ತ್ಯಾಜ್ಯ ಸಾಗಾಟ ವಾಹನ ನಿಲುಗಡೆ: ಪರಿಸರ ಮಾಲಿನ್ಯ
Team Udayavani, Feb 25, 2022, 3:45 AM IST
ಸುರತ್ಕಲ್: ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸ್ವತ್ಛತ ಕಾರ್ಯಕ್ಕೆ ಗುತ್ತಿಗೆ ಪಡೆದಿರುವ ಆ್ಯಂಟನಿ ವೇಸ್ಟ್ ಸಂಸ್ಥೆ ವಾಹನಗಳನ್ನು ಸುರತ್ಕಲ್ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರ ಸಮೀಪ ಇಲಾಖೆಯ ಆವರಣದೊಳಗೆ ನಿಲ್ಲಿಸಲಾಗುತ್ತಿದೆ. ಇದರಿಂದ ಆ ಪರಿಸರದಲ್ಲಿ ಮಾಲಿನ್ಯ ಸೃಷ್ಟಿಯಾಗುತ್ತಿದ್ದು, ಸಾರ್ವಜನಿಕರು, ಆಸ್ಪತ್ರೆಗೆ ಬರುವವರು ಸಂಕಷ್ಟ ಎದುರಿಸುವಂತಾಗಿದೆ.
ಗುತ್ತಿಗೆ ಪಡೆದ ಸಂಸ್ಥೆ ತನ್ನ ನೂರಾರು ವಾಹನದ ನಿಲುಗಡೆಗೆ ಬೇಕಾದ ಸ್ಥಳವನ್ನು ಹೊಂದಿರಬೇಕೆಂಬ ನಿಯಮವಿದ್ದರೂ ಖಾಲಿ ಸ್ಥಳಾವಕಾಶ ಇರುವಲ್ಲಿ ನಿಲ್ಲಿಸುತ್ತಾ ಬರಲಾಗುತ್ತಿದೆ.
ಸಮೀಪದಲ್ಲಿದೆ ಇಂದಿರಾ ಕ್ಯಾಂಟೀನ್ :
ಸುರತ್ಕಲ್ ಭಾಗದಲ್ಲಿ ನಿತ್ಯ ಸ್ವತ್ಛತೆ ನಡೆಸಿ ಬಳಿಕ ವಾಹನವನ್ನು ನಿಲ್ಲಿಸಲಾಗುತ್ತದೆ. ಕೆಲವು ಬಾರಿ ತ್ಯಾಜ್ಯವನ್ನು ಹೇರಿಕೊಂಡು ವಾಹನಗಳು ಅಲ್ಲೇ ನಿಂತಿರುತ್ತವೆ. ಸಮೀಪವೇ ಇಂದಿರಾ ಕ್ಯಾಂಟೀನ್ ಕಾರ್ಯನಿರ್ವಹಿಸುತ್ತಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಮಕ್ಕಳ ಆರೈಕೆ ಕೇಂದ್ರ, ಗರ್ಭಿಣಿಯರ ತಪಾಸಣೆ, ದಾದಿಯರ ವಸತಿ ಗೃಹ, ತರಬೇತಿ ಕೇಂದ್ರ ಮತ್ತಿತರ ನಿತ್ಯ ಕಾರ್ಯಚಟುವಟಿಕೆ ಹೊಂದಿರುವ ಕೇಂದ್ರಗಳಿವೆ.
ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದ ಒಳಗೆ ಈ ವಾಹನಗಳನ್ನು ಸ್ವತ್ಛ ಮಾಡುವುದರಿಂದ ಅಲ್ಲಲ್ಲಿ ಕಸವು ಬಿದ್ದು ಮಾಲಿನ್ಯ ಉಂಟಾಗುತ್ತಿದೆ.
ಈ ಹಿಂದೆ ಆರೋಗ್ಯ ಕೇಂದ್ರದ ಮುಂಭಾಗ ವಾಹನ ನಿಲ್ಲಿಸದಂತೆ ಸಾರ್ವಜನಿಕ ವಲಯದಲ್ಲಿ ಆಕ್ಷೇಪ ವ್ಯಕ್ತವಾಗಿತ್ತು. ಮತ್ತೆ ಪ್ರಾಥಮಿಕ ಆರೋಗ್ಯ ಕೇಂದ್ರದ ಒಳಗಡೆಯೇ ನಿಲ್ಲಿಸುವುದು ಎಷ್ಟು ಸಮಂಜಸ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.
ಚರ್ಚಿಸಿ ಸೂಕ್ತ ಕ್ರಮ :
ಈ ಹಿಂದೆ ಬಂಗ್ರಕೂಳೂರು ಬಳಿ ಬಾಡಿಗೆ ನೀಡಿ ಸ್ವತ್ಛತ ವಾಹನವನ್ನು ನಿಲ್ಲಿಸಲಾಗುತ್ತಿತ್ತು. ಆದರೆ ಬಳಿಕ ಕೆಲವೊಂದು ಕಾರಣಗಳಿಂದಾಗಿ ನಿಲುಗಡೆಗೆ ವಿವಿಧೆಡೆ ಸ್ಥಳ ನಿಗದಿ ಮಾಡಲಾಗಿತ್ತು. ಸುರತ್ಕಲ್ನಲ್ಲಿ ಸ್ವಚ್ಛತ ವಾಹನಗಳು ಆರೋಗ್ಯ ಕೇಂದ್ರದ ವಠಾರದಲ್ಲಿ ನಿಲ್ಲಿಸುವ ಬಗ್ಗೆ ಆಕ್ಷೇಪಗಳು ಇದ್ದಲ್ಲಿ ಮೇಯರ್ ಹಾಗೂ ಆಯುಕ್ತರೊಂದಿಗೆ ಚರ್ಚಿಸಿ ಸೂಕ್ತ ಕ್ರಮಕೈಗೊಳ್ಳಲಾಗುವುದು. – ಡಾ| ಮಂಜಯ್ಯ ಶೆಟ್ಟಿ, ಆರೋಗ್ಯಾಧಿಕಾರಿಗಳು, ಪಾಲಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
MUST WATCH
ಹೊಸ ಸೇರ್ಪಡೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ