ವಾರ್ಡ್‌ ಸಮಿತಿ ರಚನೆ ಪ್ರಕ್ರಿಯೆಗೆ ವಾರದಲ್ಲಿ ಚಾಲನೆ

ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಲು ಮುಂದಾದ ಪಾಲಿಕೆ

Team Udayavani, Oct 7, 2020, 11:51 AM IST

mng-tdy-1

ಮಹಾನಗರ, ಅ. 6: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನನೆಗುದಿಗೆ ಬಿದ್ದಿದ್ದ ವಾರ್ಡ್‌ ಸಮಿತಿ ರಚನೆ ಪ್ರಕ್ರಿಯೆಗೆ ಆಡಳಿತಾತ್ಮಕ ಚಾಲನೆ ದೊರೆಯುವ ನಿರೀಕ್ಷೆ ಇದೆ.

ಕಳೆದ ಅಕ್ಟೋಬರ್‌ನಲ್ಲಿ ವಾರ್ಡ್‌ ಸಮಿತಿಗಳು ಅಸ್ತಿತ್ವಕ್ಕೆ ಬರಬೇಕಿದ್ದರೂ, ಮೇಯರ್‌ ಆಯ್ಕೆ  ಪ್ರಕ್ರಿಯೆ ಮತ್ತು ಸದಸ್ಯರ ಪ್ರತಿಜ್ಞಾ ವಿಧಿ ನಡೆಯದೆ ಇದ್ದುದರಿಂದ ವಿಳಂಬವಾಗಿತ್ತು. ಅನಂತರ ಕೊರೊನಾ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿ ಸಿದ ಪ್ರಕ್ರಿಯೆಗಳು ನಿಂತು ಹೋಗಿದ್ದವು. ಕಳೆದ ಆಗಸ್ಟ್‌ ನಲ್ಲಿ ಪಾಲಿಕೆಯ ಪರಿಷತ್‌ ಸಭೆಯಲ್ಲಿ ಅನುಮೋದನೆ ನೀಡಲಾಗಿತ್ತು. ಆದಾಗ್ಯೂ ವಾರ್ಡ್‌ ಸಮಿತಿ ರಚನೆ ಪ್ರಕ್ರಿಯೆ ಚುರುಕಾಗಿರಲಿಲ್ಲ. ಇದೀಗ ಪಾಲಿಕೆಯ ಅಧಿಕಾರಿಗಳು ಮುಂದಿನ ವಾರದೊಳಗೆ ಪ್ರಕ್ರಿಯೆ ಆರಂಭಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕಾರ್ಯದರ್ಶಿಗಳ ನೇಮಕ ವಿಳಂಬ :

ಏರಿಯಾ ಸಭೆ ರಚನೆಗೆ ಪೂರ್ವ ಭಾವಿಯಾಗಿ ನೋಡಲ್‌ ಅಧಿಕಾರಿ  ಹಾಗೂ ವಾರ್ಡ್‌ ಸಮಿತಿ ರಚನೆಗೆ ಪೂರ್ವಭಾವಿಯಾಗಿ ಕಾರ್ಯದರ್ಶಿ ಯನ್ನಾಗಿ ಪಾಲಿಕೆಯ ಅಧಿಕಾರಿಗಳನ್ನು ನಿಯೋಜಿಸಬೇಕು. ಅಧಿಕಾರಿಗಳ ನಿಯೋ ಜನೆ ಮಾಡದಿದ್ದುದರಿಂದ ಸಮಿತಿ ರಚನೆಗೆ ಅಡ್ಡಿಯಾಗಿದೆ ಎಂದು ವಾರ್ಡ್‌ ಸಮಿತಿಗಾಗಿ ಹೋರಾಟ ನಡೆಸುತ್ತಿರುವ ಮುಂದಾಳುಗಳು ದೂರಿದ್ದಾರೆ. ಪಾಲಿಕೆಯ ನಿರ್ಲಕ್ಷ್ಯದಿಂದಾಗಿಯೇ ವಾರ್ಡ್‌ ಸಮಿತಿ ರಚನೆ ವಿಳಂಬವಾಗಿದೆ ಎಂದು ಆರೋಪಿಸಿದ್ದಾರೆ.

121 ಏರಿಯಾ ಸಭೆ :

ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 121 ಏರಿಯಾ ಸಭೆಯನ್ನು ಈ ಹಿಂದೆಯೇ ಗುರುತಿಸಲಾಗಿದೆ. ಏರಿಯಾ ಸಭೆಗೆ ಅಲ್ಲಿನ ಮತದಾರರೆಲ್ಲರೂ ಸದಸ್ಯರು. ಆದರೆ ವಾರ್ಡ್‌ ಸಮಿತಿಗೆ 10 ಮಂದಿ ಸದಸ್ಯರ ಆಯ್ಕೆಯಾಗಬೇಕು. ಹುಬ್ಬಳ್ಳಿ- ಧಾರವಾಡದಲ್ಲಿ ಜನರಿಂದಲೇ ಅರ್ಜಿ ಆಹ್ವಾನಿಸಿ ಸದಸ್ಯರನ್ನು ಆಯ್ಕೆ ಮಾಡಲಾಗಿದೆ. ಅದೇ ಮಾದರಿಯಲ್ಲಿ ಮಂಗಳೂ ರಿನಲ್ಲಿಯೂ ಸದಸ್ಯರ ಆಯ್ಕೆಯಾಗಬೇಕು ಎಂಬುದು ಇಲ್ಲಿನ ಎಂಸಿಸಿ ಸಿವಿಕ್‌ ಗ್ರೂಪ್‌ನ ಒತ್ತಾಯ.

ಅಭ್ಯರ್ಥಿಗಳಿಂದ  ಆಶ್ವಾಸನೆ :

ನ್ಯಾಯಾಲಯದ ಆದೇಶ ಹಿನ್ನೆಲೆಯಲ್ಲಿ ಚುನಾವಣ ಪೂರ್ವದಲ್ಲಿ ಬಹುತೇಕ ಎಲ್ಲ ಅಭ್ಯರ್ಥಿಗಳು ವಾರ್ಡ್‌ ಸಮಿತಿ ರಚನೆಯ ಬಗ್ಗೆ ಆಶ್ವಾಸನೆ ನೀಡಿದ್ದರು.  ಪಾಲಿಕೆಯಲ್ಲಿ ಹೊಸ ಆಡಳಿತ ಅಸ್ತಿತ್ವಕ್ಕೆ ಬಂದ ಅನಂತರ ಈ ಬಗ್ಗೆ ಜನರು ಹೆಚ್ಚಿನ ನಿರೀಕ್ಷೆಯಲ್ಲಿದ್ದರು.

ಅನಗತ್ಯ ಕಾಮಗಾರಿ ತಡೆಯುವ ಅಧಿಕಾರ :   ವಾರ್ಡ್‌ನ ಜನರು ತಮ್ಮ ಕಾರ್ಪೊರೇಟರ್‌ಗಳ ಕಾರ್ಯವೈಖರಿ ಮೇಲೆ ನೇರವಾಗಿ ಪ್ರಭಾವ ಬೀರಲು ವಾರ್ಡ್‌ ಸಮಿತಿಯ ಮೂಲಕ ಸಾಧ್ಯವಾಗುತ್ತದೆ. ಕಾರ್ಪೊ ರೇಟರ್‌ ತಮ್ಮ ಇಚ್ಛಾನುಸಾರ, ಅನಗತ್ಯವೆನಿಸುವ ಕಾಮಗಾರಿ ನಡೆಸಲು ಸಾಧ್ಯವಾಗುವುದಿಲ್ಲ. ಕಾರ್ಪೊರೇಟರ್‌ ವಾರ್ಡ್‌ ಸಮಿತಿಯ ಅಧ್ಯಕ್ಷರಾಗಿರುತ್ತಾರೆ. ಸಮಿತಿಯಲ್ಲಿ   ಮೂವರು ಮಹಿಳೆಯರು, ನಿವೃತ್ತ ಸರಕಾರಿ ನೌಕರರು, ಯುವಕರು ಕಡ್ಡಾಯವಾಗಿ ಇರಬೇಕು. ಒಂದು ವೇಳೆ ಕಾರ್ಪೊರೇಟರ್‌ ವಾರ್ಡ್‌ ಸಮಿತಿಯ ತೀರ್ಮಾನ ಒಪ್ಪದಿದ್ದರೆ ಅದನ್ನು ಲಿಖೀತವಾಗಿ ಆಯುಕ್ತರಿಗೆ ತಿಳಿಸಬೇಕಾಗುತ್ತದೆ.

ಶೀಘ್ರ ಚಾಲನೆ : ಕೋವಿಡ್ ಹಿನ್ನೆಲೆಯಲ್ಲಿ ವಾರ್ಡ್‌ ಸಮಿತಿ ರಚನೆ ಪ್ರಕ್ರಿಯೆ ಸ್ವಲ್ಪ ವಿಳಂಬ ವಾಗಿತ್ತು. ವಾರ್ಡ್‌ ಸಮಿತಿಗೆ ಸದಸ್ಯರನ್ನು ಆಯ್ಕೆ ಮಾಡಲು ಸಾರ್ವಜನಿಕರಿಂದಲೇ ಅರ್ಜಿ ಆಹ್ವಾನಿ ಸಲಾಗುವುದು. ಈ ಪ್ರಕ್ರಿಯೆಯನ್ನು ಮುಂದಿನ ವಾರದೊಳಗೆ ಆರಂಭಿಸಲಾಗುವುದು. -ಅಕ್ಷಯ್‌ ಶ್ರೀಧರ್‌,  ಆಯುಕ್ತರು, ಮನಪಾ

ಜನರ ಸಹಭಾಗಿತ್ವ ಅಗತ್ಯ : ಏರಿಯಾ ಸಭೆಗೆ ನೋಡಲ್‌ ಅಧಿಕಾರಿ ಹಾಗೂ ವಾರ್ಡ್‌ ಸಮಿತಿಗೆ ಕಾರ್ಯದರ್ಶಿಯನ್ನು ನೇಮಕ ಮಾಡಿರುವ ಕುರಿತಾಗಿ ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿಯೂ ಮಾಹಿತಿ ಕೇಳಿದ್ದೇನೆ. ಆದರೆ ಇದುವರೆಗೂ ಪಾಲಿಕೆಯಿಂದ ಮಾಹಿತಿ ದೊರೆತಿಲ್ಲ. ಜನರು ಆಡಳಿತ ವರ್ಗದ ಜತೆ ಸೇರಿ ತಮ್ಮ ಪರಿಸರದ ಸಮಸ್ಯೆ ಪರಿಹರಿಸಿಕೊಳ್ಳಲು, ಅಗತ್ಯ ಮೂಲಸೌಕರ್ಯಗಳನ್ನು ಪಾರದರ್ಶಕವಾಗಿ ಮಾಡಿಸಿಕೊಳ್ಳಲು ಸಮಿತಿ ತುಂಬಾ ಸಹಕಾರಿಯಾಗುತ್ತದೆ.  -ಪದ್ಮನಾಭ ಉಳ್ಳಾಲ,   ಎಂಸಿಸಿ ಸಿವಿಕ್‌ ಗ್ರೂಪ್‌

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ

Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.