ಮತದಾರರ ಪಟ್ಟಿ ಪರಿಶೀಲನೆ : ಕೊನೆಯ ಸಾಲಿನಲ್ಲಿ ದಕ್ಷಿಣ ಕನ್ನಡ; ಮುಂಚೂಣಿಯಲ್ಲಿ ಉಡುಪಿ

ಮಂಗಳೂರು ಮನಪಾ ವ್ಯಾಪ್ತಿಯಲ್ಲಿ ನಿರಾಸಕ್ತಿ

Team Udayavani, Oct 25, 2019, 7:40 AM IST

Voter-List-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮಂಗಳೂರು: ಚುನಾವಣಾ ಆಯೋಗ ಹಮ್ಮಿಕೊಂಡಿರುವ ಮತದಾರರ ಪಟ್ಟಿ ಸಮಗ್ರ ಪರಿಶೀಲನೆ ಪ್ರಾರಂಭಗೊಂಡು ತಿಂಗಳಾಗುತ್ತಿದ್ದರೂ ಸುಶಿಕ್ಷಿತರ ಜಿಲ್ಲೆಯೆಂದು ಕರೆಸಿಕೊಂಡಿರುವ ದಕ್ಷಿಣ ಕನ್ನಡದಲ್ಲಿ ನಿರೀಕ್ಷಿತ ಸ್ಪಂದನೆ ಲಭಿಸಿಲ್ಲ.

ರಾಜ್ಯದಲ್ಲಿ ಇದುವರೆಗೆ ಶೇ. 53ರಷ್ಟು ಮತದಾರರು ಪರಿಶೀಲನೆ/ತಿದ್ದುಪಡಿ ಮಾಡಿಕೊಂಡಿದ್ದರೂ ದ.ಕ. ಜಿಲ್ಲೆಯಲ್ಲಿ ಮಾತ್ರ ಪ್ರಗತಿ ನಿರಾಸಾದಾಯಕವಾಗಿದ್ದು, 26ನೇ ಸ್ಥಾನದಲ್ಲಿದೆ. ನೆರೆಯ ಉಡುಪಿ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ರಾಜ್ಯದಲ್ಲಿ 3ನೇ ಸ್ಥಾನದಲ್ಲಿದೆ.

ಉಡುಪಿಯಲ್ಲಿ 10,06,684 ಮತದಾರರ ಪೈಕಿ 7,23,533 ಮಂದಿ (ಶೇ.72) ಮತ್ತು ದ.ಕ.ದ 17,22,608 ಮತದಾರರ ಪೈಕಿ 8,10,080 ಮಂದಿ (ಶೇ. 47) ಆನ್‌ಲೈನ್‌ನಲ್ಲಿ ಮತ್ತು ಖುದ್ದಾಗಿ ವಿವರ ಪರಿಶೀಲಿಸಿದ್ದಾರೆ. ಮಂಡ್ಯ ಜಿಲ್ಲೆಯು ಮೊದಲ ಸ್ಥಾನದಲ್ಲಿದ್ದರೆ ಚಿತ್ರದುರ್ಗ 2ನೇ ಸ್ಥಾನದಲ್ಲಿದೆ. ಬೆಳಗಾವಿ ಕೊನೆಯ ಸ್ಥಾನದಲ್ಲಿದೆ (ಶೇ.30)

ಸ್ವಯಂ ಪರಿಶೀಲನೆಗೆ ಅವಕಾಶ
ಮತದಾರರ ಪಟ್ಟಿ ಪರಿಷ್ಕರಣೆಗೆ ಪ್ರತಿ ವರ್ಷ ಅವಕಾಶವಿರುತ್ತದೆ. ಆದರೆ ಈಗ ವಿಶೇಷ ರೀತಿ ಮತ್ತು ಸಮಗ್ರ ವಾಗಿ ನಡೆಯುತ್ತಿದೆ. ಬಿಎಲ್‌ಒಗಳು ಮಾತ್ರವಲ್ಲದೆ ಮತದಾರರು ಸ್ವಯಂ ಪರಿಶೀಲನೆ ನಡೆಸಲು ಅವಕಾಶ ಒದಗಿಸಲಾಗಿದೆ. ಮತದಾರರು ಮೊಬೈಲ್‌ನಲ್ಲಿ voter helpline ಆ್ಯಪ್‌ ಮೂಲಕ ಪರಿಶೀಲಿಸಬಹುದು.

ಸೇವಾಸಿಂಧು ಮತ್ತಿತರ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ, ಮತಗಟ್ಟೆ ಅಧಿಕಾರಿಯ ಮೂಲಕ, ತಾಲೂಕು ಕಚೇರಿ, ಎಸಿ ಕಚೇರಿಗಳಲ್ಲಿ ಪರಿಶೀ ಲಿಸಬಹುದು. ಮತದಾರರ ಸಹಾಯವಾಣಿ 1950ಕ್ಕೆ ಕರೆ ಮಾಡಿಯೂ ವಿಚಾರಿಸಬಹುದು. ವೆಬ್‌ ಪೋರ್ಟಲ್‌ www.nvsp.in ನಲ್ಲಿಯೂ ಪರಿಶೀಲಿಸಬಹುದು.

ಆಧಾರ್‌ ಲಿಂಕ್‌ ಪ್ರಕ್ರಿಯೆ ಇದಲ್ಲ
ಇದು ಮತದಾರರ ಗುರುತುಚೀಟಿ ಯನ್ನು ಆಧಾರ್‌ಗೆ ಲಿಂಕ್‌ ಮಾಡುವ ಪ್ರಕ್ರಿಯೆ ಅಲ್ಲ. ಪಟ್ಟಿ ಪರಿಶೀಲನೆ/ ತಿದ್ದುಪಡಿ ಅಷ್ಟೆ. ಆಧಾರ್‌ ಇದ್ದರೆ ಅದರಲ್ಲಿ ಎಲ್ಲ ಮಾಹಿತಿ ದೊರೆಯುವುದರಿಂದ ಬಿಎಲ್‌ಒಗಳು ಹೆಚ್ಚಾಗಿ ಆಧಾರ್‌ಕಾರ್ಡ್‌ನ್ನು ಕೇಳುತ್ತಾರೆ. ಮತದಾರರ ಪಟ್ಟಿ ಅಥವಾ ಗುರುತಿನ ಚೀಟಿ ಪರಿಷ್ಕರಣೆ ಮಾಡಿಕೊಳ್ಳದಿದ್ದರೂ ಮತದಾನಕ್ಕೆ ಅವಕಾಶವಿರುತ್ತದೆ. ಆದರೆ ಲೋಪಗಳಿದ್ದರೆ ಗೊಂದಲವುಂಟಾಗಿ ಸಮಸ್ಯೆಯಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತದಾರರ ಪಟ್ಟಿ ಪರಿಷ್ಕರಣೆ ಪ್ರತೀ ವರ್ಷ ನಡೆಯುತ್ತಿತ್ತು. ಇದರಲ್ಲಿ ಕೆಲವು ಲೋಪಗಳನ್ನು ಮಾತ್ರ ಸರಿಪಡಿಸಲಾಗುತ್ತಿತ್ತು. ಆದರೆ ಈ ಬಾರಿ ವಿಶೇಷವಾಗಿ ಸಮಗ್ರ ಪರಿಶೀಲನೆ ನಡೆಸಿ ಲೋಪದೋಷಗಳು ಇಲ್ಲದಂತೆ ಮಾಡುವ ಉದ್ದೇಶ ಇದೆ. ಇದರಿಂದಾಗಿ ಮತದಾರರ ಬಗ್ಗೆ ವ್ಯವಸ್ಥಿತ ಡಾಟಾ ಬೇಸ್‌ ಸೃಷ್ಟಿಸಿದಂತಾಗುತ್ತದೆ.
– ಸಿಂಧೂ ಬಿ. ರೂಪೇಶ್‌, ಜಿಲ್ಲಾಧಿಕಾರಿ, ದ.ಕ.

ಮಂಗಳೂರು ನಗರ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಬಿಎಲ್‌ಒಗಳು ಮನೆ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ ಮತದಾರರು ಸೂಕ್ತ ದಾಖಲೆ ನೀಡುತ್ತಿಲ್ಲ. ಕೆಲವು ಮನೆ/ಫ್ಲ್ಯಾಟ್‌ಗಳಲ್ಲಿ ಮತದಾರರು ದಿನವಿಡೀ ಲಭ್ಯವಾಗದಿರುವುದು ಕೂಡ ಸಮಸ್ಯೆಯಾಗಿದೆ.
– ಗಾಯತ್ರಿ, ಉಪ ಆಯುಕ್ತರು, ಕಂದಾಯ ವಿಭಾಗ, ಮಂಗಳೂರು ಮಹಾನಗರ ಪಾಲಿಕೆ

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.