ಭಗತ್ ಸೇನೆಯಿಂದ ನೇತ್ರದಾನ ಬೃಹತ್ ಅಭಿಯಾನ, ಸಮ್ಮಾನ
Team Udayavani, Aug 18, 2017, 7:10 AM IST
ಮೂಡಬಿದಿರೆ: “ಸಮಾಜದಲ್ಲಿ ಕ್ರಾಂತಿಕಾರಿಯಾಗಬೇಕಾಗಿಲ್ಲ. ಸಮಾಜ ಮುಖೀ ಚಿಂತನೆಗಳ ಮೂಲಕ ಹಲವು ವಿಧದ ಸೇವೆಯನ್ನು ಮಾಡುತ್ತ ಸಮಾಜದಲ್ಲಿ ಕ್ರಾಂತಿಕಾರಿ ಬದಲಾವಣೆ ತರಬಹುದು’ ಎಂದು ಆಳ್ವಾಸ್ ನರ್ಸಿಂಗ್ ಕಾಲೇಜಿನ ಉಪನ್ಯಾಸಕ, ಜೇಸಿಐ ರಾಷ್ಟ್ರೀಯ ತರಬೇತುದಾರ ಧೀರೇಂದ್ರ ಜೈನ್ ಹೇಳಿದರು.
ಇಲ್ಲಿನ ಭಗತ್ ಸೇನೆ ವತಿಯಿಂದ ಸ್ವಾತಂತ್ರೊತ್ಸವ ಪ್ರಯುಕ್ತ ಬಸ್ ನಿಲ್ದಾಣದಲ್ಲಿ ಮಂಗಳವಾರ ನಡೆದ ನೇತ್ರದಾನ ಬೃಹತ್ ಅಭಿಯಾನದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಯುವಜನರು ವಾಟ್ಸ್ ಆ್ಯಪ್, ಫೇಸ್ಬುಕ್ಗಳಲ್ಲಿ ಮುಳುಗುವ ಬದಲು ಸಮಾಜಮುಖೀಯಾಗಿ ತೊಡಗಿಸಿ ಕೊಳ್ಳುವುದು ಅಪೇಕ್ಷಣೀಯ’ ಎಂದರು.
ನಿವೃತ್ತ ಯೋಧ ರಮಾನಂದ ರಾವ್ ಅವರನ್ನು ಸಮ್ಮಾನಿಸಲಾಯಿತು.
ಮೂಡಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ಡಾ| ಜ್ಞಾನೇಶ್ ಕಾಮತ್ ನೇತ್ರದಾನದ ಮಹತ್ವ, ನೇತ್ರದಾನ ಮಾಡುವ ವಿಧಾನದ ಕುರಿತು ಮಾತನಾ ಡಿದರು. ವಕೀಲ ಶರತ್ ಶೆಟ್ಟಿ ಮುಖ್ಯ ಅತಿಥಿಯಾಗಿದ್ದರು. ಭಗತ್ ಸೇನೆಯ ಅಧ್ಯಕ್ಷ ಸುಜಿತ್ ಶೆಟ್ಟಿ, ಪ್ರಮುಖರಾದ ಪ್ರಸಾದ್ ಆಳ್ವ, ಪ್ರಜ್ವಲ್ ಕುಲಾಲ್, ಅಖೀಲ್ ಸಾಲ್ಯಾನ್, ಅಶೋಕ್ ಶೆಟ್ಟಿ, ಆಶಿಕ್ ಶೆಟ್ಟಿ, ಸಂದೀಪ್ ಶೆಟ್ಟಿ, ಅಭಿಷೇಕ್ ದೇವಾಡಿಗ, ಚೇತನ್ ನಾಯಕ್, ಸಂದೀಪ್ ಸಹಿತ ಸದಸ್ಯರು ಉಪಸ್ಥಿತರಿದ್ದರು. ವಸುಧಾ ನಿರೂಪಿಸಿದರು. ಸದಸ್ಯ ನಾಗರಾಜ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…