ವಿ.ವಿ. ಕ್ರೀಡಾಪಟುಗಳಿಗೆ ವಿಶೇಷ ಪರೀಕ್ಷಾ ಸೌಲಭ್ಯ!


Team Udayavani, Mar 7, 2019, 12:30 AM IST

athleticsv-dfdd.jpg

ಸುಳ್ಯ: ಪರೀಕ್ಷೆ ಅವಧಿಯಲ್ಲಿ ಅಂತರ್‌ ವಿ.ವಿ., ರಾಷ್ಟ್ರ, ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಪದವಿ, ಪದವಿಯೇತರ ಹಾಗೂ ಎನ್‌ಎಸ್‌ಎಸ್‌ ಇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳಿಗೆ ವಿಶೇಷ ಪರೀಕ್ಷೆಯ ಸೌಲಭ್ಯ ಈ ಶೈಕ್ಷಣಿಕ ವರ್ಷದಿಂದ ಜಾರಿಗೊಳ್ಳಲಿದೆ.

ಮಂಗಳೂರು ವಿಶ್ವವಿದ್ಯಾನಿಯ ಮತ್ತು ಅದರಡಿಯ ಕಾಲೇಜುಗಳಲ್ಲಿ ಪದವಿ ಹಾಗೂ ಉನ್ನತ ವಿದ್ಯಾಭ್ಯಾಸ ಮಾಡುತ್ತ ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಗೊಂಡ ಕ್ರೀಡಾಪಟುಗಳಿಗೆ ಈ ಹೊಸ ನಿಯಮ ವರವಾಗಲಿದೆ. ಇದರಿಂದ ಕ್ರೀಡಾಕೂಟಗಳ ಕಾರಣ ಪರೀಕ್ಷೆಗೆ ಹಾಜರಾಗದೆ ಅಥವಾ ಪರೀಕ್ಷೆಯಿಂದಾಗಿ ಕ್ರೀಡಾಕೂಟ ಕೈಬಿಡಬೇಕಾದ ಸಮಸ್ಯೆ ತಲೆದೋರದು.

ಸಮಸ್ಯೆ ಏನಿತ್ತು?
ಮಂಗಳೂರು ವಿವಿ ವ್ಯಾಪ್ತಿಯಲ್ಲಿ ದಕ್ಷಿಣಕನ್ನಡ, ಉಡುಪಿ, ಕೊಡಗು ಜಿಲ್ಲೆಗಳ 211 ಕಾಲೇಜುಗಳಿವೆ. ವಾರ್ಷಿಕವಾಗಿ ಅಂತರ್‌ ಕಾಲೇಜು ಮಟ್ಟದಲ್ಲಿ 48ಕ್ಕೂ ಅಧಿಕ ಕ್ರೀಡಾಸ್ಪರ್ಧೆಗಳು ಆಯೋಜನೆಗೊಳ್ಳುತ್ತವೆ. ಅಂತರ್‌ ಕಾಲೇಜು ಮಟ್ಟದಲ್ಲಿ ವಿಜೇತರಾದ ಕ್ರೀಡಾಪಟುಗಳು, ಬಳಿಕ ಅಂತರ್‌ ವಿ.ವಿ. ಮಟ್ಟಕ್ಕೆ ಅರ್ಹತೆ ಪಡೆಯುತ್ತಾರೆ. ಬಳಿಕ ದಕ್ಷಿಣ ವಲಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟಕ್ಕೂ ಆಯ್ಕೆಯಾಗಬಹುದು.

ಈ ಎಲ್ಲ ಸ್ಪರ್ಧೆಗಳು ಆಯೋಜನೆಗೊಳ್ಳುವುದು ಹೆಚ್ಚಾಗಿ ಹೊರ ಜಿಲ್ಲೆ, ರಾಜ್ಯದ ಇತರ ವಿ.ವಿ. ಅಥವಾ ಕ್ರೀಡಾಂಗಣಗಳಲ್ಲಿ. ಈ ಸಂದರ್ಭ ಮಂಗಳೂರು ವಿ.ವಿ. ವ್ಯಾಪ್ತಿಯಲ್ಲಿ ಸೆಮಿಸ್ಟರ್‌ ಅಥವಾ ವಾರ್ಷಿಕ ಪರೀಕ್ಷೆ ಏರ್ಪಟ್ಟಿದ್ದಲ್ಲಿ ವಿದ್ಯಾರ್ಥಿಗಳಿಗೆ ಪಾಲ್ಗೊಳ್ಳಲು ತೊಂದರೆ ಉಂಟಾಗುತ್ತದೆ. ಅವರು ಕ್ರೀಡಾಕೂಟಕ್ಕೆ ತೆರಳಿದರೆ ಪರೀಕ್ಷೆ ಬರೆಯಲಾಗದು. ಪರೀಕ್ಷೆಗೆ ಹಾಜರಾದರೆ ಕ್ರೀಡಾಕೂಟ ತಪ್ಪುತ್ತದೆ. ಈ ಸಂದಿಗ್ಧದಿಂದ ನೂರಾರು ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿತ್ತು.

ಏನಿದು ವಿಶೇಷ ಪರೀಕ್ಷಾ ಸೌಲಭ್ಯ?
ಈ ವಿಶೇಷ ಪರೀಕ್ಷಾ ಸೌಲಭ್ಯದಿಂದ ಪರೀಕ್ಷೆ ಮತ್ತು ಅಂತರ್‌ ವಿ.ವಿ. ಮೇಲ್ಪಟ್ಟ ಕ್ರೀಡಾಸ್ಪರ್ಧೆಗಳು ಏಕಕಾಲದಲ್ಲಿ ನಡೆದರೂ ಕ್ರೀಡಾಪಟುಗಳಿಗೆ ತೊಂದರೆ ಆಗಲಾರದು. ಸ್ಪರ್ಧೆಯಿಂದ ಮರಳಿದ ಬಳಿಕ ಎಲ್ಲ ವಿಷಯಗಳಲ್ಲಿ ಪರೀಕ್ಷೆ ಬರೆಯಬೇಕು. ಆಯಾ ಸೆಮಿಸ್ಟರ್‌ ಪರೀಕ್ಷೆಯನ್ನು ಅದೇ ಅವಧಿಯಲ್ಲಿ ಬರೆಯಬಹುದು. ಮಂಗಳೂರು ವಿ.ವಿ. ವ್ಯಾಪ್ತಿಗೆ ಒಳಪಟ್ಟ ಸ್ನಾತಕೋತ್ತರ, ಪದವಿ, ವಿ.ವಿ. ಸರ್ಟಿಫಿಕೇಟ್‌ ಕೋರ್ಸ್‌ ಮೊದಲಾದ ವಿಭಾಗಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕ್ರೀಡಾಳುಗಳು ಈ ಸೌಲಭ್ಯ ಪಡೆಯಬಹುದು.
 
ಇವರಿಗೂ ಲಭ್ಯ
ಜತೆಗೆ ಮಂಗಳೂರು ವಿ.ವಿ.ಯನ್ನು ದಕ್ಷಿಣ ವಲಯ, ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಎನ್‌ಸಿಸಿ, ಎನ್‌ಎಸ್‌ಎಸ್‌, ಪಠ್ಯೇತರ ಚಟುವಟಿಕೆ, ಸ್ಕೌಟ್‌ ಮತ್ತು ಗೈಡ್‌ ಮೊದಲಾದವುಗಳಲ್ಲಿ ಪ್ರತಿನಿಧಿಸುವ ವಿದ್ಯಾರ್ಥಿಗಳೂ ಈ ಸೌಲಭ್ಯಕ್ಕೆ ಅರ್ಹರು. ಆಯ್ಕೆಗೊಂಡ ವಿದ್ಯಾರ್ಥಿಗಳು ಒಪ್ಪಿಗೆ ಪಡೆದು, ಸ್ಪರ್ಧೆಗಳಲ್ಲಿ ಭಾಗವಹಿಸಿ ಅನಂತರ ಪರೀಕ್ಷೆಗೆ ಹಾಜರಾಗಬೇಕು.

ಸರಕಾರದಿಂದ ಸುತ್ತೋಲೆ
ಸಮಸ್ಯೆ ಪರಿಹಾರಕ್ಕಾಗಿ ಮಂಗಳೂರು ವಿವಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಇದಕ್ಕೆ ಸ್ಪಂದಿಸಿದ ಸರಕಾರ ವಿಶೇಷ ಪರೀಕ್ಷಾ ಸೌಲಭ್ಯ ಕಲ್ಪಿಸಲು ಸುತ್ತೋಲೆ ಹೊರಡಿಸಿದೆ.

ಒಂದು ವರ್ಷ ಕಾಯಬೇಕಿತ್ತು!
ಪರೀಕ್ಷೆ ಗೈರಾಗಿ ಕ್ರೀಡಾಕೂಟಕ್ಕೆ ತೆರಳುವವರು ಮತ್ತೆ ಪರೀಕ್ಷೆ ಬರೆಯಲು ಮುಂದಿನ ವರ್ಷದ ತನಕ ಕಾಯಬೇಕು. ಉದಾಹರಣೆಗೆ, ಪ್ರಥಮ ಸೆಮಿಸ್ಟರ್‌ ವಿದ್ಯಾರ್ಥಿ ಅಂತರ್‌ ವಿ.ವಿ. ಕ್ರೀಡಾಕೂಟಕ್ಕೆ ಆಯ್ಕೆಗೊಂಡು, ಪರೀಕ್ಷೆಗೆ ಗೈರಾದರೆ, ಆತ ಮುಂದಿನ ವರ್ಷ ನಡೆಯುವ ಪ್ರಥಮ ಸೆಮಿಸ್ಟರ್‌ ಪರೀಕ್ಷೆ ತನಕ ಕಾಯಬೇಕು. ಈ ವೇಳೆ ಆತ 3ನೇ ಸೆಮಿಸ್ಟರ್‌ ವಿದ್ಯಾರ್ಥಿ ಆಗಿರುತ್ತಾನೆ. 1ನೇ ಮತ್ತು 3ನೇ ಸೆಮಿಸ್ಟರ್‌ನ ಪರೀಕ್ಷೆ ಜತೆಯಾಗಿ ಬರುತ್ತವೆ. ಇದರಿಂದ ಒತ್ತಡ ಹೆಚ್ಚುತ್ತಿತ್ತು.

ಕ್ರೀಡಾಪಟುಗಳಿಗೆ ಅನುಕೂಲ
ವಿ.ವಿ. ವ್ಯಾಪ್ತಿಯ ಕ್ರೀಡಾಪಟುಗಳಿಗೆ ಅಂತರ್‌ ವಿ.ವಿ. ಮೇಲ್ಪಟ್ಟ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಕಾರಣ ಪರೀಕ್ಷೆ ಬರೆಯಲು ಅಸಾಧ್ಯವಾದಲ್ಲಿ ಕ್ರೀಡಾಕೂಟ ಮುಗಿದ ಬಳಿಕ ಪರೀಕ್ಷೆ ಬರೆಯುವ ಸೌಲಭ್ಯ 2019-20ನೇ ಸಾಲಿನಿಂದ ಲಭ್ಯವಾಗಲಿದೆ. ಈ ಬಗ್ಗೆ ಮಂಗಳೂರು ವಿ.ವಿ.ಗೆ ಅಧಿಕೃತ ಸುತ್ತೋಲೆ ದೊರೆತಿದೆ.
- ಡಾ| ಕಿಶೋರ್‌ ಕುಮಾರ್‌ ಸಿ.ಕೆ.
ನಿರ್ದೇಶಕರು, ದೈಹಿಕ ಶಿಕ್ಷಣ ವಿಭಾಗ, ಮಂಗಳೂರು ವಿವಿ

– ಕಿರಣ್‌ ಪ್ರಸಾದ್‌ ಕುಂಡಡ್ಕ
 

ಟಾಪ್ ನ್ಯೂಸ್

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.