದ ಅವರು ನಮ್ಮೆಲ್ಲರ ಆದರ್ಶವಾಗಬೇಕು ಎಂದು ಅಭಿಪ್ರಾಯಪಟ್ಟರು.

ವಿವೇಕಾನಂದ ಕೊಲಾಜ್‌ ವಿಶ್ವ ದಾಖಲೆಗೆ ಪ್ರವೇಶ
ಮೂಲ್ಕಿಯ ಪಂಜಿನಡ್ಕ ಕೆಪಿಎಸ್‌ಕೆ ಪ್ರೌಢಶಾಲೆಯ ಕಲಾ ಶಿಕ್ಷಕ ವೆಂಕಿ ಪಲಿಮಾರ್‌ ಮತ್ತು ವಿದ್ಯಾರ್ಥಿಗಳು ನಿರ್ಮಿಸಿದ 21×16 ಅಡಿ ಎತ್ತರದ ವಿವೇಕಾನಂದರ ಕೊಲಾಜ್‌ ಚಿತ್ರ ಮತ್ತು 10 ನಿಮಿಷದಲ್ಲಿ 108 ಸೂರ್ಯ ನಮಸ್ಕಾರ ಮಾಡಿದ ಯುವ ಬ್ರಿಗೇಡ್‌ ಕಾರ್ಯಕರ್ತ ನಿರಂಜನ್‌ ಶೆಟ್ಟಿ ಅವರ ಸಾಧನೆ ವಿಶ್ವ ದಾಖಲೆಗೆ ಪ್ರವೇಶ ಪಡೆದಿದೆ ಎಂದು ಚಕ್ರವರ್ತಿ ಸೂಲಿಬೆಲೆ ಅವರು ಈ ವೇಳೆ ಪ್ರಕಟಿಸಿದರು.

ವೇದಿಕೆಯಲ್ಲಿ ಕೆಲವೇ ನಿಮಿಷಗಳಲ್ಲಿ ವಿವೇಕಾನಂದರ ಚಿತ್ರ ರಚಿಸಿದ ಮತ್ತು ಸಮ್ಮೇಳನ ಪ್ರಚಾರಾರ್ಥವಾಗಿ ಪಣಂಬೂರು ಕಡಲ ಕಿನಾರೆಯಲ್ಲಿ ವಿವೇಕ, ನಿವೇದಿತಾರ ಚಿತ್ರವನ್ನು ಮರಳಿನಲ್ಲಿ ರಚಿಸಿದ ಕಲಾವಿದ ಮಹೇಂದ್ರ ಅವರನ್ನು ಈ ವೇಳೆ ಗೌರವಿಸಲಾಯಿತು.

ವಿವೇಕಾನಂದ, ನಿವೇದಿತಾರ ಸಾಹಿತ್ಯ ಪುಸ್ತಕಗಳನ್ನು ಪುತ್ತೂರು ವಿವೇಕಾನಂದ ತಾಂತ್ರಿಕ ಕಾಲೇಜಿನಲ್ಲಿರುವ ವಿವೇಕ, ನಿವೇದಿತಾರ ಸಾಹಿತ್ಯ ರ್ಯಾಕ್‌ಗೆ ನೀಡುವ ಸಲುವಾಗಿ ಸಾಂಕೇತಿಕವಾಗಿ ಯುವ ಬ್ರಿಗೇಡ್‌ ಮಂಗಳೂರು ವಿಭಾಗ ಸಂಚಾಲಕ ಮಂಜಯ್ಯ ನೇರಂಕಿ ಅವರಿಗೆ ಹಸ್ತಾಂತರಿಸಲಾಯಿತು. ವಿವೇಕಾನಂದರ ಲೋಗೋ ಹೊಂದಿರುವ ಟೀಶರ್ಟ್‌ಗಳನ್ನು ಈ ವೇಳೆ ಬಿಡುಗಡೆಗೊಳಿಸಲಾಯಿತು.

ಸಮ್ಮೇಳನದ ಸಂಚಾಲಕ ಗಿರಿಧರ ಶೆಟ್ಟಿ ಉಪಸ್ಥಿತರಿದ್ದರು. ಯುವ ಬ್ರಿಗೇಡ್‌ ರಾಜ್ಯ ಸಂಚಾಲಕ ನಿತ್ಯಾನಂದ ವಿವೇಕವಂಶಿ ಸ್ವಾಗತಿಸಿಧಿದರು. ಸೋದರಿ ನಿವೇದಿತಾ ಪ್ರತಿಧಿಷ್ಠಾನದ ಸ್ವಾತಿ ಮಂಗಳೂರು ನಿರೂಪಿಸಿದರು.

ಯುವ ಬ್ರಿಗೇಡ್‌ ನಿರ್ಣಯಗಳು
ಸೋದರಿ ನಿವೇದಿತಾ ಅವರ 150ನೇ ಜನ್ಮ ವರ್ಷಾಚರಣೆ ಪ್ರಯುಕ್ತ ರಾಜ್ಯಾದ್ಯಂತ 150 ಸಮ್ಮೇಳನಗಳ ಆಯೋಜನೆ ಮತ್ತು ಇದರ ಸಮಾರೋಪದ ಅಂಗವಾಗಿ ಸೆ. 11, 12ರಂದು ಬೆಳಗಾವಿಯಲ್ಲಿ  ಸಾಹಿತ್ಯ ಸಮ್ಮೇಳನ ಏರ್ಪಡಿಸುವುದು, ಫೆ. 14ರಂದು ಪೌರ ಕಾರ್ಮಿಕರ ಕಾಲನಿಗಳಿಗೆ ಅಥವಾ ವೃದ್ಧಾಶ್ರಮಗಳಿಗೆ ಭೇಟಿ ನೀಡುವ ನಿರ್ಣಯಗಳನ್ನು ಯುವ ಬ್ರಿಗೇಡ್‌ ಕೈಗೊಂಡಿದೆ.

ನಿರ್ಣಯ ಪ್ರಕಟಿಸಿದ ಯುವಬ್ರಿಗೇಡ್‌ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ಮಾತನಾಡಿ, ನಿವೇದಿತಾ 150ನೇ ವರ್ಷಾಚರಣೆ ಪ್ರಯುಕ್ತ ವಿವೇಕಾನಂದರ ಚಿಂತನೆಗಳನ್ನು ಮತ್ತು ನಿವೇದಿತಾ ಅವರ ಕಲ್ಪನೆಗಳನ್ನು ಸಮಾಜಕ್ಕೆ ಮುಟ್ಟಿಸುವ ಕಾರ್ಯಕ್ಕಾಗಿ ಸಮ್ಮೇಳನಗಳು ಮಹತ್ವ ಪಡೆಯಲಿವೆ ಎಂದರು.

ಟಾಪ್ ನ್ಯೂಸ್

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ

Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.