ಮಾತಿನ ಮತ,ಸಂದರ್ಶನ :ಕೆ. ಜಯರಾಮ ಶೆಟ್ಟಿ ಮಾಜಿ ಶಾಸಕ, ಉಳ್ಳಾಲ ಕ್ಷೇತ್ರ


Team Udayavani, Mar 2, 2018, 2:15 PM IST

2-March-13.jpg

ಕಳೆದ ಐದು ವರ್ಷಗಳಲ್ಲಿ ಕ್ಷೇತ್ರದ ನಿರೀಕ್ಷೆ ಈಡೇರಿದೆಯೇ ?
ಭಾರೀ ಅಂತರದಲ್ಲಿ ಮತ ಪಡೆದು ಶಾಸಕರಾಗಿ, ರಾಜ್ಯದ ಸಚಿವರಾಗಿ ಅಧಿಕಾರ ಸ್ವೀಕರಿಸಿದಾಗ ಜನರಲ್ಲಿ ನಿರೀಕ್ಷೆ ಇತ್ತು ಆದರೆ ಈಡೇರಿಸುವಲ್ಲಿ ವಿಫಲರಾಗಿದ್ದಾರೆ. 1997ರಲ್ಲಿ ನಾನು ಶಾಸಕನಾಗಿದ್ದಾಗ ಕಡಲ್ಕೊರೆತಕ್ಕೆ ಶಾಶ್ವತ ತಡೆಗೋಡೆಗೆ ಪಟ್ಟ ಶ್ರಮದಿಂದ ಅಂದಿನ ನೀರಾವರಿ ಸಚಿವ ಜಯಪ್ರಕಾಶ ಹೆಗ್ಡೆ 500 ಕೋಟಿ ರೂ. ಪ್ರಸ್ತಾವನೆಯನ್ನು ಕೇಂದ್ರಕ್ಕೆ ಸಲ್ಲಿಸಿದ್ದರು. ಕಳೆದ 25 ವರ್ಷಗಳ ಬಳಿಕ ಕಾಮಗಾರಿ ನಡೆದರೂ ಪರಿಣಾಮಕಾರಿ ಪರಿಹಾರ ಸಿಕ್ಕಿಲ್ಲ. ಉಳ್ಳಾಲದಲ್ಲಿದ್ದ ಸಮಸ್ಯೆ ಸೋಮೇಶ್ವರ ಉಚ್ಚಿಲದವರೆಗೆ ಹಬ್ಬಿದೆ. ರೈತರ ಉಪ್ಪು ನೀರಿನ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ. ಅಸಂಘಟಿತ ಕಾರ್ಮಿಕರ ಭರವಸೆಯನ್ನು ಈಡೇರಿಸಿಲ್ಲ.

ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಏನೆನ್ನುವಿರಿ ?
ಕಾಂಕ್ರೀಟ್‌ ರಸ್ತೆ, ಕಟ್ಟಡ ನಿರ್ಮಾಣವಷ್ಟೇ ಅಭಿವೃದ್ಧಿಯಲ್ಲ. ಕ್ಷೇತ್ರದಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿತ್ತು. ಅದನ್ನು ಸಾಧಿಸುವಲ್ಲಿ ವಿಫಲವಾಗಿದ್ದಾರೆ. ನಾನು ಶಾಸಕನಾಗಿದ್ದಾಗ ತುಂಬೆಯಿಂದ ಕುಡಿಯುವ ನೀರು ತರಿಸುವ ಯೋಜನೆ ರೂಪಿಸಿದ್ದೆ, ಬಳಿಕ ಬಂದ ಶಾಸಕರು ಈ ಕಾರ್ಯದಲ್ಲಿ ಪ್ರಗತಿ ಸಾಧಿಸಿಲ್ಲ. ಹೆಚ್ಚಿನ ಯೋಜನೆಗಳೂ ಭರವಸೆಯಾಗಿಯೇ ಉಳಿದಿವೆ; ಕಾರ್ಯಗತವಾಗಿಲ್ಲ.

ಸಾಮರಸ್ಯಕ್ಕೆ ಯಾವ ರೀತಿಯ ಕೊಡುಗೆ ನೀಡಬಹುದು?
ಕ್ಷೇತ್ರದಲ್ಲಿ ಕೋಮು ಸಾಮರಸ್ಯಕ್ಕೆ ಹೆಚ್ಚಿನ ಮಹತ್ವ ಇದೆ. ಯು.ಟಿ. ಖಾದರ್‌ ಮತ್ತು ಅವರ ತಂದೆ ಯು.ಟಿ. ಫರೀದ್‌ ಅವರು ಎಲ್ಲ ಸಮುದಾಯಗಳ ಜನರೊಂದಿಗೆ ಹೆಚ್ಚಾಗಿ ಬೆರೆಯುತ್ತಿದ್ದರು. ಆದರೆ ಖಾದರ್‌ ಅವಧಿಯಲ್ಲಿ ಕೋಮು ಸಾಮರಸ್ಯಕ್ಕೆ ಹೆಚ್ಚಿನ ಮಹತ್ವ ನೀಡಿಲ್ಲ. ಅವರಿಗೆ ಅದು ಬೇಕಾಗಿಲ್ಲ. ಸಾಮರಸ್ಯದ ಸಂಕೇತವಾಗಿ ಅಬ್ಬಕ್ಕ ಉತ್ಸವವನ್ನು ನನ್ನ ಅವಧಿಯಲ್ಲಿ ಆರಂಭಿಸಿದ್ದೆ. ಇತ್ತೀಚಿನ ದಿನಗಳಲ್ಲಿ ಅಬ್ಬಕ್ಕ ಉತ್ಸವ ಕಾಂಗ್ರೆಸ್‌ ಉತ್ಸವವಾಗಿ ಮಾರ್ಪಾಡಾಗುತ್ತಿದೆ.

ಜನಪ್ರತಿನಿಧಿಯಾದವರು ಹೇಗೆ ಇದ್ದರೆ ಉತ್ತಮ ?
ಜನಪ್ರತಿನಿಧಿ ಜನರ ಸಂಕಷ್ಟಕ್ಕೆ ಸ್ಪಂದಿಸಬೇಕು. ಜನಸಾಮಾನ್ಯರ ನಡುವೆ ಹೋದರೆ ಅವರ ಸಮಸ್ಯೆಗಳನ್ನು ಅರಿತುಕೊಳ್ಳಬಹುದು.

ಈ ಬಾರಿಯ ಚುನಾವಣೆ ಬಗ್ಗೆ ನಿಮ್ಮ ಅಭಿಪ್ರಾಯ ?
ಮಂಗಳೂರು ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿಯಿಂದ ಉತ್ತಮ ಅಭ್ಯರ್ಥಿ ಇರುತ್ತಾರೆ. ಹಿಂದೂ, ಮುಸ್ಲಿಂ, ಕ್ರೈಸ್ತರ ಸಹಿತ ಎಲ್ಲ ಧರ್ಮಗಳ ಮತದಾರರರು ಬಿಜೆಪಿಯೊಂದಿಗೆ ಇದ್ದಾರೆ.

ನೀವು ಸ್ಪರ್ಧಾ ಆಕಾಂಕ್ಷಿಯೇ ?
ಯಾವುದೇ ನಾಯಕರನ್ನು ಸಂಪರ್ಕಿಸಿಲ್ಲ. ಸೀಟು ಕೊಟ್ಟರೆ ಸ್ಪರ್ಧೆಗೆ ಸಿದ್ಧ. ಕ್ಷೇತ್ರದ ಜನರೊಂದಿಗೆ ಉತ್ತಮ ಸಂಪರ್ಕ ಇಟ್ಟಕೊಂಡಿದ್ದೇನೆ.

„ವಸಂತ ಎನ್‌. ಕೊಣಾಜೆ

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.