ಫಲ್ಗುಣಿ ನದಿ ದಂಡೆ ವ್ಯಾಪ್ತಿಯಲ್ಲಿ ಕಟ್ಟಡ ತ್ಯಾಜ್ಯ ರಾಶಿ!
Team Udayavani, Sep 18, 2021, 6:28 AM IST
ಮಹಾನಗರ: ಫಲ್ಗುಣಿ ನದಿ ಹರಿಯುವ ನಗರದ ಕೂಳೂರು ಬಳಿಯಲ್ಲಿ ನದಿಯ ದಂಡೆಯುದ್ದಕ್ಕೂ ಕೆಲವರು ಕಟ್ಟಡ ತ್ಯಾಜ್ಯ, ಮಣ್ಣು ಸುರಿಯುತ್ತಿದ್ದಾರೆ. ಹೀಗಾಗಿ ನದಿ ಬದಿಯ ವ್ಯಾಪ್ತಿ ಇದೀಗ ಕಟ್ಟಡ ತ್ಯಾಜ್ಯ ರಾಶಿಯಾಗಿ ಕಾಣಿಸುತ್ತಿದೆ.
ಸಿಮೆಂಟ್, ಪ್ಲಾಸ್ಟಿಕ್, ಕಲ್ಲು ಮಣ್ಣಿನೊಂದಿಗೆ ಕಟ್ಟಡ ತ್ಯಾಜ್ಯವನ್ನು ಕೂಡ ಇಲ್ಲಿ ಸುರಿಯಲಾಗುತ್ತಿದೆ. ನದಿಯ ಸುಮಾರು 2-3 ಕಿ.ಮೀ. ಉದ್ದಕ್ಕೆ ಮಣ್ಣು ಸುರಿಯಲಾಗಿದೆ.
ನದಿ ದಂಡೆಯಲ್ಲಿ 2019ರಲ್ಲಿ ನದಿ ಉತ್ಸವ ನಡೆಸುವ ಮೂಲಕ ಪ್ರವಾಸಿಗರನ್ನು ಸೆಳೆಯುವ ಪ್ರಯತ್ನ ಜಿಲ್ಲಾಡಳಿತ ಮಾಡಿತ್ತು. ಬಳಿಕ ಎರಡು ವರ್ಷಗಳಿಂದ ಕೂಳೂರು ಬಳಿಯಲ್ಲಿ ನದಿಯ ದಂಡೆಯುದ್ದಕ್ಕೂ ಕಿ.ಮೀ. ಗಟ್ಟಲೆ ಉದ್ದಕ್ಕೆ ಕಟ್ಟಡ ತ್ಯಾಜ್ಯ, ಮಣ್ಣು ಸುರಿಯಲಾಗುತ್ತಿದ್ದು, ನದಿಯ ಸೌಂದರ್ಯಕ್ಕೆ ಧಕ್ಕೆಯಾಗಿದೆ. ಇದರ ವಿರುದ್ಧ ಆಡಳಿತ ವ್ಯವಸ್ಥೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ:ಮೂರನೇ ಅಲೆ ಭೀತಿ : ಮುಂಬೈನಲ್ಲಿ ಅನಧಿಕೃತ “3ನೇ ಡೋಸ್’ ದರ್ಬಾರ್
“ಇದೇ ರೀತಿ ಮುಂದುವರಿದರೆ ತ್ಯಾಜ್ಯ ಸುರಿಯುವ ಡಂಪಿಂಗ್ ಯಾರ್ಡ್ ಆಗಿ ನದಿ ಬದಿ ಪರಿವರ್ತನೆಯಾಗಲಿದೆ. ಹೀಗಾದರೆ ಮುಂದೆ ನೆರೆ ಸಂಭವಿಸುವ ಆತಂಕವೂ ಇದೆ. ಹೀಗಾಗಿ ನದಿ ಒತ್ತುವರಿಯ ಘಟನೆಯನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿ ತ್ಯಾಜ್ಯ ಎಸೆಯುವವರ ವಿರುದ್ಧ ಕಾಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಪರಿಸರ ಹೋರಾಟಗಾರರಾದ ದಿನೇಶ್ ಹೊಳ್ಳ ಹಾಗೂ ಶಶಿಧರ ಶೆಟ್ಟಿ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ
Movie Review: ಆಡು ಜೀವಿದಂ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ