ತ್ಯಾಜ್ಯ ವಿಂಗಡಣೆ; ಸಮಸ್ಯೆಯ ನಡುವೆಯೂ ಪೂರಕ ಸ್ಪಂದನೆ
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ತ್ಯಾಜ್ಯ ಸಂಗ್ರಹ
Team Udayavani, Nov 10, 2020, 5:00 AM IST
ಮಹಾನಗರ: ತ್ಯಾಜ್ಯ ಸಂಗ್ರಹ ಮಾಡುವ ವಾಹನಗಳಿಗೆ ಹಸಿ, ಒಣ ಕಸವಾಗಿ ವಿಂಗಡಿಸಿ ನೀಡುವ ನಿಯಮ ಒಂದು ತಿಂಗಳಿನಿಂದ ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಪೂರ್ಣಮಟ್ಟದಲ್ಲಿ ಜಾರಿಗೆ ಬಂದಿದೆ. ಆದರೆ ಕೆಲವೆಡೆಗಳಲ್ಲಿ ತ್ಯಾಜ್ಯ ಸಂಗ್ರಹದಲ್ಲಿ ಸಮಸ್ಯೆ ಆಗುತ್ತಿದೆ ಎಂಬ ಆರೋಪವೂ ಸಾರ್ವಜನಿಕರಿಂದ ವ್ಯಕ್ತವಾಗಿದೆ.
ನಗರದಲ್ಲಿ ಶುಕ್ರವಾರ ಮಾತ್ರ ಒಣ ಕಸ ಸಂಗ್ರಹ ಮಾಡಲಾಗುತ್ತಿದೆ. ಕಳೆದ ಶುಕ್ರವಾರ ಒಟ್ಟು 330 ಟನ್ ಒಣಕಸ ಸಂಗ್ರಹವಾಗಿದೆ. ಒಣಕಸ ಪ್ರತ್ಯೇಕವಾಗಿ ಸಂಗ್ರಹ ಮಾಡಿದ ಪರಿಣಾಮ ಸದ್ಯ ಪ್ರತೀ ದಿನ ಹಸಿ ಕಸ ಪ್ರಮಾಣ 220 ಟನ್ಗಳಿಗೆ (ಹಿಂದೆ ಸುಮಾರು 300 ಟನ್) ಇಳಿದಿದೆ.
ವಾರದಿಂದ ವಾರಕ್ಕೆ ಒಣಕಸದ ಪ್ರಮಾ ಣದಲ್ಲಿ ಏರಿಕೆಯಾಗುತ್ತಿದೆ. ಇದರಿಂದ ಒಂದೇ ವಾಹನದಲ್ಲಿ ಅದನ್ನು ಸಾಗಿಸಲು ಸಮಸ್ಯೆಯಾಗುತ್ತಿದೆ. ಹೀಗಾಗಿ ನಗರದ ವಿವಿಧ ಕಡೆಗಳಲ್ಲಿ ಶುಕ್ರವಾರ ಒಣಕಸ ನಿರ್ವಹಣೆ ಸಮರ್ಪಕವಾಗಿ ನಡೆದಿಲ್ಲ ಎಂಬ ಆರೋಪವೂ ಕೇಳಿಬಂದಿದೆ.
ಈ ಮಧ್ಯೆ, ಪ್ರತೀ ದಿನ ಹಸಿ ಕಸ ಸಾಗಾಟ ನಡೆಸುವಲ್ಲಿಯೂ ಇದೀಗ ಹೊಸ ಸಮಸ್ಯೆ ಕೇಳಿಬಂದಿದೆ. ವಸತಿ ಸಮುಚ್ಚಯ ಸಹಿತ ನಿರ್ದಿಷ್ಟ ಪ್ರದೇಶಗಳಿಂದ ಪ್ರತಿನಿತ್ಯ ಹಸಿಕಸ ನಿರ್ವಹಣೆಯಾಗುತ್ತಿದ್ದರೆ, ಪ್ರತ್ಯೇಕ ಮನೆಗಳಿರುವ ಕೆಲವು ಭಾಗಗಳಿಂದ 2-3 ದಿನಗಳವರೆಗೂ ಹಸಿ ಕಸ ಕೊಂಡೊ ಯ್ಯುತ್ತಿಲ್ಲ ಎಂಬ ದೂರು ಕೇಳಿಬಂದಿದೆ.
ಸ್ಥಳೀಯ ಸಮಸ್ಥೆಗಳಿಗೆ ನೋಟಿಸ್
ಪಚ್ಚನಾಡಿ ಡಂಪಿಂಗ್ ಯಾರ್ಡ್ ಪ್ರದೇಶಗಳಿಗೆ ನಗರ ಹೊರತುಪಡಿಸಿ ಇತರ ಭಾಗಗಳಿಂದ ತ್ಯಾಜ್ಯ ಕಳುಹಿಸುವ ಸ್ಥಳೀಯ ಸಂಸ್ಥೆಗಳು ತ್ಯಾಜ್ಯ ವಿಂಗಡಣೆ ಮಾಡಿ ನೀಡುವಂತೆ ಪಾಲಿಕೆಯಿಂದ ನೋಟಿಸ್ ನೀಡಲಾಗಿದೆ. ಅಪಾರ್ಟ್ ಮೆಂಟ್, ಬೃಹತ್ ತ್ಯಾಜ್ಯ ಉತ್ಪಾದಕರು, ಮಾಲ್, ಉದ್ದಿಮೆದಾರರು ಸ್ವಂತ ತ್ಯಾಜ್ಯ ಸಂಸ್ಕರಣೆ ಕಾಂಪೋ ಸ್ಟಿಂಗ್ ಘಟಕವನ್ನು ಕಡ್ಡಾಯವಾಗಿ ನಿರ್ಮಿಸುವಂತೆ, ಉತ್ಪಾದನೆಯಾಗುವ ತ್ಯಾಜ್ಯವನ್ನು ಸ್ಥಳ ದಲ್ಲಿಯೇ ಸಂಸ್ಕರಣೆ ಮಾಡುವಂತೆ ಸೂಚಿಸಲಾಗಿದೆ. ಕಾಂಪೋಸ್ಟಿಂಗ್ ಘಟಕ ನಿರ್ಮಿಸುವ ತನಕ ತಮ್ಮ ಸಂಸ್ಥೆಯಲ್ಲಿ ದಿನನಿತ್ಯ ಉತ್ಪತ್ತಿಯಾಗುವ ತ್ಯಾಜ್ಯವನ್ನು ಹಸಿ ಕಸ ಹಾಗೂ ಒಣಕಸವಾಗಿ ವಿಂಗಡಿಸಿ ನೀಡಬೇಕಾಗಿದೆ.
ದಂಡ ಪ್ರಯೋಗ ಜಾರಿ
ಹಸಿ ಕಸ, ಒಣಕಸ ಪ್ರತ್ಯೇಕವಾಗಿ ನೀಡು ವಂತೆ ಪಾಲಿಕೆ ಮಾಡಿದ ಮನವಿಗೆ ಸಾರ್ವ ಜನಿಕರಿಂದ ಉತ್ತಮ ಪ್ರತಿ ಕ್ರಿಯೆ ವ್ಯಕ್ತವಾಗಿದೆ. ತ್ಯಾಜ್ಯ ವಿಂಗ ಡಿಸದಿದ್ದರೆ ಪಾಲಿಕೆಯ ವತಿಯಿಂದ ಕಸ ಸಂಗ್ರಹಣೆಯನ್ನು ಮುಂದಿನ ದಿನಗಳಲ್ಲಿ ಸ್ವೀಕರಿಸುವುದಿಲ್ಲ. ಜತೆಗೆ ಸಂಬಂಧಪಟ್ಟವರಿಂದ ದಂಡ ಸ್ವೀಕರಿಸಲಾಗುವುದು. ತ್ಯಾಜ್ಯ ವಿಂಗಡಣೆ ಮಾಡದವರಿಗೆ, ರಸ್ತೆ ಬದಿಯಲ್ಲಿ ಬಿಸಾ ಡುವವರಿಗೆ 1,000ದಿಂದ 25,000 ರೂ.ವರೆಗೆ ದಂಡ ವಿಧಿಸಲು ಕ್ರಮ ಕೈಗೊಳ್ಳಲಾಗುವುದು.
-ಅಕ್ಷಯ್ ಶ್ರೀಧರ್, ಆಯುಕ್ತರು, ಮನಪಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್