ಮಾತಿನ ಮತ, ಸಂದರ್ಶನ: ಕೆ. ಕುಶಲ ಮಾಜಿ ಶಾಸಕರು, ಸುಳ್ಯ 


Team Udayavani, Mar 1, 2018, 2:08 PM IST

1-Mar-12.jpg

1985, 1994ರ ಅವಧಿಯ ಅಭಿವೃದ್ಧಿಗಳು ಏನು?
ನನ್ನ ಎರಡು ಅವಧಿಗಳಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು ನಡೆದಿವೆ. ಅರಂತೋಡು ಸೇತುವೆ ಸಹಿತ, ಪ್ರಮುಖ ಸಂಪರ್ಕ ರಸ್ತೆಗಳ ಅಭಿವೃದ್ಧಿ ಆಗಿದೆ. 110 ಕೆ.ವಿ. ಸಬ್‌ಸ್ಟೇಶನ್‌ ಗೆ ಮಂಜೂರಾತಿ, ತಾಲೂಕು ಕ್ರೀಡಾಂಗಣಕ್ಕೆ ಮಂಜೂರಾತಿ, ಅಂಬೇಡ್ಕರ್‌ ಭವನಕ್ಕೆ ಮಂಜೂರಾತಿ ಇವೆಲ್ಲವೂ ನನ್ನ ಅವಧಿಯಲ್ಲೇ ಆದ ಕೆಲಸಗಳು.

ನೀವು ಮಾಜಿ ಶಾಸಕನಾದ ಅನಂತರದ 25 ವರ್ಷಗಳಲ್ಲಿ ಕ್ಷೇತ್ರ ಅಭಿವೃದ್ಧಿ ಕಂಡಿದೆಯೇ?
ಇಲ್ಲ. ಉದಾಹರಣೆ ಅಂದರೆ, ನನ್ನ ಅವಧಿಯಲ್ಲಿ ಮಂಜೂರುಗೊಂಡ 110 ಕೆ.ವಿ. ವಿದ್ಯುತ್‌ ಸಬ್‌ಸ್ಟೇಶನ್‌, ತಾಲೂಕು ಮೈದಾನ, ಅಂಬೇಡ್ಕರ್‌ ಭವನ ಇತ್ಯಾದಿ ಯೋಜನೆಗಳನ್ನು ಈಗಿನ ಶಾಸಕರಿಗೆ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಹೇಳಿಕೊಳ್ಳುವಂತೆ ಯಾವುದೇ ಯೋಜನೆಗಳನ್ನು ಅವರು ನೀಡಿಲ್ಲ.

ತಾಲೂಕಿಗೆ ಆಗಬೇಕಾದ ಪ್ರಮುಖ ಕೆಲಸಗಳು ಏನು?
ಮಂಜೂರುಗೊಂಡಿರುವ ಯೋಜನೆಗಳನ್ನು ಪೂರ್ಣಗೊಳಿಸುವುದು. ರಬ್ಬರ್‌ ಫ್ಯಾಕ್ಟರಿ, ಅಡಿಕೆ ಬೆಳೆಗಾರರ ಹಿತರಕ್ಷಣೆಗೆ ಅಡಿಕೆ ಮಂಡಳಿ, ಸರಕಾರಿ ತಾಂತ್ರಿಕ ಕಾಲೇಜು ಸ್ಥಾಪನೆ ಆಗಬೇಕು.

25 ವರ್ಷಗಳ ಹಿಂದಿನ ರಾಜಕೀಯ ವ್ಯವಸ್ಥೆಗೂ ಈಗಿನ ವ್ಯವಸ್ಥೆಗೂ ಬದಲಾವಣೆ ಕಂಡುಬರುತ್ತಿದೆಯೇ?
ಹೌದು. ಈಗ ಮೌಲ್ಯಯುತ ರಾಜಕಾರಣಿಗಳ ಕೊರತೆ ಇದೆ. ವಿಧಾನಸಭೆಯಲ್ಲಿ ಚರ್ಚಿಸುವ ಧಾಟಿ ಇತ್ಯಾದಿಗಳಲ್ಲಿ ಸಾಕಷ್ಟು ಬದಲಾವಣೆ ಕಂಡುಬರುತ್ತಿದೆ. ಈಗಲೂ 1980-90ರ ಕಾಲದ ಜನಪ್ರತಿನಿಧಿಗಳ ವರ್ತನೆ, ಕಾಳಜಿ, ಪ್ರಾಮಾಣಿಕತೆಯ ಬಗ್ಗೆ ಮಾತನಾಡುವವರು ಇದ್ದಾರೆ. ಅಂತಹ ಜನಪ್ರತಿನಿಧಿಗಳ ಅಗತ್ಯ ಈಗಲೂ ಇದೆ ಅನ್ನುವುದು ಜನಸಾಮಾನ್ಯರ ಅಭಿಮತ.

ನೀವು ಶಾಸಕರಾಗಿದ್ದಾಗ ಸೌಲಭ್ಯಗಳು ಹೇಗಿದ್ದವು?
ಆಗ ಕೈ ಬರಹದಲ್ಲಿ ಮನವಿ ಬರೆದು ಸರಕಾರಕ್ಕೆ ಕಳುಹಿಸಬೇಕಿತ್ತು. ಈಗ ಎಲ್ಲವೂ ಬದಲಾಗಿದೆ. ಕಂಪ್ಯೂಟರ್‌ ನಿಂದ ಹಿಡಿದು ಪೂರ್ಣ ಪ್ರಮಾಣದ ಸೌಲಭ್ಯ ಶಾಸಕರಿಗೆ ಇದೆ. ನಮಗೆ 2,500 ರೂ. ಗೌರವ ಧನ ಇತ್ತು. 1,800 ರೂ. ಪಿಂಚಣಿ ಇತ್ತು. ಈಗ ಎಲ್ಲವೂ ದುಪ್ಪಟ್ಟಾಗಿವೆ. ವ್ಯತ್ಯಾಸ ಅಂದರೆ ಆಗ ಸೌಲಭ್ಯಗಳ ಕೊರತೆ ಇದ್ದರೂ ಜನಪ್ರತಿನಿಧಿಗಳು ಜನರ ಸೇವಕರಾಗಿ ಪ್ರಾಮಾಣಿಕತೆಯಿಂದ ದುಡಿಯುತ್ತಿದ್ದರು. ಈಗ ಎಲ್ಲ ಸೌಲಭ್ಯಗಳು ಸಿಕ್ಕಿದರೂ ಜನಪ್ರತಿನಿಧಿಗಳಲ್ಲಿ ಪ್ರಾಮಾಣಿಕತೆ ಉಳಿದುಕೊಂಡಿಲ್ಲ.

„ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.