ಹನಿ ನೀರೂ ಬರಲ್ಲ; ಕಾಮಗಾರಿ ಬಿಲ್ ಪಾವತಿ!
Team Udayavani, May 27, 2019, 3:38 PM IST
ಉಪ್ಪಿನಂಗಡಿ : ಕುಡಿಯುವ ನೀರಿನ ಅಭಾವ ನೀಗಿಸಲು ಸರಕಾರ ಶುದ್ಧ ನೀರಿನ ಘಟಕಗಳ ಸ್ಥಾಪನೆಗೆ ಯೋಜನೆ ಜಾರಿಗೊಳಿಸಿದ್ದು, ಗುತ್ತಿಗೆದಾರರ ಕಳಪೆ ಕಾಮಗಾರಿಯಿಂದಾಗಿ ಲಕ್ಷಾಂತರ ಮೌಲ್ಯದ ವಸ್ತುಗಳು ತುಕ್ಕು ಹಿಡಿದು ಗುಜರಿಗೆ ಸೇರುವಂತಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಶುದ್ಧ ನೀರಿನ ಘಟಕಗಳನ್ನು ಆರಂಭಿಸಿ, ಕಡಿಮೆ ವೆಚ್ಚದಲ್ಲಿ ಉತ್ತಮ ಗುಣಮಟ್ಟದ ನೀರು ಪ್ರಯಾಣಿಕರಿಗೆ ಸಿಗಲೆಂದು ಉಪ್ಪಿನಂಗಡಿಯಲ್ಲೂ ಯೋಜನೆ ಜಾರಿಗೊಳಿಸಲಾಗಿತ್ತು. ಎರಡು ವರ್ಷಗಳ ಹಿಂದೆ ಹೊರ ರಾಜ್ಯದ ಗುತ್ತಿಗೆದಾರರೊಬ್ಬರು ಕಾಟಾಚಾರಕ್ಕೆ ಎಂಬಂತೆ ಕಳಪೆ ಕಾಮಗಾರಿ ನಿರ್ವಹಿಸಿ, ಅದರ ಭಾವಚಿತ್ರಗಳನ್ನು ಸರಕಾರಕ್ಕೆ ಸಲ್ಲಿಸಿ, ಬಿಲ್ ಪಡೆದಿದ್ದಾರೆ. ಅಧಿಕಾರಿಗಳು ಕಾಮಗಾರಿಯನ್ನು ಪರಿಶೀಲಿಸದೆ ಮಂಜೂರಾತಿ ನೀಡಿದ್ದಾರೆ. ಇದೇ ಅವಾಂತರಕ್ಕೆ ಕಾರಣ ಎಂಬುದು ಸ್ಥಳೀಯರ ಆರೋಪ.
ಘಟಕ ರಚಿಸಿ ಎರಡು ವರ್ಷಗಳೇ ಆದರೂ ಪ್ರವಾಸಿಗರಿಗೆ ಅಥವಾ ಗ್ರಾಮಸ್ಥರಿಗೆ ಒಂದು ಹನಿ ನೀರೂ ಸಿಕ್ಕಿಲ್ಲ. ಹೆದ್ದಾರಿ ಸನಿಹದಲ್ಲಿ ಯಾರೋ ಅಪರಿಚಿತರು ಘಟಕ ನಿರ್ಮಿಸಿ ತೆರಳಿದ್ದಾರೆ. ಇದು 1 ರೂ. ನಾಣ್ಯವನ್ನೂ ಸ್ವೀಕರಿಸುವುದಿಲ್ಲ, ಹನಿ ನೀರೂ ಇದರಿಂದ ಬರುವುದಿಲ್ಲ. ಹೊಸ ಯೋಜನೆಗಳು ಪುಸ್ತಕಗಳಿಗೆ ಸೀಮಿತವೇ ಅಥವಾ ಜನರಿಗೂ ಏನಾದರೂ ಉಪಯೋಗ ಸಿಗುತ್ತದೆಯೇ ಎಂದು ಸ್ಥಳೀಯ ರಿಕ್ಷಾ ಚಾಲಕ ಖಲಂಧರ್ ಶಾಫಿ ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ