ಒತ್ತುವರಿ, ತ್ಯಾಜ್ಯ ನಿವಾರಿಸದಿದ್ದರೆ ಸಮಸ್ಯೆ

ಮೂಲ್ಕಿ ನಗರ ಪಂಚಾಯತ್‌ ವ್ಯಾಪ್ತಿಯ ರಾಜಕಾಲುವೆಗಳು

Team Udayavani, Apr 8, 2022, 10:24 AM IST

mulki

ಮೂಲ್ಕಿ: ಮೂಲ್ಕಿ ನಗರ ಪಂಚಾಯತ್‌ ವ್ಯಾಪ್ತಿಯ ಸುಮಾರು 80 ಕಿ.ಮೀ. ರಸ್ತೆಯಲ್ಲಿ ಸುಮಾರು 15 ಕಿ.ಮೀ.ಗಿಂತ ಹೆಚ್ಚು ದೂರಕ್ಕೆ ರಾಜ ಕಾಲುವೆಗಳು ಹರಿಯುತ್ತವೆ. ಸುಮಾರು 160ಕ್ಕೂ ಹೆಚ್ಚು ತೋಡುಗಳನ್ನು ಕಾಣಬಹುದಾಗಿದೆ. ಎಲ್ಲ ತೋಡುಗಳ ನಿರ್ವಹಣೆ ಅಸಮರ್ಪಕವಾಗಿದ್ದು, ಹೂಳು ತುಂಬಿದೆ. ಮಳೆ ನೀರು ಸರಿಯಾಗಿ ಹರಿಯಲು ಅಸಾಧ್ಯವಾಗುವಂಥ ಸ್ಥಿತಿ ಇದೆ. ಕೂಡಲೇ ಹೂಳೆತ್ತುವ ಕಾರ್ಯವನ್ನು ಬಿರುಸಿನಿಂದ ಮಾಡಬೇಕಿದೆ. ಇಲ್ಲವಾದರೆ ಮಳೆ ಸುರಿದ ಕೂಡಲೇ ಕೃತಕ ನೆರೆ ಸೃಷ್ಟಿಯಾಗಬಹುದು.

ರಾಜಕಾಲುವೆಯ ಬಳಿ ಇರುವ ಮನೆಗಳು ಕಾಲುವೆ ಜಾಗವನ್ನು ಒತ್ತುವರಿ ಮಾಡಿಕೊಳ್ಳುತ್ತಿರುವುದು ಈ ಸಮಸ್ಯೆ ಬೆಳೆಯಲು ಮುಖ್ಯ ಕಾರಣ.

ಇಲ್ಲಿಯ ಬಪ್ಪನಾಡು ದೇವಸ್ಥಾನ ಬಳಿಯ ಕೊಪ್ಪಲ ಕೆರೆಯ ಬಳಿಯ ರಾಜ ಕಾಲುವೆಯ ಬಹುತೇಕ ಭಾಗ ಒತ್ತುವರಿಯಾಗಿದೆ. ಒಂದು ಭಾಗದಲ್ಲಿ ಆವರಣ ಗೋಡೆ ಇದ್ದರೆ, ಮತ್ತೂಂದು ಭಾಗದಲ್ಲಿ ಆವರಣ ಗೋಡೆ ಎಲ್ಲವನ್ನೂ ಮುಗಿಸಿ ಹಾಕಿದೆ.

ನಗರ ಪಂಚಾಯತ್‌ ಅಧಿಕಾರಿಗಳು ಈ ಬಗ್ಗೆ ಎಚ್ಚರ ವಹಿಸಿ ಕ್ರಮ ಕೈಗೊಳ್ಳಬೇಕಿದೆ. ಮಳೆ ಬಂದಾಗ ಕೃತಕ ನೆರೆಯಂತಹ ಗಂಡಾಂತರದಿಂದ ಪಾರಾ ಗಲು ಈ ಕ್ರಮ ಅತೀ ಅಗತ್ಯವಾಗಿದೆ.

ಪಂಚಮಹಲ್‌ ಬಳಿಯ ರಾಜಕಾಲು ವೆಯಲ್ಲಿ ಅತೀ ದೂರದಿಂದ ಬಂದ ಮಳೆ ನೀರು ಹಾದುಹೋಗುತ್ತದೆ. ಅದೇ ರೀತಿ ಕಾರ್ನಾಡು ಹರಿಹರ ಕ್ಷೇತ್ರದ ಬಳಿಯ ಧರ್ಮಸ್ಥಾನ ರಸ್ತೆಯ ಸಮೀಪದಲ್ಲೂ ಇರುವ ರಾಜಕಾಲುವೆ ಬಹಳಷ್ಟು ದೂರದ ನೀರನ್ನು ನದಿಗೆ ಸಾಗಿಸುವ ಮಾರ್ಗವಾಗಿದೆ.

ಒಳಚರಂಡಿ ನಿರ್ಮಾಣವಾಗಲಿ

ಮೂಲ್ಕಿಯಲ್ಲಿ ಒಳ ಚರಂಡಿ ವ್ಯವಸ್ಥೆ ಕೆಲವು ತಾಂತ್ರಿಕ ಕಾರಣಗಳಿಂದ ಇನ್ನೂ ಪೂರ್ಣಗೊಳ್ಳುವ ಹಂತಕ್ಕೆ ಬಂದಂತಿಲ್ಲ. ಬಹು ಮಹಡಿಯ ವಾಣಿಜ್ಯ ಮತ್ತು ವಸತಿ ಸಂಕೀರ್ಣಗಳು ಬೆಳೆದು ನಿಂತಿವೆ. ಇಲ್ಲಿಗೆ ಅತೀ ಅಗತ್ಯವಾಗಿರುವ ಒಳಚರಂಡಿ ವ್ಯವಸ್ಥೆ ನಿರ್ಮಾಣವಾಗಿ ನೀರು ಹರಿಯಲಾರಂಭಿಸಿದರೆ ಮಾತ್ರ ಮೂಲ್ಕಿಯ ಜನರು ನೆಮ್ಮದಿಯಿಂದ ಇರಲು ಸಾಧ್ಯ.

ಈಗಾಗಲೇ ಚರಂಡಿಯ ಕಾಮಗಾರಿಯನ್ನು ಆರಂಭಿ ಸಿರುವ ನಗರ ಪಂಚಾಯತ್‌ ಗೆ ಸವಾಲಾಗಿರುವುದು ಜನರು ಕಸ ಕಡ್ಡಿ ಅಥವಾ ಕಟ್ಟಡ ತ್ಯಾಜ್ಯವನ್ನು ರಸ್ತೆ ಬದಿಗೆ ಸುರಿಯುವುದು ಮತ್ತು ಚರಂಡಿ ಸರಿಪಡಿಸಲು ಮರೆತು ಹೋಗಿರುವುದು. ನಗರ ಪಂಚಾಯತ್‌ನ ಜತೆಗೆ ಸಾರ್ವಜನಿಕರು ಚರಂಡಿ ಸಮಸ್ಯೆ ಬಿಗಡಾಯಿಸದಂತೆ ಸಹಕರಿಸುವುದು ಅತೀ ಅಗತ್ಯವಾಗಿದೆ. ಈಗಾಗಲೇ ಕೆಲವೆಡೆ ರಸ್ತೆ ಬದಿಯಲ್ಲಿ ಕಟ್ಟಡ ಸಾಮಗ್ರಿ ಸಂಗ್ರಹಿಸಿರುವುದನ್ನು ತೆರವುಗೊಳಿಸುವ ಮೂಲಕ ಬಿಸಿ ಮುಟ್ಟಿಸುವ ಕೆಲಸವನ್ನು ಕೂಡ ನಗರ ಪಂಚಾಯತ್‌ ಮಾಡಿದೆ. ಈಗಾಗಲೇ ನಗರ ಪಂಚಾಯತ್‌ ವ್ಯಾಪ್ತಿಯ ಹೆಚ್ಚಿನ ರಸ್ತೆಗಳ ಚರಂಡಿಗಳ ಸ್ವತ್ಛತೆಯ ಕೆಲಸವನ್ನು ಆರಂಭಿಸಲಾಗಿದೆ. ಇತರ ಹಲವೆಡೆ ತೋಡುಗಳನ್ನು ಸರಿಪಡಿಸುವ ಕೆಲಸವನ್ನು ತ್ವರಿತವಾಗಿ ಮಾಡಬೇಕಿದೆ.

ಸೂಕ್ತ ಕ್ರಮ

ಸಾರ್ವಜನಿಕರು ಕಾಲುವೆಯ ಜಾಗವನ್ನು ಅತಿಕ್ರಮಿಸಿದರೆ ಸೂಕ್ತ ಕ್ರಮ ಜರಗಿಸಿ ತೆರವುಗೊಳಿಸಲು ಮುಂದಾಗುತ್ತೇವೆ. ಒಂದು ವೇಳೆ ಚರಂಡಿಯಲ್ಲಿ ನೀರು ಹರಿದು ಹೋಗಲು ಅಗತ್ಯ ಇರುವ ಜಾಗ ಯಾರದೇ ಆಗಿದ್ದರೂ ಅದನ್ನು ಸಾರ್ವಜನಿಕ ಉದ್ದೇಶಕ್ಕಾಗಿ ವಶಪಡಿಸಿಕೊಳ್ಳುವ ನಿಯಮವನ್ನು ಕೂಡ ನಗರ ಪಂಚಾಯತ್‌ ಬಳಸಿಕೊಳ್ಳಲು ಸಾಧ್ಯವಿದೆ.  –ಪಿ. ಚಂದ್ರ ಪೂಜಾರಿ, ಮುಖ್ಯಾಧಿಕಾರಿ, ಮೂಲ್ಕಿ ನಗರ ಪಂಚಾಯತ್‌

ಟಾಪ್ ನ್ಯೂಸ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.