‘ಮತವನ್ನು ನಿಸ್ವಾರ್ಥ ಅಭ್ಯರ್ಥಿಗೆ ನೀಡಿ’


Team Udayavani, May 4, 2018, 1:08 PM IST

4-May-10.jpg

ನರಿಂಗಾನ: ಪ್ರಜಾಪ್ರಭುತ್ವದ ಅಡಿಗಲ್ಲಾಗಿರುವ ಚುನಾವಣ ಪ್ರಕ್ರಿಯೆಯಲ್ಲಿ ಪ್ರಭುಗಳಾಗಿರುವ ಮತದಾರರು ಸಕ್ರಿಯವಾಗಿ ಭಾಗವಹಿಸಿ ತಮ್ಮ ಅಮೂಲ್ಯವಾದ ಮತವನ್ನು ಸತ್ಯತೆ, ನ್ಯಾಯಪರತೆ, ಮಾನವೀಯತೆ ಹಾಗೂ ಸೇವಾ ಭಾವನೆಯುಳ್ಳ ನಿಸ್ವಾರ್ಥ ಅಭ್ಯರ್ಥಿಗೆ ನೀಡಿ ಉತ್ತಮ ಪ್ರತಿನಿಧಿಯನ್ನು ಆರಿಸಿ ಎಂದು ಮಹಾತ್ಮ ಗಾಂಧಿ ನರೇಗಾ ಮಾಜಿ ಓಂಬುಡ್ಸ್‌ಮೆನ್‌ ಶೀನ ಶೆಟ್ಟಿ ಅಭಿಪ್ರಾಯಪಟ್ಟರು.

ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮ ಪಂಚಾಯತ್‌ ವ್ಯಾಪ್ತಿಯ ವಿದ್ಯಾನಗರ ಅಂಗನವಾಡಿ ಕೇಂದ್ರದಲ್ಲಿ ಮತದಾನೋತ್ಸವ, ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಮತದಾರರ ಮಾಹಿತಿ ಪತ್ರಗಳನ್ನು ವಿತರಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮತದಾರರು ಯಾವುದೇ ಆಸೆ, ಆಮಿಷಗಳಿಗೆ ಬಲಿಯಾಗದೇ ಸುಳ್ಳು ಭರವಸೆಗಳಿಗೆ ಮರುಳಾಗದೆ ಅತ್ಯುತ್ತಮ, ಜನಪರ ಆಡಳಿತ ವ್ಯವಸ್ಥೆಯನ್ನು ರೂಪಿಸಿಕೊಳ್ಳುವುದಕ್ಕೆ ಸಿದ್ಧರಾಗಬೇಕು ಎಂದರು. ತಾಲೂಕು ಪಂಚಾಯತ್‌ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಮಾತನಾಡಿ, ಮತದಾರರಿಗೆ ಮತದಾನ ಕೇಂದ್ರದಲ್ಲಿ ಒದಗಿಸಲಾಗುವ ವಿಶೇಷ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿ ಗ್ರಾಮದ ಎಲ್ಲ ಮತದಾರರು ತಪ್ಪದೇ ಮತ ಚಲಾಯಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಜನ ಶಿಕ್ಷಣ ಟ್ರಸ್ಟ್‌ ನಿರ್ದೇಶಕ ಕೃಷ್ಣ ಮೂಲ್ಯ, ಸಂಯೋಜಕಿಯರಾದ ಚಂಚಲಾ, ರೂಪಾಕಲಾ, ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳಾದ ನಳಿನಿ, ರಜನಿ, ಪತ್ರಕರ್ತ ಗುರುವಪ್ಪ ಬಾಳೆಪುಣಿ ಮೊದಲಾದವರು ಮಾಹಿತಿ ವಿನಿಮಯ ಸಂವಾದ ಚರ್ಚೆಯಲ್ಲಿ ಭಾಗವಹಿಸಿದರು. ಮತದಾರರು ತಪ್ಪದೇ ಮತದಾನ ಮಾಡವುದಾಗಿ ಸಾಮೂಹಿಕವಾಗಿ ಪ್ರತಿಜ್ಞೆ ಸ್ವೀಕರಿಸಿದರು. ಅಂಗನವಾಡಿ ಕಾರ್ಯಕರ್ತೆ ಹರಿಣಾಕ್ಷಿ, ಸಹಾಯಕಿ ಸುಮಲತಾ ಕಾರ್ಯಕ್ರಮದ ಯಶಸ್ವಿ ಸಂಯೋಜನೆಗೆ ಸಹಕರಿಸಿದ್ದರು.

ಜನ ಶಿಕ್ಷಣ ಟ್ರಸ್ಟ್‌, ಸುಗ್ರಾಮ ಜಾಗೃತಿ ವೇದಿಕೆ, ಆಪ್ನಾದೇಶ್‌ ಬಳಗ, ಚಿತ್ತಾರ ಬಳಗ, ಗ್ರಾಮ ವಿಕಾಸ ಕೇಂದ್ರ, ಅಂಗನವಾಡಿ ಕೇಂದ್ರದ ಸಹಭಾಗಿತ್ವದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.