ಬಳ್ಪ ಬೋಗಾಯನ ಕೆರೆಯಲ್ಲಿ ತುಂಬಿದೆ ಹೂಳು

1.5 ಎಕ್ರೆ ವಿಸ್ತೀರ್ಣದ ಕೆರೆಯಲ್ಲಿ ಬತ್ತಿದ ನೀರು

Team Udayavani, Apr 26, 2019, 5:50 AM IST

35

ಬಳ್ಪ ಬೋಗಾಯನ ಕೆರೆಯಲ್ಲಿ ಹೂಳು ತುಂಬಿರುವುದು.

ಗುತ್ತಿಗಾರು: ಇತಿಹಾಸ ಪ್ರಸಿದ್ಧ ಬಳ್ಪದ ಬೋಗಾಯನ ಕೆರೆ ಸಂಪೂರ್ಣ ಬತ್ತಿ ಹೋಗಿದೆ. ಕೆರೆಯ ಹೂಳೆತ್ತಿ ಪುನಶ್ಚೇತನಗೊಳಿಸಲು ಇದು ಸಕಾಲವಾಗಿದೆ. ಸುಮಾರು 1.5 ಎಕ್ರೆ ವಿಸ್ತೀರ್ಣದ ಕೆರೆಯಲ್ಲಿ ಸಂಪೂರ್ಣ ಹೂಳು ತುಂಬಿಕೊಂಡ ಕಾರಣ ನೀರಿಲ್ಲದೆ ಕೆರೆ ಬರಿದಾಗಿದೆ. ಸಂಸದರ ಆದರ್ಶಗ್ರಾಮ ಯೋಜನೆಯಲ್ಲಿ ಅಭಿವೃದ್ಧಿ ಕಾಣುತ್ತಿರುವ ಬಳ್ಪದಲ್ಲಿನ ಬೋಗಾಯನ ಕೆರೆ ಕದಂಬರ ಕಾಲದಲ್ಲಿ ಕಟ್ಟಿಸಲಾದ ಕೆರೆ ಎಂದು ಐತಿಹ್ಯಗಳಿಂದ ತಿಳಿದುಬರುತ್ತಿದೆ. ಈ ಕೆರೆ ಹಿಂದೆ ಹಲವು ಪ್ರದೇಶಗಳಿಗೆ ನೀರುಣಿಸುತ್ತಿತ್ತು. ಕಾಲಾನಂತರದಲ್ಲಿ ಈ ಸರಿಯಾದ ನಿರ್ವಹಣೆಯಿಲ್ಲದೇ ಹೂಳು ತುಂಬಿಕೊಂಡಿದ್ದು, ಇತ್ತೀಚಿನ ವರ್ಷಗಳಲ್ಲಿ ಮಳೆಗಾಲದಲ್ಲಿ ಮಾತ್ರ ನೀರು ತುಂಬಿಕೊಂಡಿರುತ್ತದೆ.

ಪ್ಲಾಸ್ಟಿಕ್‌, ಕಸಕಡ್ಡಿ ತುಂಬಿವೆ
ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿಯ ಪಕ್ಕದಲ್ಲೇ ಕಂಡು ಬರುವ ಬೋಗಾಯನ ಕೆರೆಯಲ್ಲಿ ಪ್ಲಾಸ್ಟಿಕ್‌, ಬಿಯರ್‌ ಬಾಟಲ್‌ ಹಾಗೂ ಇನ್ನಿತರ ಕಸಕಡ್ಡಿಗಳು ತುಂಬಿವೆ. ರಸ್ತೆಯಲ್ಲಿ ಪ್ರಯಾಣಿಸುವ ಜನ ಕೆರೆಗೆ ಕಸಗಳನ್ನು ಎಸೆದು ಹೋಗುತ್ತಿರುವ ಕಾರಣ ಹೂಳು ಹೆಚ್ಚಾಗಿದೆ. ಇದರಿಂದ ಜಲಚರಗಳು ಮತ್ತು ಪ್ರಾಣಿ-ಪಕ್ಷಿಗಳಿಗೂ ತೊಂದರೆಯಾಗುತ್ತಿದೆ.

ಪ್ರವಾಸಿ ತಾಣಕ್ಕೆ ಯೋಜನೆ!
ಬೋಗಾಯನ ಕೆರೆಯನ್ನು ಪ್ರವಾಸಿ ತಾಣವಾಗಿ ಅಭಿವೃದ್ದಿ ಪಡಿಸಬಹುದು. ಇದಕ್ಕಾಗಿ ಮಂಗಳೂರಿನ ತೋಟಗಾರಿಕಾ ಇಲಾಖೆ ಹಾಗೂ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಕೆರೆಯನ್ನು ಪರಿಶೀಲನೆ ನಡೆಸಿದ್ದು, ಕೆರೆಯನ್ನು ಅಭಿವೃದ್ಧಿಪಡಿಸುವ ಯೋಜನೆ ಹಾಕಿಕೊಂಡಿದ್ದಾರೆ. ಅಲ್ಲದೇ ಕೆರೆಯ ಪಕ್ಕದಲ್ಲೇ ಪುಷ್ಟವನವನ್ನೂ ನಿರ್ಮಾಣ ಮಾಡುವ ಯೋಜನೆ ತಯಾರಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಇಲಾಖೆ ಮುತುವರ್ಜಿ ಸಹಿಸಬೇಕು
ಕೆರೆ ಸಂಪೂರ್ಣವಾಗಿ ಬರಿದಾಗಿದ್ದು, ಕೆರೆಯನ್ನು ಅಭಿವೃದ್ಧಿಪಡಿಸಲು ಇದು ಸಕಾಲ. ನೀರಿಲ್ಲದ ಕಾರಣ ಕೆರೆಯ ಹೂಳೆತ್ತುವುದು ಹಾಗೂ ಇನ್ನಿತರ ಅಭಿವೃದ್ಧಿ ಕೆಲಸ-ಕಾರ್ಯಗಳಿಗೆ ಇಲಾಖೆಗಳು ಈಗಲೇ ಮುತುವರ್ಜಿ ವಹಿಸಿದಲ್ಲಿ ಉತ್ತಮ ಎನ್ನುವ ಮಾತುಗಳು ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ.

ಬೋಗರಾಯವರ್ಮನಿಂದ ನಿರ್ಮಾಣ
ಕದಂಬರ ತುಂಡರಸ ಬೋಗರಾಯವರ್ಮ ಕಡಬ ಪ್ರದೇಶವನ್ನು ಆಳುತ್ತಿದ್ದ ಕಾಲದಲ್ಲಿ ಎರಡು ಕೆರೆಗಳು ನಿರ್ಮಾಣಗೊಂಡಿದ್ದವು. ಇದರಲ್ಲಿ ಒಂದು ಕಡಬದಲ್ಲಿ ಇದ್ದರೆ ಮತ್ತೂಂದು ಕೆರೆ ಬಳ್ಪದಲ್ಲಿ ನಿರ್ಮಿಸಲಾಗಿದೆ ಎಂದು ಇತಿಹಾಸ ಹೇಳುತ್ತದೆ. ಬೋಗರಾಯವರ್ಮ ನಿರ್ಮಿಸಿದ ಕಾರಣ ಈ ಕೆರೆ ಬೋಗಾಯನ ಕೆರೆ ಎಂದು ಪ್ರಸಿದ್ಧಿ ಪಡೆದಿದೆ.

ಯೋಜನೆ ತಯಾರು: ಮಾಹಿತಿ
ಕೆರೆ ಅಭಿವೃದ್ಧಿಗೆ ಇಲಾಖೆಗಳಿಂದ ಹಣ ಬಿಡುಗಡೆ ಮಾಡುವ ಯೋಜನೆ ತಯಾರಾಗಿರುವ ಮಾಹಿತಿ ಇದೆ. ಚುನಾವಣೆ ಘೋಷಣೆ ಹಾಗೂ ನೀತಿ ಸಂಹಿತೆ ಇರುವ ಕಾರಣ ಮುಂದಿನ ಕ್ರಮಗಳು ಸ್ಥಗಿತಗೊಂಡಿವೆ.
– ಶ್ಯಾಂಪ್ರಸಾದ್‌ ಎಂ.ಆರ್‌., ಪಿಡಿಒ ಗ್ರಾ.ಪಂ. ಬಳ್ಪ

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.