ಮತದಾನ ಜವಾಬ್ದಾರಿ, ಸಾಮಾಜಿಕ ಹೊಣೆಗಾರಿಕೆ


Team Udayavani, May 6, 2018, 1:14 PM IST

6-May-11.jpg

ಪುತ್ತೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಅತ್ಯಂತ ಪ್ರಮುಖ ಪ್ರಕ್ರಿಯೆ. ಈ ಬಾರಿ ಎಲ್ಲರನ್ನೂ ಒಳಪಡಿಸಿದ ಚುನಾವಣೆಗಾಗಿ ಚುನಾವಣಾ ಆಯೋಗವು ಅನೇಕ ಪೂರಕ ಕ್ರಮಗಳನ್ನು ಕೈಗೊಂಡಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ ಕಾರ್ಯ ನಿರ್ವಹಣಾಧಿಕಾರಿ ಡಾ| ಎಂ.ಆರ್‌. ರವಿ ಹೇಳಿದರು. ದ.ಕ. ಜಿಲ್ಲಾ ಸ್ವೀಪ್‌ ಸಮಿತಿಯ ವತಿಯಿಂದ ಹಿರಿಯ ನಾಗರಿಕರು ಹಾಗೂ ಅಂಗವಿಕಲರಿಗಾಗಿ ಶನಿವಾರ ಪುತ್ತೂರು ತಾ.ಪಂ. ಸಭಾಂಗಣದಲ್ಲಿ ಆಯೋಜಿಸಿದ ಮತದಾನ ಜಾಗೃತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಉತ್ತಮ ಸಮಾಜವನ್ನು ಕಟ್ಟಲು ಒಂದು ದಿನದಲ್ಲಿ ಅಥವಾ ಒಬ್ಬ ವ್ಯಕ್ತಿಯಿಂದ ಸಾಧ್ಯವಿಲ್ಲ. ಮತದಾನದ ಅಸ್ತ್ರವನ್ನು ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಬಳಸಿದಾಗ ಮಾತ್ರ ಉತ್ತಮ ಆಡಳಿತ ವ್ಯವಸ್ಥೆಯನ್ನು ನಿರೀಕ್ಷೆ ಮಾಡಲು ಸಾಧ್ಯ. ಮತದಾನ ವೆಂಬುದು ಹಕ್ಕು, ಕರ್ತವ್ಯಕ್ಕಿಂತಲೂ ನಮ್ಮ ಜವಾಬ್ದಾರಿ ಹಾಗೂ ಸಾಮಾಜಿಕ ಹೊಣೆ ಗಾರಿಕೆಯಾಗಿದೆ. ಜವಾಬ್ದಾರಿ ಇಲ್ಲದವರು ಮಾತ್ರ ನುಣುಚಿ ಕೊಳ್ಳವುದು. ಸದೃಢ ದೇಶ ಕಟ್ಟುವ ಅವಕಾಶದಿಂದ ನಾವೇ ವಂಚಿತರಾಗಬಾರದು ಎಂದು ಹೇಳಿದರು.

ಶೇ. 90 ಮತದಾನಕ್ಕಾಗಿ
ರಾಜ್ಯದಲ್ಲೇ ದ.ಕ. ಜಿಲ್ಲೆ ಅತ್ಯಂತ ಸುಶಿಕ್ಷಿತರನ್ನು ಹೊಂದಿರುವ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದರೂ 2013ರ ವಿಧಾನಸಭಾ ಚುನಾವಣೆಯಲ್ಲಿ ಶೇ. 75ರಷ್ಟು ಮಾತ್ರ ಮತದಾನವಾಗಿದೆ. ಅಂದರೆ ಶೇ. 25ರಷ್ಟು ಮಂದಿ ಮತ ಚಲಾವಣೆ ನಡೆಸಿಲ್ಲ. ಮಂಗಳೂರು ದಕ್ಷಿಣದಲ್ಲಿ ಶೇ. 65ರಷ್ಟು ಮಾತ್ರ ಮತದಾನವಾಗಿದೆ. ಜಿಲ್ಲೆಯಲ್ಲಿ ಶೇ. 90 ಮತದಾನವಾಗಿಸುವ ನಿಟ್ಟಿನಲ್ಲಿ ಸ್ವೀಪ್‌ ಸಮಿತಿ ಎಲ್ಲ ಪ್ರಯತ್ನ, ಜಾಗೃತಿಯನ್ನು ನಡೆಸುತ್ತಿದೆ. ಇದಕ್ಕೆ ಮತದಾರರ ಬೆಂಬಲ ಅಗತ್ಯ ಎಂದು ಹೇಳಿದರು.

ವಿಶೇಷ ವ್ಯವಸ್ಥೆ
ಈ ಬಾರಿ ಚುನಾವಣೆಯಲ್ಲಿ ಹಿರಿಯ ನಾಗರಿಕರು, ಅಂಗವಿಕಲರಿಗೆ ವಿಶೇಷ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದೆ. ಅವರನ್ನು ಪ್ರೀತಿ, ಗೌರವದಿಂದ ನಡೆದುಕೊಳ್ಳಲು ಸಿಬಂದಿ ಕಾರ್ಯ ನಿರ್ವಹಿಸಲಿದ್ದಾರೆ. ಕನ್ನಡಕದ ಆವಶ್ಯಕತೆ ಇರುವ ಹಿರಿಯರಿಗೆ ಭೂತಕನ್ನಡಿ ವಿತರಿಸಲಾಗುತ್ತದೆ. 135 ಗ್ರಾ.ಪಂ. ವ್ಯಾಪ್ತಿಯಲ್ಲಿ ಮತದಾನ ಕೇಂದ್ರಕ್ಕೆ ಬರಲು ಸಮಸ್ಯೆಯಾಗುವವರಿಗೆ ಮನೆಗೆ ಹೋಗಿ ಕರೆತರಲು ವಾಹನದ ವ್ಯವಸ್ಥೆ ಮಾಡಲಾಗುತ್ತದೆ. 310 ಮತಗಟ್ಟೆಗಳಲ್ಲಿ ಗಾಲಿ ಕುರ್ಚಿಯ ವ್ಯವಸ್ಥೆ ಮಾಡಲಾಗುತ್ತದೆ ಎಂದು ಹೇಳಿದರು.

ಹಿರಿಯ ನಾಗರಿಕರ ಹಿತರಕ್ಷಣ ಸಮಿತಿಯ ಅಧ್ಯಕ್ಷರು ಮಾತನಾಡಿ, ಸಂಘದಲ್ಲಿ 600 ಸದಸ್ಯರಿದ್ದಾರೆ. ಜಾಗೃತಿ ಕಾರ್ಯಕ್ರಮದ ಕುರಿತಂತೆ ಮೊದಲೇ ಮಾಹಿತಿ ನೀಡಿದ್ದರೆ ಹೆಚ್ಚಿನ ಸಂಖ್ಯೆಯ ಹಿರಿಯರನ್ನು ಸೇರಿಸಬಹುದಿತ್ತು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅಂಗವಿಕರು, ಹಿರಿಯರ ಕುರಿತ ಪ್ರಶ್ನೆಗಳಿಗೆ ಸ್ವೀಪ್‌ ಸಮಿತಿಯ ಅಧಿಕಾರಿಗಳು ಉತ್ತರ ನೀಡಿದರು. ಅನಂತರ ಮತದಾನದ ಪ್ರಾತ್ಯಕ್ಷಿಕೆಯ ಮೂಲಕ ಅರಿವು ಮೂಡಿಸಲಾಯಿತು.

ವೇದಿಕೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ದ.ಕ. ಜಿಲ್ಲಾ ಉಪ ನಿರ್ದೇಶಕ ಸುಂದರ ಪೂಜಾರಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಯಮುನಾ ಡಿ., ಜಿಲ್ಲಾ ಸ್ವೀಪ್‌ ನೋಡಲ್‌ ಅಧಿಕಾರಿ ಸುಧಾಕರ್‌, ಜಿಲ್ಲಾ ಯೋಜನಾ ನಿರ್ದೇಶಕಿ ಮಂಜುಳಾ, ಪುತ್ತೂರು ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಜಗದೀಶ್‌, ಸಿಡಿಪಿಒ ಶಾಂತಿ ಹೆಗ್ಡೆ ಉಪಸ್ಥಿತರಿದ್ದರು. ಉದ್ಯೋಗ ಖಾತರಿ ಯೋಜನೆಯ ಅಧಿಕಾರಿ ನವೀನ್‌ ಭಂಡಾರಿ ಅವರು ಕಾರ್ಯಕ್ರಮ ನಿರ್ವಹಿಸಿದರು.

ಮಾಹಿತಿಗಾಗಿ
ನಡೆಯಲು ಸಾಧ್ಯವಾಗದ ಅಥವಾ ಇತರ ಸಮಸ್ಯೆಗಳ ಹಿರಿಯರು ಮತದಾನ ಮಾಡುವ ಸಂದರ್ಭದಲ್ಲಿ ಒಬ್ಬರು ಸಹಾಯಕರಿಗೆ ಅವಕಾಶ ನೀಡಲಾಗುತ್ತದೆ. ಜತೆಗೆ ಮತಗಟ್ಟೆಯ ಸಿಬಂದಿಯೂ ಸಹಕಾರ ನೀಡಲಿದ್ದಾರೆ. ಮತದಾನದ ಪಟ್ಟಿಯಲ್ಲಿ ಹೆಸರಿರುವ ಕುರಿತು ದೃಢಪಡಿಸಲು ಮೊ. 9731979899 ಸಂಖ್ಯೆಗೆ KAEPIC ಎಂದು ಟೈಪ್‌ ಮಾಡಿ ಎಪಿಕ್‌ ಕಾರ್ಡ್‌ನ ಸಂಖ್ಯೆಯನ್ನು ಎಸ್‌ ಎಂಎಸ್‌ ಮಾಡುವ ಮೂಲಕ ಎಲ್ಲ ವಿವರಗಳನ್ನು ತಿಳಿದುಕೊಳ್ಳಬಹುದು. ಚುನಾವಣಾ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಳ್ಳುವ ಮೂಲಕವೂ ಪರಿಶೀಲಿಸಬಹುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಎಂ.ಆರ್‌. ರವಿ ಹೇಳಿದರು.

ಟಾಪ್ ನ್ಯೂಸ್

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.