ತುಂಬೆ ಅಣೆಕಟ್ಟಿನಿಂದ ಹರಿದ ನೀರು
Team Udayavani, Jun 23, 2019, 11:25 AM IST
ಬಂಟ್ವಾಳ: ಜಿಲ್ಲೆಯ ಜೀವ ನದಿ ನೇತ್ರಾವತಿಯಲ್ಲಿ ಹರಿವು ಆರಂಭವಾಗಿದ್ದು ತುಂಬೆ ಅಣೆಕಟ್ಟಿನಲ್ಲಿ 5 ಮೀಟರ್ ಎತ್ತರಕ್ಕೆ ನೀರನ್ನು ಕಾಯ್ದುಕೊಂಡು ಗೇಟ್ ಸಂಖ್ಯೆ 5ನ್ನು ಒಂದಡಿಯಷ್ಟು ಎತ್ತರಕ್ಕೆ ತೆರೆದು ಹೆಚ್ಚುವರಿ ನೀರನ್ನು ಹರಿಯ ಬಿಡಲಾಗಿದೆ.
ಕಳೆದ ವರ್ಷ ಎಪ್ರಿಲ್ನಲ್ಲಿ ಉತ್ತಮ ಮಳೆಯಾಗಿದ್ದು, ಹೆಚ್ಚುವರಿ ನೀರನ್ನು ಮೇ ಅಂತ್ಯದಲ್ಲಿ ಹೊರಗೆ ಬಿಡಲಾಗಿತ್ತು. ಪ್ರಸಕ್ತ ಸಾಲಿನಲ್ಲಿ ಮಳೆಯಾಗದೆ ಎಪ್ರಿಲ್, ಮೇಯಲ್ಲಿ ಗಂಭೀರ ನೀರಿನ ಸಮಸ್ಯೆ ತಲೆದೋರಿತ್ತು. ಜೂ. 10ರ ತನಕವೂ ನದಿ ತುಂಬಿರಲಿಲ್ಲ. ಅನಂತರ ನದಿಯ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆಯಾದ್ದರಿಂದ ನೀರು ಹರಿದುಬಂದಿತ್ತು. ಜೂ. 20ರಂದು ಶಂಭೂರು ಎಎಂಆರ್ ಅಣೆಕಟ್ಟಿನಿಂದಲೂ ನೀರನ್ನು ಹೊರಗೆ ಬಿಡುವ ಮೂಲಕ ವಿದ್ಯುತ್ ಉತ್ಪಾದನೆಗೂ ಕ್ರಮ ಕೈಗೊಳ್ಳಲಾಗಿದೆ.
ತುಂಬೆ ಅಣೆಕಟ್ಟಿನಲ್ಲಿ ನೀರು ನಿಲುಗಡೆ ಮಾಡದೇ ಸರಾಗ ಹರಿಯ ಬಿಡುತ್ತಿದ್ದರೆ ಪ್ರಸ್ತುತ ಬಿದ್ದಿರುವ ಮಳೆಯೂ ಮಂಗಳೂರಿಗೆ ಕುಡಿಯುವ ನೀರು ಒದಗಿಸುವಷ್ಟು ಪ್ರಬಲವಲ್ಲ ಎಂದೇ ಸ್ಥಳೀಯರು ಅಭಿಪ್ರಾಯಪಡುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ